NEWSಆರೋಗ್ಯನಮ್ಮಜಿಲ್ಲೆ

ಆರೋಗ್ಯ ಉಪ ಕೇಂದ್ರ ನಿರ್ಮಿಸಲು ಸ್ವಂತ ನಿವೇಶನ ದಾನ ನೀಡಿದ ರೈತ ಸಿದ್ದಪ್ಪ

ವಿಜಯಪಥ ಸಮಗ್ರ ಸುದ್ದಿ

ಹನೂರು: ಎಲ್ಲೆಮಾಳ ಗ್ರಾಮದಲ್ಲಿ ಆರೋಗ್ಯ ಉಪ ಕೇಂದ್ರ ನಿರ್ಮಿಸಲು ಸ್ವಂತ ಜಾಗವನ್ನು ಚಾಮರಾಜನಗರದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಬಂದು ರೈತರೊಬ್ಬರು ದಾನ ಮಾಡಿದ್ದಾರೆ.

ಹನೂರು ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಎಲ್ಲೇಮಾಳ ಗ್ರಾಮದಲ್ಲಿ ಆರೋಗ್ಯ ಉಪಕೇಂದ್ರಕ್ಕೆ ಸ್ವಂತ ಕಟ್ಟಡವಿಲ್ಲದಿದ್ದರಿಂದ, ಉಪಕೇಂದ್ರ ಕಟ್ಟಡ ನಿರ್ಮಿಸಲು ಸ್ಥಳದ ದಾನಿಗಳಾದ ಜಯಮ್ಮ ಮತ್ತು ಕೆ.ವಿ.ಸಿದ್ದಪ್ಪ , ಕೆಂಚಯ್ಯನದೊಡ್ಡಿ ಅವರು ಎಲ್ಲೇಮಾಳ ಗ್ರಾಮದ ಸರ್ವೆ ನಂಬರ್ 28 / 20ರಲ್ಲಿರುವ ತಮ್ಮ ಸ್ವಂತ ಜಾಗವನ್ನು ಸರ್ಕಾರಕ್ಕೆ ದಾನವಾಗಿ ನೀಡಿದ್ದಾರೆ.

ಜಯಮ್ಮ ಮತ್ತು ವಿ.ಸಿದ್ದಪ್ಪ 0 -05.50 ಎಕರೆ ನಿವೇಶವನ್ನು ( 60X40 ) ನೀಡಿದ್ದು, ಅವರ ಹೆಸರನ್ನು ಆರೋಗ್ಯ ಉಪಕೇಂದ್ರಕ್ಕೆ ಇಡಲಾಗುವುದು ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಜಯಮ್ಮ ಮತ್ತು ಕೆ.ವಿ.ಸಿದ್ದಪ್ಪ ಅವರ ಈ ಸಾಮಾಜಿಕ ಸೇವಾ ಕಾರ್ಯವನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರಶಂಸಿಸಿದ್ದು ಅವರ ಹೆಸರಿಡಲು ಅವಕಾಶವಿರುವುದರಿಂದ, ದಾನಿಗಳ ಹೆಸರನ್ನು ಆರೋಗ್ಯ ಉಪ ಕೇಂದ್ರಕ್ಕೆ ಇಡಲು ಇಲಾಖೆ ಸಂತಸಗೊಂಡಿದೆ ಎಂದು ಹೇಳಿದ್ದಾರೆ.

ಆರೋಗ್ಯ ಉಪಕೇಂದ್ರಕ್ಕೆ ದಾನಿಗಳ ನಿವೇಶನವನ್ನು ನೋಂದಣಿ ಮಾಡಿ ಕಟ್ಟಡ ಕಾಮಗಾರಿ ಮುಗಿದ ನಂತರ ಉಪ ಕೇಂದ್ರಕ್ಕೆ ಶ್ರೀಮತಿ ಜಯಮ್ಮ ಸಿದ್ದಪ್ಪ ಅವರ ಹೆಸರಿಡಲು ಜಿಲ್ಲಾ ಆರೋಗ್ಯಾಧಿಕಾರಿಗಳು ಸೂಚಿಸಿದ್ದಾರೆ ಎಂದು ತಾಲೂಕು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ