NEWSನಮ್ಮರಾಜ್ಯಲೇಖನಗಳು

ವಾಟ್ಸ್‌ಆಪ್‌ನಲ್ಲಿ ಇನ್ನು ಮುಂದೆ ಕಾಲ್​ ಶೆಡ್ಯೂಲ್​ ಮಾಡಿಯೂ ಇಟ್ಟುಕೊಳ್ಳಬಹುದು

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಅಲ್ಪಸ್ವಲ್ಪ ಓದು ಬರಹ ಬರುವವರು ಸೇರಿದಂತೆ ಎಲ್ಲರನ್ನು ತನ್ನತ್ತ ಸೆಳೆದುಕೊಂಡಿರುವ ಜನಪ್ರಿ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್‌ಆಪ್​ ಇತ್ತೀಚೆಗಂತೂ ಹೊಸ ಫೀಚರ್ಸ್​ಗಳನ್ನು ಪರಿಚಯಿಸುವ ಮೂಲಕ ಇತರ ಸಾಮಾಜಿಕ ಜಾಲತಾಣಗಳನ್ನು ಹಿಂದಿಕ್ಕುವುದರಲ್ಲಿ ಸದಾ ಮುಂದಿದೆ ಎಂಬುದನ್ನು ತೋರಿಸುತ್ತಲೇ ಇದೆ.

ತನ್ನ ಬಳಕೆದಾರರಿಗಾಗಿ ಕಳೆದ ವರ್ಷ ಹಲವಾರು ಫೀಚರ್ಸ್​​ಗಳನ್ನು ಹೊರತಂದಿದ್ದಲ್ಲೆ ಈಗ ಮತ್ತೆ ಅದೇ ರೀತಿಯಲ್ಲಿ 2023ರಲ್ಲೂ ಹಲವಾರು ನವೀಕರಣಗಳನ್ನು ಮಾಡುತ್ತಿದ್ದು, ಈ ವರ್ಷದ ಆರಂಭದಿಂದಲೇ WhatsApp ತನ್ನಲ್ಲಿನ ಕಾರ್ಯವೈಖರಿಯಲ್ಲಿ ಬದಲಾವಣೆಯನ್ನು ತರುತ್ತಲೇ ಇದೆ.

ಕೆಲದಿನಗಳ ಹಿಂದಷ್ಟೇ ವಾಟ್ಸ್‌ಆಪ್​ ಸ್ಟೇಟಸ್​ನಲ್ಲಿ ವಾಯ್ಸ್ ಮೆಸೇಜ್ ಶೇರ್ ಮಾಡುವ ಫೀಚರ್ ಬಿಡುಗಡೆ ಮಾಡಿತ್ತು. ತದನಂತರದಲ್ಲಿ ಬ್ಲಾಕ್​ ಶಾರ್ಟ್​ಕಟ್ (Block Shortcut)​ ಮಾಡುವ ಫೀಚರ್ ಪರಿಚಯಿಸಿತ್ತು. ಇದೀಗ ಮತ್ತೆ ಹೊ ಅಪ್ಡೇಟ್​ ಬಿಡುಗಡೆ ಮಾಡಿದೆ.

ವಾಟ್ಸ್‌ಆಪ್​ ಸದ್ಯ ಪರಿಚಯಿಸುತ್ತಿರುವ ಈ ಫೀಚರ್ ಇದುವರೆಗೆ ಬೇರೆ ಯಾವುದೇ ಅಪ್ಲಿಕೇಶನ್​ಗಳಲ್ಲೂ ಇಲ್ಲ. ಹೀಗಾಗಿ ಈ ಪರಿಚಯಿಸುತ್ತಿರುವ ಈ ಅಪ್ಲಿಕೇಶನ್‌ನಿಂದಾಗಿ ಇನ್ಮುಂದೆ ವಾಟ್ಸ್‌ಆಪ್​ನಲ್ಲಿ ಕಾಲ್​ ಶೆಡ್ಯೂಲ್​ ಮಾಡಿಯೂ ಇಟ್ಟುಕೊಳ್ಳಬಹುದಾಗಿದೆಯಂತೆ.

ವಾಟ್ಸ್‌ಆಪ್‌ನಲ್ಲಿ ಈಗಾಗಲೇ ವಾಯ್ಸ್‌ ಹಾಗೂ ವಿಡಿಯೋ ಕರೆ ಮಾಡಲು ಅವಕಾಶ ನೀಡಲಾಗಿದೆ. ಅದಾಗ್ಯೂ ಈ ವಿಭಾಗದಲ್ಲಿ ಇನ್ನಷ್ಟು ಹೊಸ ಸೌಲಭ್ಯ ಕಲ್ಪಿಸಿಕೊಡಲು ಮುಂದಾಗಿರುವ ವಾಟ್ಸ್‌ಆಪ್ ಬಳಕೆದಾರರಿಗೆ ಮುಂಚಿತವಾಗಿಯೇ ಕರೆಯನ್ನು ನಿಗದಿಪಡಿಸುವ ಆಯ್ಕೆಯ ಫೀಚರ್ಸ್‌ ನೀಡುವಲ್ಲಿ ಕಾರ್ಯನಿರ್ವಹಿಸಲಿದೆ ಎಂದು ತಿಳಿದುಬಂದಿದೆ.

ಈ ಸೌಲಭ್ಯ ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿರಲಿದ್ದು, ಈ ಮೂಲಕ ಬೇಕಾದವರ ಜತೆಗೆ ಸಮಯಕ್ಕಿಂತ ಮುಂಚಿತವಾಗಿ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಕರೆಯನ್ನು ಯೋಜಿಸಬಹುದಾಗಿದೆ. ಈ ಮೂಲಕ ಇನ್ಮುಂದೆ ಬಳಕೆದಾರರು ಯಾವುದೇ ಕಾಲ್​ಗಳನ್ನು ವಾಟ್ಸ್‌ಆಪ್​ನಲ್ಲಿ ಮಿಸ್​ ಮಾಡಿಕೊಳ್ಳುವುದಿಲ್ಲ ಎಂದು ಕಂಪೆನಿ ಹೇಳಿದೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ