NEWSನಮ್ಮಜಿಲ್ಲೆಮೈಸೂರುಸಂಸ್ಕೃತಿ

ಇಂದು ಪುರಭವನದಲ್ಲಿ ಮಹಿಷ ದಸರಾ ಆಚರಣೆ – ಪ್ರಚೋದನಕಾರಿ ಭಾಷಣ ಮಾಡಿದರೆ ಕಂಬಿ ಎಣಿಸುವುದು ಪಕ್ಕ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮಹಿಷ ದಸರಾ ಮತ್ತು ಚಾಮುಂಡಿ ಚಲೋ ಜಾಥಾ ಮಾಡದಂತೆ ನಗರ ಪೊಲೀಸ್‌ ಆಯುಕ್ತರು ತಿಳಿಸಿರುವ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಪ್ರವೇಶವನ್ನೂ ನಿರ್ಬಂಧಿಸಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿ 144 ಸೆಕ್ಷನ್ ಜಾರಿಗೊಳಿಸಿದೆ. ಹೀಗಾಗಿ ಚಾಮುಂಡಿಬೆಟ್ಟದ ಪಾದದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಪೊಲೀಸ್ ಆಯುಕ್ತ ಡಾ.ರಮೇಶ್ ಪುರಭವನದಲ್ಲಿ ಮಹಿಷ ದಸರಾ ಆಚರಿಸಲು ಅನುಮತಿ ನೀಡಿದ್ದು, ಇದು ವೇದಿಕೆ ಕಾರ್ಯಕ್ರಮಕ್ಕೆ ಮಾತ್ರ ನೀಡಲಾಗಿದೆ. ಈ ಕಾರ್ಯಕ್ರಮದ ವೇಳೆ ಯಾವುದೇ ಪ್ರಚೋದನಕಾರಿ ಭಾಷಣ ಮಾಡಿದರೂ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಲಾಗಿದೆ.

ಇನ್ನು ಈ ಕಾರ್ಯಕ್ರಮದ ಸಮಯದಲ್ಲಿ ಯಾವುದೇ ದುರ್ಘಟನೆ ನಡೆಯಬಾರದು ಎಂಬ ದೃಷ್ಟಿಯಲ್ಲಿ ಸುಮಾರು 2 ಸಾವಿರ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸದ್ಯ ಎರಡೂ ಕಾರ್ಯಕ್ರಮಗಳಿಗೆ ಬ್ರೇಕ್‌ ಬಿದ್ದಿದ್ದು, ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.

ಚಾಮುಂಡಿ ಕಾಲ್ಪನಿಕ, ಮಹಿಷ ಇತಿಹಾಸ ಪುರುಷ: ನಾವು ಜನಪದದಲ್ಲಿ ಬರುವ ಚಾಮುಂಡಿಯ ಪ್ರಸಂಗ ಹೇಳಿದ್ದೇವೆ. ಆದರೆ ನಾವು ಚಾಮುಂಡಿಯನ್ನು ನಿಂದಿಸಿಲ್ಲ. ನಮಗೆ ಮಹಿಷನ ಮೇಲೂ ಭಕ್ತಿ ಗೌರವವಿದೆ, ಚಾಮುಂಡಿ ಮೇಲೂ ಇದೆ. ನೀವು ಮಹಿಷನ ಹಿನ್ನೆಲೆ ಕೇಳಿದ್ರೆ, ನಾವು ಚಾಮುಂಡಿ ಹಿನ್ನೆಲೆ ಕೇಳ್ತಿವಿ. ಚಾಮುಂಡಿ ಕಾಲ್ಪನಿಕ, ಮಹಿಷ ಇತಿಹಾಸ ಪುರುಷ ಅನ್ನೋದು ಸತ್ಯ ಎಂದು ಮಹಿಷ ದಸರಾ ಆಚರಣಾ ಸಮಿತಿ ಅಧ್ಯಕ್ಷ ಪುರುಷೋತ್ತಮ್ ಹೇಳಿದ್ದಾರೆ.

ಚಾಮುಂಡಿ ಕೀಳಾಗಿ ಮಾತಾಡಲ್ಲ: ಚಾಮುಂಡಿ ದೇವಿ ಬಗ್ಗೆ ನಮ್ಮಲೇ ಕೆಲವರು ಕೆಟ್ಟದಾಗಿ ಮಾತನಾಡಿದ್ದು ತಪ್ಪು. ಆ ತಪ್ಪು ಮುಂದೆ ಆಗುವುದಿಲ್ಲ ಎಂದು ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ಭರವಸೆ ನೀಡಿದ್ದಾರೆ.

ಮಹಿಷ ದಸರಾಕ್ಕೆ ಬ್ರೇಕ್ ಬಿದ್ದಿದ್ದು ಸಮಾಧಾನ: ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ನಡೆಸುವುದು ನಿಲ್ಲಿಸೋದೇ ನಮ್ಮ ಉದ್ದೇಶವಾಗಿತ್ತು. ಆ ಕೆಲಸದಲ್ಲಿ ನಮಗೆ ಜಯ ಸಿಕ್ಕಿದೆ. ಮಹಿಷ ದಸರಾ ತಡೆಯಲು ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಂಡಿದ್ದೇವು. ಈಗ ಅದಕ್ಕೆ ಬ್ರೇಕ್ ಬಿದ್ದಿದೆ. ಇದು ನಮಗೆ ಸಮಾಧಾನ ತಂದಿದೆ ಎಂದು ಬಿಜೆಪಿ ಶಾಸಕ ಟಿ.ಎಸ್‌.ಶ್ರೀವತ್ಸ ಹೇಳಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು