NEWSನಮ್ಮಜಿಲ್ಲೆ

ಅಬಕಾರಿ ಸನ್ನದ್ದು ಬಾರ್, ರೆಸ್ಟೋರೆಂಟ್ ಗ‌ಳ ವಿರುದ್ಧ FIR 

577 ದಾಳಿಗಳನ್ನು ನಡೆಸಿ, 44 ಅಬಕಾರಿ ಮೊಕದ್ದಮೆ ದಾಖಲು l 29 ಮಂದಿ ಬಂಧನ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಜಿಲ್ಲೆಯಲ್ಲಿ ಕೋವಿಡ್-19 ಲಾಕ್ಡೌನ್ ಹಿನ್ನೆಲೆಯಲ್ಲಿ ಮಾ. 24 ರಿಂದ  ಏ.14 ರವರೆಗೆ ಮದ್ಯದ ದಾಸ್ತಾನು ಮಾರಾಟ ನಿಷೇಧ ಮಾಡಿ ಮದ್ಯದಂಗಡಿ ಮುಚ್ಚಲಾಗಿತ್ತು. ಆದರೂ ಅಕ್ರಮವಾಗಿ ತೆರೆದಿದ್ದ ಅಂಗಡಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ .

ಜಿಲ್ಲೆಯ ತುಮಕೂರು ತಾಲೂಕು ಮಲ್ಲಸಂದ್ರದಲ್ಲಿರುವ ಗಣೇಶ್ ಬಾರ್ ಅಂಡ್ ರೆಸ್ಟೋರೆಂಟ್, ಚಿಕ್ಕನಾಯಕನಹಳ್ಳಿ ತಾಲೂಕು ತಿಮ್ಮನಹಳ್ಳಿಯಲ್ಲಿರುವ ಹನುಮನ್ ವೈನ್ಸ್, ಕುಣಿಗಲ್ ತಾಲೂಕು ಉಜನಿ ಗ್ರಾಮದಲ್ಲಿರುವ ವೆಂಕಟೇಶ್ವರ ಬಾರ್ ಅಂಡ್ ರೆಸ್ಟೋರೆಂಟ್ ಸನ್ನದ್ದುಗಳ ಮಾಲೀಕರು ಸನ್ನದ್ದು ಷರತ್ತು ಉಲ್ಲಂಘಿಸಿ ದುರುಪಯೋಗ ಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್  ಈ ಸನ್ನದ್ದುಗಳನ್ನು ಅಮಾನತು ಗೊಳಿಸಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಟ ಕಳ್ಳಬಟ್ಟಿ, ನಕಲಿ ಮದ್ಯ, ಸೇಂದಿ ಮುಂತಾದ ಅಬಕಾರಿ ಅಕ್ರಮಗಳ ನಡೆಯದಂತೆ ಕಟ್ಟೇಚ್ಚರವಹಿಸಿದ್ದು, ವಲಯಮಟ್ಟದಲ್ಲಿ ಹಗಲು ಮತ್ತು ರಾತ್ರಿ ಪಾಳಿ ಗಸ್ತು ತಂಡಗಳನ್ನು ರಚಿಸಿ, ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಅಬಕಾರಿ ಇಲಾಖೆಯ ಸತತ ಕಾರ್ಯಚಾರಣೆ ಮೂಲಕ 577 ದಾಳಿಗಳನ್ನು ನಡೆಸಿ, 44 ಅಬಕಾರಿ ಮೊಕದ್ದಮೆಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. 29 ಆರೋಪಿಗಳನ್ನು ಬಂಧಿಸಿ, 2344 ಲೀಟರ್ ಮದ್ಯ, 391 ಲೀ. ಬಿಯರ್, 1 ಕಾರು, 3 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ 3 ಮೆಥನಾಲ್ ಘಟಕಗಳಿದ್ದು, ಈ ಘಟಕಗಳ ಮೇಲೆ ತೀವ್ರ ನಿಗಾವಣೆ ವಹಿಸಲಾಗಿದೆ. ಮದ್ಯ ವ್ಯಸನಿಗಳು ಮೆಥನಾಲ್ ಸೇವಿಸಿ ಅಪಾರ ಸಾವು-ನೋವು ಸಂಭವಿಸುವ ಹಿನ್ನೆಲೆಯಲ್ಲಿ ಈ ಘಟಕಗಳಿಗೆ ಗಸ್ತಿನಲ್ಲಿರುವ ತಂಡ ಭೇಟಿ ನೀಡಿ, ಪರಿಶೀಲಿಸಿ, ದುರ್ಬಳಕೆ ಮಾಡದಂತೆ ಕಟ್ಟೇಚ್ಚರವಹಿಸಲಾಗಿದೆ. ಅಲ್ಲದೇ ಜಿಲ್ಲೆಯ ಹೆದ್ದಾರಿಗಳ ಮೂಲಕ ಹಾದು ಹೋಗುವ ಮೆಥನಾಲ್ ತುಂಬಿದ ಟ್ಯಾಂಕರ್ಗಳನ್ನು ಜಿಲ್ಲೆಯ ಹಿರಿಯೂರು ಮತ್ತು ಶಿರಾ ಸರಹದ್ದಿನಿಂದ ತುಮಕೂರು ನೆಲಮಂಗಲ ಸರಹದ್ದಿನವರೆಗೆ ಗಸ್ತಿನಲ್ಲಿರುವ ಅಬಕಾರಿ ತಂಡಗಳು ಎಸ್ಕಾರ್ಟ್ ಮೂಲಕ ಜಿಲ್ಲೆಯ ಸರಹದ್ದು ದಾಟಿಸುವ ಕೆಲಸ ಮಾಡುತ್ತಿವೆ.

ಕೋವಿಡ್-19 ಹರಡದಂತೆ ತಡೆಗಟ್ಟುವ ಸಲುವಾಗಿ ಅಬಕಾರಿ ಇಲಾಖೆ ವತಿಯಿಂದ ಹ್ಯಾಂಡ್/ಸ್ಯಾನಿಟೈಜರ್ಗಳನ್ನು ಜಿಲ್ಲೆಯ ಡಿಸ್ಟಿಲರಿಗಳಲ್ಲಿ ಉತ್ಪಾದಿಸಿ, 800 ಲೀಟರ್ ತುಮಕೂರು ಜಿಲ್ಲಾಡಳಿತಕ್ಕೆ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ತಲಾ 500 ಲೀಟರ್ ಹಾಗೂ ಶಿವಮೊಗ್ಗ ಜಿಲ್ಲಾಡಳಿತಕ್ಕೆ 300 ಲೀಟರ್ ಸ್ಯಾನಿಟೈಜರ್ಗಳನ್ನು ಪೂರೈಸಲಾಗಿದೆ.

ಜಿಲ್ಲಾ ಅಬಕಾರಿ ಉಪ ಆಯುಕ್ತರ ಕಚೇರಿಯಲ್ಲಿ ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದ್ದು, ದೂರವಾಣಿ ಸಂಖ್ಯೆ: 0816-2272922 ಸ್ಥಾಪಿಸಿದ್ದು, ದೂರು ಬಂದ ತಕ್ಷಣ ಅಬಕಾರಿ ತಂಡ ಕಾರ್ಯ ಪ್ರವೃತ್ತರಾಗಿ ದಾಳಿ ನಡೆಸಿ ಅಕ್ರಮಗಳನ್ನು ತಡೆಗಟ್ಟಲಾಗುತ್ತಿದೆ. ಸಾರ್ವಜನಿಕರು ಅಬಕಾರಿ ಅಕ್ರಮಗಳಿಗೆ ಸಂಬಂಧಿಸಿದಂತೆ ನಿಯಂತ್ರಣ ಕೊಠಡಿಯ ದೂರವಾಣಿಗೆ ಸಂಪರ್ಕಿಸಿ ತಕ್ಷಣ ತಿಳಿಸುವಂತೆ ಜಿಲ್ಲಾ ಅಬಕಾರಿ ಉಪ ಆಯುಕ್ತರಾದ ನಾಗರಾಜಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ