NEWSನಮ್ಮರಾಜ್ಯರಾಜಕೀಯ

ಅಂಗವಿಕಲರ ಬಗ್ಗೆ ಹೇಳಿಕೆ: ಮುಖ್ಯಮಂತ್ರಿ ಚಂದ್ರು ವಿಷಾದ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚುನಾವಣೆಯಲ್ಲಿ ಉತ್ತಮ ಅಭ್ಯರ್ಥಿಯ ಆಯ್ಕೆಗೆ ಸಂಬಂಧಿಸಿ ಮಾತನಾಡುವಾಗ ಅಂಗವಿಕಲರ ವಿಷಯ ಪ್ರಸ್ತಾಪಿಸಿದ್ದಕ್ಕೆ ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಹಾಗೂ ಜನಸಂಪರ್ಕ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಚಂದ್ರು, “ಫೆಬ್ರವರಿ 1ರಂದು ಬಳ್ಳಾರಿ ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ತರಳಬಾಳು ಹುಣ್ಣಿಮೆ ಉತ್ಸವದಲ್ಲಿ ನಾನು ಮಾಡಿದ ಭಾಷಣ ಉದ್ದೇಶವು ಜನರು ಉತ್ತಮ ಅಭ್ಯರ್ಥಿಗೆ ಮತ ಹಾಕಬೇಕು ಹಾಗೂ ಈ ಮೂಲಕ ಪ್ರಜಾಪ್ರಭುತ್ವದ ಆಶಯ ಸಾಕಾರಗೊಳ್ಳಬೇಕು ಎಂಬುದಾಗಿತ್ತು.

ಮೂರು ದಶಕಗಳ ಹಿಂದೆ ಶೂಟಿಂಗ್‌ ಸಮಯದಲ್ಲಿ, ನನ್ನ ಬಲ ರೆಟಿನಗೆ ಬದಲಾಯಿಸಲಾಗದ ಹಾನಿಯನ್ನು ಅನುಭವಿಸಿದೆ. ಅದು ನನ್ನನ್ನು ಬಲಗಣ್ಣಿನಲ್ಲಿ ಕುರುಡನನ್ನಾಗಿ ಮಾಡಿದೆ ಎಂದು ಅನೇಕರಿಗೆ ತಿಳಿದಿಲ್ಲ. ಅಂಗವಿಕಲರ ಕಾಯ್ದೆಯಡಿ ನಾನೇ ವಿಕಲಚೇತನ.

ಹೀಗಾಗಿ ಈ ವಿಷಯದಲ್ಲಿ ನಾನು ಸಮುದಾಯವನ್ನು ಅವಹೇಳನ ಮಾಡುವ ಕಾಮೆಂಟ್‌ಗಳನ್ನು ಮಾಡುವ ಪ್ರಶ್ನೆಯೇ ಇಲ್ಲ. ಒಂದು ವೇಳೆ, ಯಾರೊಬ್ಬರ ಭಾವನೆಗಳನ್ನು ನೋಯಿಸಿದ್ದರೆ, ನಾನು ವಿಷಾದಿಸುತ್ತೇನೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ