NEWSನಮ್ಮಜಿಲ್ಲೆನಮ್ಮರಾಜ್ಯ

ಅತೀ ಶೀಘ್ರದಲ್ಲೇ ಡಿಪೋ, ತಾಲೂಕು, ನಗರ ಕೇಂದ್ರಗಳಲ್ಲಿ ಸಾರಿಗೆ ನೌಕರರ ಹೋರಾಟ – ಸಿದ್ಧತೆಯಲ್ಲಿ ಸಮಾನ ಮನಸ್ಕರ ವೇದಿಕೆ

ನೌಕರರಿಗೆ ಸಾರಿಗೆ ಸಂಸ್ಥೆಗಳ ಕೆಲ ಅಧಿಕಾರಿಗಳಿಂದಲೂ ಸಾಥ್‌ l ಹೋರಾಟದ ರೂಪುರೇಷೆ ಬಗ್ಗೆಯೂ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಕಳೆದ ಮೂರು ವರ್ಷಗಳಿಂದ ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸರ್ಕಾರ ಮತ್ತು ಸಾರಿಗೆಯ ನಾಲ್ಕೂ ನಿಗಮಗಳ ಆಡಳಿತ ಮಂಡಳಿಗೆ ನೂರಾರು ಮನವಿ ಪತ್ರಗಳನ್ನು ಸಲ್ಲಿಸಿದೆ.

ಆದರೆ, ಈವರೆಗೂ ಸರ್ಕಾರವಾಗಲಿ ಇಲ್ಲ ಆಡಳಿತ ಮಂಡಳಿಯಾಗಲೀ ಯಾವುದೇ ಸ್ಪಷ್ಟ ತೀರ್ಮಾನವನ್ನು ತೆಗೆದುಕೊಂಡಿಲ್ಲ. ಹೀಗಾಗಿ ಕೂಟ ಮತ್ತು ಸಮಾನ ಮನಸ್ಕರ ವೇದಿಕೆ ವತಿಯಿಂದ ಮತ್ತೊಂದು ದೊಡ್ಡ ಹೋರಾಟಕ್ಕೆ ಸಜ್ಜಾಗುತ್ತಿದ್ದು, ಅದು ಸಾರಿಗೆ ನಾಲ್ಕೂ ನಿಗಮಗಳ ಎಲ್ಲ ಘಟಕ ಮಟ್ಟದಲ್ಲೂ ಜತೆಗೆ ತಾಲೂಕು ಮತ್ತು ನಗರ ಕೇಂದ್ರಗಳಲ್ಲೂ ನಡೆಸಲು ಅತೀ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ.

ಇನ್ನು ಈ ಹೋರಾಟ ಹೇಗಿರಲಿದೆ ಎಂಬುದರ ಬಗ್ಗೆ ಕೂಟದ ಪದಾಧಿಕಾರಿಗಳು ಮತ್ತು ಸಮಾನ ಮನಸ್ಕರ ವೇದಿಕೆಯ ಪ್ರಮುಖರು ಚರ್ಚೆ ನಡೆಸುತ್ತಿದ್ದು, ಎಲ್ಲರೂ ಸೇರಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಈವರೆಗೂ ಸಾರಿಗೆ ಸಚಿವರು ಸೇರಿದಂತೆ ಸರ್ಕಾರದ ಬಹುತೇಕ ಎಲ್ಲ ಸಚಿವರಿಗೂ ಬೇಡಿಕೆ ಈಡೇರಿಸುವಂತೆ ಒತ್ತಾಯ ಮಾಡಿ ಮನವಿಗಳನ್ನು ಸಲ್ಲಿಸಲಾಗಿದೆ. ಅದರ ಜತೆಗೆ ನಾಲ್ಕೂ ನಿಗಮಗಳ ಎಂಡಿಗಳಿಗೂ ಮನವಿ ಮಾಡಲಾಗಿದೆ. ಆದರೆ ಈವರೆಗೂ ಪ್ರಮುಖ ಬೇಡಿಕೆಯಾದ ಸರಿ ಸಮಾನ ವೇತನದ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ.

ಹೀಗಾಗಿ ಡಿಪೋ ಮಟ್ಟದಲ್ಲಿ ಮತ್ತು ರಾಜ್ಯದ ಎಲ್ಲ ತಾಲೂಕು, ನಗರ ಕೇಂದ್ರ ಭಾಗಗಳಲ್ಲಿ ನೌಕರರು ಯಾವ ರೀತಿ ಹೋರಾಟ ಮಾಡಬೇಕು ಎಂಬುದರ ಬಗ್ಗೆ ಕೂಟ ಮತ್ತು ಸಮಾನ ಮನಸ್ಕರ ವೇದಿಕೆಯಿಂದ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನು ನೌಕರರು ಕೂಡ ಸಮಾನ ಮನಸ್ಕರ ವೇದಿಕೆ ರೂಪಿಸಲು ಹೊರಟಿರುವ ಹೋರಾಟದ ಯೋಜನೆಗೆ ಬಹುತೇ ಸಾಥ್‌ ನೀಡಲು ಅವರೂ ಸಜ್ಜಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈವರೆಗೂ ಸರ್ಕಾರ, ಸಚಿವರು ಎಂಡಿಗಳು ಉನ್ನತ ಅಧಿಕಾರಿಗಳು, ಆಡಳಿತ ಮಂಡಳಿಗಳ ಅಧ್ಯಕ್ಷರ ಬಳಿಗೆ ಹೋಗಲು ಚಪ್ಪಲಿ ಸವೆಸಿ ಬೇಸತ್ತಿರುವ ನೌಕರರು ತಮ್ಮ ತಮ್ಮ ಡಿಪೋ ಮಟ್ಟದಲ್ಲೇ ಹೋರಾಟ ಮಾಡುವುದಕ್ಕೆ ಸಜ್ಜಾಗುತ್ತಿದ್ದಾರೆ.

ಇನ್ನು ಹೋರಾಟದಿಂದ ಮುಂದಿನ ದಿನಗಳಲ್ಲಿ ಸಮಸ್ತ ಸಾರಿಗೆ ನೌಕರರಿಗಷ್ಟೇ ಅಲ್ಲ ಅಧಿಕಾರಿಗಳಿಗೂ ಇದರ ಫಲ ಸಿಗಲಿದ್ದು ಅದರ ಪ್ರಯೋಜನ ಪಡೆದುಕೊಳ್ಳಲು ಕೆಲ ಅಧಿಕಾರಿಗಳು ಕೂಡ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಈ ಹೋರಾಟವು ಇದೇ 19 ರಿಂದ ಬೆಳಗಾವಿಯಲ್ಲಿ ಆರಂಭವಾಗುತ್ತಿರುವ ಚಳಿಗಾಲದ ವಿಧಾನಸಭೆ ಅಧಿವೇಶನಕ್ಕೂ ಮುನ್ನ ಸಿದ್ದವಾಗಲಿದ್ದು, ಅಧಿವೇಶನದ ವೇಳೆಗೆ ಎಲ್ಲ ಡಿಪೋ ಮತ್ತು ತಾಲೂಕು ನಗರ ಕೇಂದ್ರಗಳಲ್ಲಿ ಹೇಗೆ ತೀವ್ರಗೊಳಿಸಬೇಕು  ಎಂಬುದರ ಬಗ್ಗೆಯೂ ಚರ್ಚೆ  ನಡೆಸಲಾಗುತ್ತಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ