NEWSದೇಶ-ವಿದೇಶನಮ್ಮರಾಜ್ಯ

ಅಧಿಕಾರಿಗಳ ಬಗ್ಗು ಬಡಿಯಲು “ದಂಡಂ ದಶಗುಣಂ”: EPS ಪಿಂಚಣಿದಾರರ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ
  • ಲಾಲ್‌ಬಾಗ್‌ ಆವರಣದಲ್ಲಿ ಇಪಿಎಸ್ ಪಿಂಚಣಿದಾರರ 83ನೇ ಮಾಸಿಕ ಸಭೆ ಯಶಸ್ವಿ

ಬೆಂಗಳೂರು: ಬಹು ನಿರೀಕ್ಷಿತ 236ನೇ ಸಿಬಿಟಿ ಸಭೆ ನವೆಂಬರ್ 30ರಂದು ದೆಹಲಿಯಲ್ಲಿ ಜರುಗಿದ್ದು, ಈ ಸಭೆಯಲ್ಲಿ ಇಪಿಎಸ್ ನಿವೃತ್ತರಿಗೆ ಸಂಬಂಧಿಸಿದಂತೆ ಕೆಲವೊಂದು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಕೆಎಸ್‌ಆರ್‌ಟಿಸಿ & ಬಿಎಂಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

ಲಾಲ್‌ಬಾಗ್‌ ಆವರಣದಲ್ಲಿ ಡಿ.1ರಂದು ನಡೆದ ಇಪಿಎಸ್ ಪಿಂಚಣಿದಾರರ 83ನೇ ಮಾಸಿಕ ಸಭೆಯಲ್ಲಿ ಮಾತನಾಡಿದರು.

ಸೆಪ್ಟಂಬರ್ 1, 2014ರ ನಂತರ ನಿವೃತ್ತರದ ಎಲ್ಲ ಪಿಂಚಣಿದಾರಿಗೆ ಅಧಿಕ ಪಿಂಚಣಿ ನೀಡುವ ಸಲುವಾಗಿ ಆರ್ಥಿಕ ಸೌಲಭ್ಯಗಳ ಕ್ರೋಡೀಕರಣವನ್ನು ಹೇಗೆ ಕೈಗೊಳ್ಳಬೇಕು ಎಂಬ ಬಗ್ಗೆ ಅಂದಿನ ಸಿಬಿಟಿ ಸಭೆಯಲ್ಲಿ ದೃಢಸಂಕಲ್ಪ ಮಾಡಲಾಗಿದೆ ಎಂದು ವಿವರಿಸಿದರು.

ಮುಂದುವರೆದಂತೆ ರಾಷ್ಟ್ರೀಯ ಸಂಘರ್ಷ ಸಮಿತಿ ಮುಖಂಡರು, ನವಂಬರ್ 29ರಂದು, ಕೇಂದ್ರ ಸರ್ಕಾರದ ಉನ್ನತ ಮಟ್ಟದ ಜನ ಪ್ರತಿನಿಧಿಗಳನ್ನು ಭೇಟಿ ಮಾಡಿ, ಕನಿಷ್ಠ ಹೆಚ್ಚುವರಿ ಪಿಂಚಣಿ ಬಗ್ಗೆ ಚರ್ಚಿಸಿದ್ದು, ಮಾತುಕತೆ ಫಲಪ್ರದವಾಗಿದೆ ಎಂದು ತಿಳಿಸಿದರು.

ದಿನಕಳೆದಂತೆ ನಿವೃತ್ತರ ಸಂಖ್ಯೆ ಅಧಿಕವಾಗುತ್ತಿದ್ದು, ಇಪಿಎಫ್ಒ ಖಾತೆಯಲ್ಲಿ ಲಕ್ಷಾಂತರ ಕೋಟಿ ಕಾರ್ಪಸ್ ಹಣ ಇದೆ. ನಮ್ಮ ಕನಿಷ್ಠ ಹೆಚ್ಚುವರಿ ಪಿಂಚಣಿ ಬೇಡಿಕೆ ಈಡೇರಿಸಲು, ಕೇಂದ್ರ ಸರ್ಕಾರಕ್ಕೆ ಯಾವುದೇ ಹಣಕಾಸಿನ ಮುಗ್ಗಟ್ಟು ಇಲ್ಲ, ಇಚ್ಛಾಶಕ್ತಿಯಕೊರತೆ ಇದೆ ಎಂದು ಪ್ರಧಾನ ಕಾರ್ಯದರ್ಶಿ ಸುಬ್ಬಣ್ಣ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ದೇಶದಲ್ಲಿ ಇಪಿಎಸ್ ನಿವೃತ್ತರು ಪಡೆಯುತ್ತಿರುವ ಸರಾಸರಿ ಪಿಂಚಣಿ ರೂ.1350 ಇದ್ದು, ಕೇಂದ್ರ ಸರ್ಕಾರ ಈ ಕೂಡಲೇ ದೃಢ ನಿರ್ಧಾರ ಕೈಗೊಂಡು, ಅಶೋಕ್ ರಾಹುತ್ ಅವರು ಪ್ರತಿಪಾದಿಸುತ್ತಿರುವ ಕನಿಷ್ಠ ಹೆಚ್ಚುವರಿ ಪಿಂಚಣಿ ನಿಗದಿಪಡಿಸಬೇಕೆಂದು ಆಗ್ರಹಿಸಿದರು.

ನಾವು ನೀಡುವ ಮನವಿ ಪತ್ರಗಳಿಗೆ ಅಧಿಕಾರಿಗಳು ಬಗ್ಗುವುದಿಲ್ಲ, ಕೇಂದ್ರ ಸರ್ಕಾರ ಹಾಗೂ ಇಪಿಎಫ್ಒ ಅಧಿಕಾರಿಗಳ ವಿರುದ್ಧ ನಾವು ನಡೆಸುವ ಹೋರಾಟವನ್ನು ಬದಲಿಸಿಕೊಳ್ಳಬೇಕು ಅಧಿಕಾರಿಗಳನ್ನು ಬಗ್ಗು ಬಡಿಯಲು “ದಂಡಂ ದಶಗುಣಂ” ಕ್ರಮವನ್ನು ಅನುಸರಿಸಬೇಕು ಎಂದು ಚಿಕ್ಕಬಳ್ಳಾಪುರ ಕೆಎಸ್ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಬ್ರಹ್ಮಚಾರಿ ಹೇಳಿದರು.

ನಮ್ಮ ಸಂಘದ ನಾಗರಾಜು, ಮನೋಹರ್ ಹಾಗೂ ಕೃಷ್ಣಮೂರ್ತಿ ಸಭೆಯ ನಿರ್ವಹಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟರು. ಡೋಲಪ್ಪನವರ ವಂದನಾರ್ಪಣೆಯೊಂದಿಗೆ ಸಭೆ ಮುಕ್ತಾಯವಾಯಿತು.

ಇದಕ್ಕೂ ಮೊದಲು ಮಾಸಿಕ ಸಭೆಯ ದಿನದಿಂದಲೇ ಬೆಂಗಳೂರಿನಲ್ಲಿ ವಿಪರೀತ ಮಳೆಯಾಗಿದ್ದು, ನಾವು ಸೇವೆಯಲ್ಲಿರುವಾಗ ಮಳೆಬಿಸಿಲೆನ್ನದೆ, ಹಗಲಿರುಳು ಎನ್ನದೆ, ಕರ್ತವ್ಯ ನಿರ್ವಹಿಸಿದ ದಿನಗಳನ್ನು ಮೆಲಕು ಹಾಕುತ್ತಾ, ನಿವೃತ್ತರು ಲಾಲ್ ಬಾಗ್ ಆವರಣದಲ್ಲಿ ವಾಯು ವಿಹಾರ ನಡೆಸುತ್ತಾ, ತಮ್ಮ ಸಹೋದ್ಯೋಗಳನ್ನು ಕಂಡೊಡನೆ ಎಲ್ಲಿಲ್ಲದ ನವೊಲ್ಲಾಸದಿಂದ, ಉಭಯ ಕುಶಲೊಪರಿ ವಿಚಾರಿಸುತ್ತಿದ್ದುದು, ಸಾಮಾನ್ಯ ದೃಶ್ಯಾವಳಿಯಾಗಿತ್ತು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ