NEWSಕ್ರೀಡೆಬೆಂಗಳೂರು

ಇಂದು RCB – KKR ನಡುವೆ ಹೈವೋಲ್ಟೇಜ್‌ ಕದನ: ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿ ಆರ್​ಸಿಬಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನಡುವೆ ಐಪಿಎಲ್ 2024ರ ಹತ್ತನೇ ಪಂದ್ಯ ಇಂದು ಆಯೋಜಿಸಲಾಗಿದೆ. ಮೊದಲ ಪಂದ್ಯದಲ್ಲಿ ಸೋಲುಂಡ ಬಳಿಕ ಪಂಜಾಬ್ ವಿರುದ್ಧ ಗೆದ್ದಿರುವ ಆರ್​ಸಿಬಿ ತವರಿನಲ್ಲಿ ಮತ್ತೊಂದು ಜಯ ಸಾಧಿಸುವ ಹಂಬಲದಲ್ಲಿದೆ.

ಹೌದು! ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಇಂದು (ಮಾ.29) ಕೋಲ್ಕತಾ ನೈಟ್ ರೈಡರ್ಸ್ (Kolkata Knight Riders) ತಂಡವನ್ನು ಎದುರಿಸಲು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಸಜ್ಜಾಗಿದೆ.

ಇನ್ನು 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿಗೆ ಇದು 3ನೇ ಪಂದ್ಯವಾಗಿದ್ದು, ತವರಿನಲ್ಲಿ ನಡೆಯುತ್ತಿರುವ 2ನೇ ಪಂದ್ಯವಾಗಿದೆ. ಇನ್ನೂ ಕೆಕೆಆರ್‌ಗೆ ಆವೃತ್ತಿಯ 2ನೇ ಪಂದ್ಯವಾಗಿದೆ. ಈ ತಂಡಗಳು ಈವರೆಗೆ ಒಟ್ಟು 32 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಆರ್‌ಸಿಬಿ 14 ರಲ್ಲಿ ಗೆಲುವು ಸಾಧಿಸಿದ್ದರೆ, ಕೋಲ್ಕತ್ತಾ 18 ಪಂದ್ಯಗಳಲ್ಲಿ ಜಯಗಳಿಸಿದೆ.

ಕೆಕೆಆರ್ ವಿರುದ್ಧ ಬೆಂಗಳೂರು ತಂಡ ಗರಿಷ್ಠ ರನ್‌ 213 ಆಗಿದ್ದರೆ, ಬೆಂಗಳೂರು ತಂಡದ ವಿರುದ್ಧ ಕೆಕೆಆರ್‌ ಗಳಿಸಿರುವ ಗರಿಷ್ಠ ರನ್‌ 222 ರನ್‌ ಆಗಿದೆ.

ಪಂದ್ಯವು ರಾತ್ರಿ 7.30 ಕ್ಕೆ ಪ್ರಾರಂಭವಾಗುತ್ತದೆ. ಇದು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಎರಡನೇ ತವರು ಪಂದ್ಯವಾಗಿದೆ. ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿತ್ತು. ಆರ್​ಸಿಬಿ ಋತುವಿನ ತಮ್ಮ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿತ್ತು. ಆದರೆ ಪಂಜಾಬ್ ಕಿಂಗ್ಸ್ ಅನ್ನು ತನ್ನ ಎರಡನೇ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಪುಟಿದೆದ್ದಿತು. ಇದೀಗ ಮತ್ತೊಂದು ಗೆಲುವನ್ನು ಎದುರು ನೋಡುತ್ತಿದೆ ಫಾಫ್ ಡುಪ್ಲೆಸಿಸ್ ಪಡೆ.

ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಹಲವು ವರ್ಷಗಳಿಂದ ಬ್ಯಾಟಿಂಗ್ ಸ್ನೇಹಿಯಾಗಿದೆ. ಐಪಿಎಲ್‌ನಲ್ಲಿ ಬ್ಯಾಟಿಂಗ್ ಸ್ವರ್ಗವಾಗಿ ಪರಿಣಮಿಸಿದೆ. ಹೀಗಾಗಿ ತಂಡಗಳು ಈ ಸ್ಥಳದಲ್ಲಿ ಚೇಸ್ ಮಾಡಲು ಆಯ್ಕೆ ಮಾಡಿಕೊಳ್ಳುತ್ತವೆ. ಮೊದಲು ಬ್ಯಾಟಿಂಗ್ ಮಾಡಿದ ತಂಡಗಳಿಗಿಂತ ಚೇಸಿಂಗ್ ತಂಡಗಳು ಈ ಸ್ಥಳದಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದಿವೆ.

ಸದ್ಯ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ಎರಡು ಪಂದ್ಯಗಳಿಂದ ಎರಡು ಅಂಕ ಗಳಿಸಿ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇವರ ನೆಟ್​ ರನ್​ರೇಟ್ -0.180 ಆಗಿದೆ. ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲೇಳಲು ಇಂದಿನ ಪಂದ್ಯ ಗೆಲ್ಲಲೇ ಬೇಕಿದೆ.

ಸ್ಟಾರ್ಕ್‌ ಮೇಲೆ ಕಣ್ಣು: ಐಪಿಎಲ್‌ ಕ್ರಿಕೆಟ್‌ ಇತಿಹಾಸದಲ್ಲೇ ಅತ್ಯಧಿಕ ಬೆಲೆಗೆ ಬಿಕರಿಯಾಗಿರುವ ಮಿಚೆಲ್‌ ಸ್ಟಾರ್ಕ್‌ ಅವರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಭಾರೀ ನಿರೀಕ್ಷೆಯೊಂದಿಗೆ ಕಣಕ್ಕಿಳಿದಿದ್ದ ಮಿಚೆಲ್‌ ಸ್ಟಾರ್ಕ್‌ ಮೊದಲ ಪಂದ್ಯದಲ್ಲಿ ಒಂದೇ ಒಂದು ವಿಕೆಟ್‌ ಪಡೆಯದೇ 4 ಓವರ್‌ಗಳಲ್ಲಿ 53 ರನ್‌ ಚಚ್ಚಿಸಿಕೊಂಡು, ಟೀಕೆಗೆ ಗುರಿಯಾಗಿದ್ದರು. ಹಾಗಾಗಿ ಈ ಪಂದ್ಯದಲ್ಲಾದರೂ ಆರ್‌ಸಿಬಿ ಕಲಿಗಳನ್ನು ಕಟ್ಟಿಹಾಕುತ್ತಾರಾ ಅನ್ನೋದನ್ನ ಕಾದುನೋಡಬೇಕಿದೆ.

ಗಂಭೀರ್‌-ಕೊಹ್ಲಿ ಮತ್ತೆ ಮುಖಾಮುಖಿ: 17ನೇ ಆವೃತ್ತಿಯಲ್ಲಿ ಮತ್ತೆ ತವರು ತಂಡಕ್ಕೆ ಮೆಂಟರ್‌ ಆಗಿ ಮರಳಿರುವ ಕೆಕೆಆರ್‌ ತಂಡದ ಮಾಜಿ ಆಟಗಾರ ಗೌತಮ್‌ ಗಂಭೀರ್‌ ಹಾಗೂ ಕೊಹ್ಲಿ ಮತ್ತೆ ಮುಖಾಮುಖಿಯಾಗುತ್ತಿದ್ದಾರೆ. ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಕೋಚ್‌ ಆಗಿದ್ದ ಗಂಭೀರ್‌ ಹಾಗೂ ಆರ್‌ಸಿಬಿ ಆಟಗಾರ ಕೊಹ್ಲಿ ನಡುವೆ ಮಾತಿನ ಚಕಮಕಿ ನಡೆದು, ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ