NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರು ಮುಷ್ಕರ ಮಾಡುವ ಸ್ಥಿತಿಗೆ ತಂದಿರುವುದು ನೀವು-ಬಿಜೆಪಿಯವರು: ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ ಸಂಬಂಧ ಮೊದಲ ಬಾರಿಗೆ ನೌಕರರು ಮುಷ್ಕರ ಮಾಡಿದ್ದು ಬಿಜೆಪಿ ಕಾಲದಲ್ಲಿಯೇ ಎಂಬುದನ್ನು ಮರೆತು ಬಿಟ್ಟರಾ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ.

ಸಾರಿಗೆ ನೌಕರರಿಗೆ ಶೇ.15ರಷ್ಟು ಹೆಚ್ಚಳದ ಹಿಂಬಾಕಿಯನ್ನು ನೀಡಿಲ್ಲ. 38 ತಿಂಗಳ ಹಿಂಬಾಕಿಯನ್ನು ನೀಡುವಂತೆ ಒತ್ತಾಯಿಸಿ ನಿವೃತ್ತ ನೌಕರರು ಪ್ರತಿಭಟಿಸುವ ಸ್ಥಿತಿಯನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಸೃಷ್ಟಿಸಿದೆ ಎಂದು ಬಿಜೆಪಿ ‘X’ನಲ್ಲಿ ಟೀಕಿಸಿತ್ತು. ಅದಕ್ಕೆ ರಾಮಲಿಂಗಾರೆಡ್ಡಿ ಈ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಅವಧಿಯಲ್ಲಿ ವೇತನಕ್ಕಾಗಿ 15 ದಿವಸಗಳ ಸುದೀರ್ಘ ಮುಷ್ಕರ ನಡೆದಿತ್ತು. ಮುಷ್ಕರದಲ್ಲಿ ಪಾಲ್ಗೊಂಡ 3,000 ನೌಕರರನ್ನು ವಜಾ, ಅಮಾನತು, ವರ್ಗಾವಣೆ ಮಾಡಿ, ಹಲವು ಸಿಬ್ಬಂದಿಯ ವಿರುದ್ಧ ಎಫ್‌ಐಆ‌ರ್ ದಾಖಲಿಸಿತ್ತು. ಇಂದಿಗೂ ಅವರು ಕೋರ್ಟ್ ಕಚೇರಿ ಅಲೆಯುತ್ತಿದ್ದಾರೆ. ಸಾರಿಗೆ ನೌಕರರ ವೇತನ ಪರಿಷ್ಕರಣೆ ಮಾಡಿ 38 ತಿಂಗಳ ಬಾಕಿ ಹಣ ಪಾವತಿ ಮಾಡದೇ, ಅದಕ್ಕಾಗಿ ಯಾವುದೇ ಹಣ ಮೀಸಲಿರಿಸದೆ ಸಾರಿಗೆ ನೌಕರರನ್ನು ಬೀದಿಗೆ ತಂದು ಅವರು ಮುಷ್ಕರವನ್ನು ಮಾಡುವ ಹಂತಕ್ಕೆ ತಂದಿರುವುದನ್ನು ಮರೆತು ಬಿಟ್ಟರಾ ಎಂದು ಕೇಳಿದ್ದಾರೆ.

2023ರಲ್ಲಿ ವೇತನ ಹೆಚ್ಚಳ ಮಾಡಿ ನಿವೃತ್ತಿ ಹೊಂದಿದ ನೌಕರರಿಗೆ ಬಾಕಿ ನೀಡದೆ ಹೋಗಿದ್ದೀರಿ. ನಾವು ₹224 ಕೋಟಿ ಪಾವತಿ ಮಾಡಿದ್ದೇವೆ. ನಿಮ್ಮ ಕಾಲದಲ್ಲಿ ಶೂನ್ಯ ನೇಮಕಾತಿ, ಹೊಸ ಬಸ್ ಸೇರ್ಪಡೆ ಇಲ್ಲ. ನೌಕರರಿಗೆ ಅರ್ಧ ವೇತನ. ಈ ರೀತಿ ದುರಾಡಳಿತ ನೀಡಿದವರು ಈಗ ‘X’ ನಲ್ಲಿ ನಮ್ಮನ್ನು ಪ್ರಶ್ನಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ನಮ್ಮ ಕಾಲದಲ್ಲಿ ಬರೋಬ್ಬರಿ 10,000 ಹುದ್ದೆಗಳಿಗೆ ನೇಮಕಾತಿ, 7,800 ಹೊಸ ಬಸ್ಸುಗಳು, ಸಾರಿಗೆ ನೌಕರರಿಗೆ ಪ್ರತಿ ತಿಂಗಳ ಒಂದನೇ ತಾರೀಖಿನಂದು ಪೂರ್ತಿ ಸಂಬಳ ಪಾವತಿ, ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಆಗಿದೆ. ನಿಮ್ಮ ಅಧಿಕಾರದ ಅವಧಿಯಲ್ಲಿ ಕಾಳಜಿ ವಹಿಸದೇ ಈಗ ಕಾಳಜಿಯ ನಾಟಕ ಮಾಡಲು ನಾಚಿಕೆಯಾಗುವುದಿಲ್ಲವೇ ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಾಡುತ್ತಿರುವ ಪಾದಯಾತ್ರೆಗೂ ಅಡ್ಡಿ ಮಾಡುತ್ತಿರುವ ಜಂಟಿ ಸಂಘಟನೆ... ಸಾವಿರಾರು ಜನರನ್ನು ಅವರ ಗಮ್ಯಸ್ಥಾನಕ್ಕೆ ತಲುಪಿಸಲು ಆರೋಗ್ಯ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಸಾರಿಗೆ ನೌಕರರು... ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ