NEWSನಮ್ಮರಾಜ್ಯ

ಇಂದು ಮತ್ತೆ ರಾಜ್ಯದ 34 ಮಂದಿಗೆ ಕೊರೊನಾ ಪಾಸಿಟಿವ್‌

313ಕ್ಕೇರಿದ ಸೋಂಕಿತರ ಸಂಖ್ಯೆ l ಈವರೆಗೆ 13 ಜನರು ವಿಶ್ವಮಾರಿಗೆ ಬಲಿ

ವಿಜಯಪಥ ಸಮಗ್ರ ಸುದ್ದಿ

 ಬೆಂಗಳೂರು: ಬೆಳಗಾವಿಯಲ್ಲಿ ಇಂದು ಒಂದೇ ದಿನ 17 ಮಂದಿಗೆ ಕೊರೊನಾ ಪಾಸಿಟಿವ್‌ ಪತ್ತೆಯಾಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಅದರ ಜತೆಗೆ ರಾಜ್ಯದಲ್ಲಿ ಇಂದು ಮಧ್ಯಾಹ್ನದ ವೇಳಗೆ 34 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇಂದೂ ಕೂಡ ಬೆಂಗಳೂರಿನಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಇನ್ನು ಹೊಸ 34 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 313ಕ್ಕೆ ಏರಿಕೆಯಾಗಿದೆ.  ಬೆಳಗಾವಿಯಲ್ಲಿ 17 ಮಂದಿಗೆ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಹಿರೇಬಾಗೇವಾಡಿಯ ಒಂದೇ ಕುಟುಂಬದ 8 ಮಂದಿಗೆ ತಗುಲಿದೆ. ಅದರಲ್ಲಿ 6ಮಂದಿ ಮಹಿಳೆಯರೆ ಆಗಿದ್ದಾರೆ. ಇಂದು ಬೆಳಗಾವಿಯಲ್ಲಿ 36ಕ್ಕೇರಿದೆ.

ಬೆಂಗಳೂರಿನಲ್ಲಿ ಐದು, ಮೈಸೂರಿನಲ್ಲಿ ಮೂರು, ವಿಜಯಪುರದಲ್ಲಿ ಏಳು, ಕಲಬುರಗಿ ಮತ್ತು ಗದಗದಲ್ಲಿ ತಲಾ ಒಂದು ಕೇಸ್‌ ಪತ್ತೆಯಾಗಿದೆ. ಈ ಮಧ್ಯೆ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,   ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ತನ್ನ ಮರಣ ಮೃದಂಗಕ್ಕೆ ಮುಂದಾಗುತ್ತಿದೆ.

ಬೆಂಗಳೂರಿನಲ್ಲಿ ನಿನ್ನೆವರೆಗೆ 71 ಇತ್ತು ಇಂದು 5 ಮಂದಿಗೆ ಸೋಂಕು ದೃಢಪಟ್ಟಿದ್ದು, 76ಕ್ಕೇರಿದೆ. ಇನ್ನು ಮೈಸೂರಿನಲ್ಲಿ ನಿನ್ನೆ 58 ಇದ್ದು, ಇಂದು 3 ಹೊಸ ಪ್ರಕರಣ ಪಾಸಿಟಿವ್‌ ಆಗಿದ್ದು, 61ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ