NEWSನಮ್ಮರಾಜ್ಯರಾಜಕೀಯ

ಅಪ್ಪಚ್ಚು ರಂಜನ್‌ಗೆ ಸಚಿವ ಸ್ಥಾನ ಕೊಡಲು ಆಗ್ರಹಿಸಿ ‘ಬೆಂಗಳೂರು ಚಲೋ’ ಪ್ರತಿಭಟನಾ ರ‍್ಯಾಲಿ

ವಿಜಯಪಥ ಸಮಗ್ರ ಸುದ್ದಿ

ಕೊಡಗು: ಶಾಸಕ ಅಪ್ಪಚ್ಚು ರಂಜನ್‌ಗೆ ಸಚಿವ ಸ್ಥಾನ ಕೊಡಲು ಆಗ್ರಹಿಸಿ ಅವರ ನೂರಾರು ಬೆಂಬಲಿಗರು ‘ಬೆಂಗಳೂರು ಚಲೋ’ ಪ್ರತಿಭಟನಾ ರ‍್ಯಾಲಿ ನಡೆಸಿದರು.

ಸುಂಟಿಕೊಪ್ಪದಿಂದ ಆರಂಭವಾದ ಈ ರ‍್ಯಾಲಿ ಸೋಮವಾರ ಪೇಟೆ, ಕುಶಾಲನಗರ ಮತ್ತಿತರ ಕಡೆಗಳಿಂದ ಟೆಂಪೋ ಟ್ರಾವಲರ್ಸ್ ಸೇರಿದಂತೆ ಸುಮಾರು 130 ವಾಹನಗಳು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನಕ್ಕೆ ಆಗಮಿಸಿತು.

ಪ್ರತಿಭಟನಾಕಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಬೇಕೆಂದು ಒತ್ತಾಯಿಸಿದಾಗ ಪೊಲೀಸರು ಬ್ಯಾರಿಕೇಡ್ ಮೂಲಕ ಅವರನ್ನು ತಡೆದರು. ಆದಾಗ್ಯೂ, ಸ್ವಲ್ಪ ಸಮಯದ ನಂತರ ಕೆಲ ಪ್ರತಿಭಟನಾಕಾರರನ್ನು ಮುಖ್ಯಮಂತ್ರಿ ಜತೆಗೆ ಮಾತನಾಡಲು ಅವಕಾಶ ಮಾಡಿಕೊಡಲಾಯಿತು.

ಪ್ರತಿಭಟನಾಕಾರರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ.

ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ ಅಪ್ಪಚ್ಚು ರಂಜನ್ ಬೆಂಬಲಿಗರು, ಸಂಪುಟದಲ್ಲಿ ತಮ್ಮ ನೆಚ್ಚಿನ ಶಾಸಕರಿಗೆ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು. ಐದು ಬಾರಿ ಶಾಸಕರಾಗಿದ್ದರೂ ಸಚಿವ ಸ್ಥಾನ ನೀಡದಂತೆ ವಂಚಿಸಲಾಗಿದೆ. ಬೇರೆ ಜಿಲ್ಲೆಯಿಂದ ಬಂದವರಿಗೆ ಉಸ್ತುವಾರಿ ನೀಡುವುದರಿಂದ ಏನು ಪ್ರಯೋಜನವಾಗಲಿದೆ ಎಂದು ಪ್ರಶ್ನಿಸಿದ್ದರು.

ಜಿಲ್ಲೆಯಲ್ಲಿ ಪಕ್ಷದ ಬೆಳವಣಿಗೆಗಾಗಿ ಕಳೆದ 30 ವರ್ಷಗಳಿಂದ ಅಪ್ಪಚ್ಚು ರಂಜನ್ ಕೆಲಸ ಮಾಡುತ್ತಿದ್ದಾರೆ. ಟಿಪ್ಪು ಜಯಂತಿ ವಿರುದ್ಧ ಹೋರಾಡಿ ಪ್ರಯತ್ನದ ಫಲವಾಗಿ ಶಾಲಾ ಪಠ್ಯ ಪುಸ್ತಕಗಳಲ್ಲಿ ಟಿಪ್ಪು ಪಾಠ ಇಲ್ಲದಂತಾಗಿದೆ. ರಂಜನ್‌ಗೆ ಸಚಿವ ಸ್ಥಾನ ನಿರಾಕರಿಸಲಾಗಿದ್ದರೂ, ಟಿಪ್ಪು ಜಯಂತಿಗೆ ಆಶ್ವಾಸನೆ ನೀಡಿದ ಸಚಿವ ಆನಂದ್ ಸಿಂಗ್‌ಗೆ ಸಂಪುಟ ಸ್ಥಾನವನ್ನು ನೀಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು