CrimeNEWSನಮ್ಮರಾಜ್ಯ

ಅರಕೆರೆ – ಬಳ್ಳೇಕೆರೆ ಮಾರ್ಗ ಮಧ್ಯದ ಕೆರೆಬಳಿ ಗೂಡ್ಸ್‌ ಆಟೋ ಬೈಕ್‌ ನಡುವೆ ಅಪಘಾತ: ಬೈಕ್‌ ಸವಾರರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಶ್ರೀರಂಗಪಟ್ಟಣ: ಗೂಡ್ಸ್‌ ಆಟೋ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅರಕೆರೆ – ಬಳ್ಳೇಕೆರೆ ಮಾರ್ಗ ಮಧ್ಯದ ಕೆರೆಬಳಿ ನಡೆದಿದೆ.

ನೇರಲೇಕೆರೆಯ ನಿವಾಸಿ ವಕೀಲರಾದ ಮಹದೇವ (4) ಮತ್ತು ಹಿಂಬದಿ ಸವಾರ ಬಳ್ಳೇಕೆರೆಯ ನಿವಾಸಿ ಕೃಷ್ಣೇಗೌಡ ಗಾಯಗೊಂಡವರು. ಅವರಲ್ಲಿ ಮಹದೇವ ಅವರ ಕೈ, ಕಾಲು ಮತ್ತು ಮುಖಕ್ಕೆ ತೀವ್ರ ಪೆಟ್ಟುಬಿದ್ದು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಸ್ಪಂದನಾ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು.

ಹಿಂಬದಿ ಸವಾರ ಕೃಷ್ಣೇಗೌಡ ಅವರಿಗೆ ಸಣ್ಣಪುಟ್ಟಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.

ಘಟನೆ ವಿವರ: ಕಳೆದ ಇದೇ ಜ.10ರಂದು ರಾತ್ರಿ 9ಗಂಟೆ ಸುಮಾರಿಗೆ ಶ್ರೀರಂಗಪಟ್ಟದಲ್ಲಿರುವ ತಮ್ಮ ವಕೀಲರ ಕಚೇರಿಯಲ್ಲಿ ಮಹದೇವ ಅವರು ಕೆಲಸ ಮುಗಿಸಿಕೊಂಡು ನೇರಲೇಕೆರೆಗೆ ಕೃಷ್ಣೇಗೌಡ ಅವರ ಜತೆ ಬರುತ್ತಿದ್ದಾಗ ಬಳ್ಳೇಕೆರೆ ಕಡೆಯಿಂದ ವೇಗವಾಗಿ ಬಂದ ಗೂಡ್ಸ್‌ ಆಟೋ ಅರಕೆರೆ ಕಡೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಮುಂದಿನ ಚಕ್ರ ಒಂದು ಸುತ್ತು ತಿರುಗಿದೆ. ಗೂಡ್ಸ್‌ ಆಟೋದ ಮುಂದಿನ ಗಾಜು ಜಖಂಗೊಂಡಿದೆ. ಈ ವೇಳೆ ಮಹದೇವರಿಗೆ ತೀವ್ರ ಗಾಯವಾಗಿದ್ದು ತೀವ್ರ ರಕ್ತಸ್ರಾವವಾಗಿ ಜ್ಞಾನತಪ್ಪಿ ಅಪಘಾತ ಸ್ಥಳದಲ್ಲೆ ಬಿದ್ದಿದ್ದರು. ಆ ವೇಳೆ ಅದೇ ಮಾರ್ಗವಾಗಿ ಬಂದ ಸಾರ್ವಜನಿಕರು ಆಂಬುಲೆನ್ಸ್‌ಗೆ ಕರೆ ಮಾಡಿ ಆಂಬುಲೆನ್ಸ್‌ ಮೂಲಕ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.

ಈ ಸಂಬಂಧ ಅರಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಜರುಗಿಸುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ