NEWSನಮ್ಮರಾಜ್ಯವಿಶೇಷ

ಅಮನ ಜೆ.ಕುಮಾರ್‌ರ ನಾಲ್ಕನೆ ಪುಸ್ತಕ “Galore of Mysteries”  ಲೋಕಾರ್ಪಣೆಗೊಳಿಸಿದ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಗಡೆ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕುಮಾರಿ ಅಮನ ಜೆ.ಕುಮಾರ್ ಅವರ ನಾಲ್ಕನೆ ಪುಸ್ತಕ Galore of Mysteries ಅನ್ನು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹಾಗೂ ಕರ್ನಾಟಕದ ಮಾಜಿ ಲೋಕಾಯುಕ್ತ ಎನ್. ಸಂತೋಷ್ ಹೆಗ್ಗಡೆ ಅವರು ಬಿಡುಗಡೆ ಮಾಡಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಸಂದೇಶವು ಈ ಪುಸ್ತಕದಲ್ಲಿ ಪ್ರಕಟವಾಗಿದ್ದು, ಈ ಪುಸ್ತಕಕ್ಕೆ ಮುನ್ನುಡಿಯನ್ನು ಚಂದ್ರಯಾನ – 3 , ISROದ ಪ್ರಾಜೆಕ್ಟ್ ಡೈರೆಕ್ಟರ್ ಡಾ. ಪಿ.ವೀರ ಮುತ್ತುವೇಲ್ ಬರೆದಿದ್ದಾರೆ.

ಈ ಪುಸ್ತಕ ಅಮನಳ 4 ನೆಯ ಪುಸ್ತಕ ಹಾಗೂ ಮೊದಲನೆಯದು fiction writing ಪುಸ್ತಕವಾಗಿದೆ. ಅಮನ ಬೆಂಗಳೂರಿನ ಬಿಷಪ್ ಕಾಟನ್ ಗರ್ಲ್ ಸ್ಕೂಲ್‌ನಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಹಾರ್ವಡ್ ವಿಶ್ವ ವಿದ್ಯಾಲಯದಿಂದ “Masterpieces of World Literature” ಕೋರ್ಸ್ ಮಾಡಿದ್ದಾರೆ.

“ಅಮನಳ Galore of Mysteries” ಪುಸ್ತಕವು, ಕವನ ಹಾಗೂ ಕಿರು ಕಥೆಗಳ ಸಂಗ್ರಹವಾಗಿದ್ದು ರಹಸ್ಯಗಳ ಕೌತುಕವನ್ನು ಒಳಗೊಂಡಿದೆ. ಇದು ಸಾಹಸಮಯವಾಗಿದ್ದು ಭಯಾನಕ ಹಾಗೂ ಹಾಸ್ಯದಿಂದ ಕೂಡಿ ಓದುಗರನ್ನು ಪ್ರತಿಪುಟದಲ್ಲಿಯೂ ಕಲ್ಪನೆಯ ಲೋಕಕ್ಕೆ ಕರೆದೊಯ್ಯುವ ಆಕರ್ಷಣೆಯನ್ನು ಹೊಂದಿದೆ.

ಡಾ. ಲತಾ ಟಿ.ಎಸ್ ಹಾಗೂ ಜೈವಂತ್ ಕುಮಾರ್ ಅವರ ಮಗಳಾದ ಅಮನ 6ನೇ ತರಗತಿಯಲ್ಲಿದ್ದಾಗ ಇಂಗ್ಲಿಷ್ ಕವನಗಳನ್ನು ಬರೆಯಲು ಪ್ರಾರಂಭಿಸಿದ್ದು, ಅವಳ ಪ್ರಥಮ ಕವನ “Echoes of Soulful Poems” ಎರಡನೇ “World Amidst the Words” ಹಾಗೂ “Lafzon ki Mhfil “ ಮೂರನೇ ಹಿಂದಿ ಕವನ ಸಂಕಲನವು ಈಗಾಗಲೇ ಅಮೇಜಾನ್, ಪ್ಲಿಪ್ ಕಾರ್ಟ್ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಲಭ್ಯವಿವೆ.

ಅಮನಳ ದಾಖಲೆಗಳು: * ಭಾರತದ ಕಿರಿಯ ಕವಯಿತ್ರಿ ಇಂಡಿಯಾ ಬುಕ್ ಆಪ್ ರೆಕಾಡ್ಸ್ -2021 * ಏಷ್ಯಾ ಬುಕ್ ಆಪ್ ರೆಕಾಡ್ಸ್-2021 ಕಿರಿಯ ವಯಸ್ಸಿನಲ್ಲಿ ಕವಿತೆಗಳನ್ನು ಬರೆದಿರುವುದು. *ಕೌಟಿಲ್ಯ ವರ್ಷದ ಕಿರಿಯ ಕವಿ ಪ್ರಶಸ್ತಿ – 2021 ಗೋವಾದ ಗೌರವಾನ್ವಿತ ರಾಜ್ಯಪಾಲರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. *ನೋಬಲ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ಕಿರಿಯ ಕವಯಿತ್ರಿ.

*ವರ್ಲ್ಡ್ ರೆಕಾರ್ಡ್ ವಿಶ್ವವಿದ್ಯಾಲಯ ಪ್ರವೇಶ 2022, ಸತತ ವರ್ಷಗಳಲ್ಲಿ ಕವನ ಸಂಕಲನ ಪುಸ್ತಕಗಳನ್ನು ಪ್ರಕಟಿಸಿದ ಕಿರಿಯ ಕವಿಯಿತ್ರಿ *ಗೋಲ್ಡನ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್ಸ್ 2022 ನಲ್ಲಿ ದಾಖಲೆ ಬರೆದಿದ್ದಾರೆ * ವಂಡರ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್ಸ್ ಕಿರಿಯ ಕವಯತ್ರಿ * ಇಂಟರ್ನ್ಯಾಷನಲ್ ಬುಕ್ಅಪ್ ರೆಕಾರ್ಡ್ಸ್ ಕಿರಿಯ ಕವಿಯತ್ರಿ.

ಇನ್ನು ಇಲ್ಲಿಯವರೆಗೂ ಅಮನ ಇಂಗ್ಲಿಷ್ ಮತ್ತು ಹಿಂದಿಯಲ್ಲಿ 500 ಕ್ಕೂ ಹೆಚ್ಚು ಕವನಗಳನ್ನು ಬರೆದಿರುವುದು ಅವರ ಪ್ರತಿಭೆಯನ್ನು ಬಿಂಬಿಸುತ್ತಿದೆ ಎಂದರೆ ತಪ್ಪಾಗಲಾರದು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು