NEWSನಮ್ಮರಾಜ್ಯಸಂಸ್ಕೃತಿ

ಅರಮನೆಯಲ್ಲಿ ನವರಾತ್ರಿ ಸಡಗರ – ವೈಭವೋಪೇತ ಸಿಂಹಾಸನವನ್ನೇರಿ ಖಾಸಗಿ ದರ್ಬಾರ್ ನಡೆಸಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಭಾನುವಾರ ವಿಧ್ಯುಕ್ತವಾಗಿ ಚಾನೆ ದೊರೆಕಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆಯ ದರ್ಬಾರ್ ಹಾಲ್​ನಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವೈಭವೋಪೇತ ಸಿಂಹಾಸನವನ್ನೇರಿ ಖಾಸಗಿ ದರ್ಬಾರ್ ನಡೆಸಿದರು.

ಚಾಮುಂಡಿಬೆಟ್ಟದಲ್ಲಿ ನಾಡಹಬ್ಬಕ್ಕೆ ಸರ್ಕಾರಿ ಮಟ್ಟದಲ್ಲಿ ಚಾಲನೆ ದೊರೆಯಿತು. ಮತ್ತೊಂದೆಡೆ ಅರಮನೆಯಲ್ಲಿ ನವರಾತ್ರಿ ಸಡಗರ ಶುರುವಾಯಿತು. ಖಾಸಗಿ ದರ್ಬಾರಿಗೆ ಪೂರಕವಾಗಿ ಬೆಳಗ್ಗೆ 5.30ರಿಂದಲೇ ಅರಮನೆಯಲ್ಲಿ ಪೂಜಾವಿಧಾನ ನೆರವೇರಿತು.

ಸಾಂಪ್ರದಾಯಿಕ ಪೋಷಾಕು ಧರಿಸಿದ್ದ ಪುರೋಹಿತರು, ಕಟ್ಟಿಗೆಯವರು, ಚೌಕಿದಾರರು, ದೀವಟಿಗೆ ಸಲಾಮಿನ ತಂಡ, ಶ್ವೇತ ವಸ್ತ್ರಧಾರಿಗಳಾಗಿದ್ದ ದರ್ಬಾರ್ ಭಕ್ಷಿಗಳ ಪರಿವಾರದೊಂದಿಗೆ ಯದುವೀರ ದರ್ಬಾರಿನ ಸ್ಥಳಕ್ಕೆ ರಂಗಪ್ರವೇಶ ಮಾಡಿದರು. ಆ ಮೂಲಕ ಗತಕಾಲದ ರಾಜವೈಭೋಗ ಮತ್ತೊಮ್ಮೆ ಕಣ್ಮುಂದೆ ಬರುವಂತೆ ಮಾಡಿದರು.

ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಸಲು ಆಗಮಿಸಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್. ಆ ಹೊತ್ತಿಗೆ ಚೌಕಿದಾರರು, ಹೊಗಳುಭಟರ ಬಹುಪರಾಕ್ ಘೋಷಣೆ ರಿಂಗಣಿಸಿದವು. ಚಿನ್ನದ ಬಣ್ಣದ ಪೋಷಾಕು, ರೇಷ್ಮೆ, ಮುತ್ತಿನ ಸರವಿದ್ದ ಕಿರೀಟ, ಕೈಗಳು, ಕೊರಳಿಗೆ ಆಭರಣ ಧರಿಸಿದ್ದ ಯದುವೀರ ಚಾಮರಗಳ ಬೀಸುವಿಕೆಯ ನಡುವೆ ರಾಜ ಗಾಂಭೀರ್ಯದಲ್ಲಿ ನಡೆದು ಬಂದರು.

ಬಳಿಕ ಅವರಿಗೆ ಪುರೋಹಿತ ವರ್ಗದವರು ಸುಗಂಧದ್ರವ್ಯ ಪ್ರೋಕ್ಷಣೆ ಮಾಡಿ, ಪುಷ್ಪಾರ್ಚನೆ ಮಾಡಿ ಶುಭ ಹಾರೈಸಿದರು. ಅರಮನೆಯ ಆವರಣದಲ್ಲಿರುವ ದೇವಾಲಯಗಳು, ಚಾಮುಂಡಿ ಬೆಟ್ಟ, ನಂಜನಗೂಡು, ಶಂಕರಮಠ ಸೇರಿ ಸುಮಾರು 18 ದೇವಾಲಯಗಳ ಪುರೋಹಿತರು ತೀರ್ಥ, ಪ್ರಸಾದ, ಹೂವು ನೀಡಿ, ಅಕ್ಷತೆಯನ್ನು ತಲೆಗೆ ಹಾಕಿ ಆಶೀರ್ವದಿಸಿದರು.

ಮೈಸೂರು ಅರಮನೆಯಲ್ಲಿ ಭಾನುವಾರ ನವರಾತ್ರಿ ಅಂಗವಾಗಿ ಸಂಪ್ರದಾಯದಂತೆ ಖಾಸಗಿ ದರ್ಬಾರ್ ನಡೆಸಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್. ಬಳಿಕ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಯದುವೀರ ತಲೆಬಾಗಿ ನಮಸ್ಕರಿಸಿದರು.

ಯದುವೀರ ಅವರಿಗೆ ತ್ರಿಷಿಕಾಕುಮಾರಿ ಒಡೆಯರ್ ಪಾದಪೂಜೆ ಮಾಡಿದರು. ಪುತ್ರ ಆದ್ಯವೀರ ಕೂಡ ತಂದೆಯ ಪಾದಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಖಾಸಗಿ ದರ್ಬಾರ್ ಹಿನ್ನೆಲೆಯಲ್ಲಿ ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಮಧ್ಯಾಹ್ನ 2 ಗಂಟೆ ಬಳಿಕ ಅರಮನೆ ವೀಕ್ಷಣೆಗೆ ಅನುವು ಮಾಡಿಕೊಡಲಾಯಿತು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು