NEWSನಮ್ಮಜಿಲ್ಲೆನಮ್ಮರಾಜ್ಯ

ಇಂದು ಶಕ್ತಿ ಗ್ಯಾರಂಟಿಗೆ ಶತಕೋಟಿ ಸಂಭ್ರಮ- ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ: ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಕ್ತಿ ಗ್ಯಾರಂಟಿಗೆ ಶತಕೋಟಿ ಸಂಭ್ರಮ. ಮಹಿಳಾ ಸಬಲೀಕರಣದ ಪಯಣದಲ್ಲಿ ಮಹತ್ವದ ಮೈಲಿಗಲ್ಲು. ಸಾರಿಗೆ ಸಂಸ್ಥೆಗಳ ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಸಮಾರಂಭ. ಸರ್ವರಿಗೂ ಸುಸ್ವಾಗತ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇಂದು ಅಂದರೆ 24-11-2023 (ಶುಕ್ರವಾರ) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಈ ಸಂಭ್ರದಲ್ಲಿ ನಾಡಿನ ಜನರು ಭಾಗಿಯಾಗಬೇಕು ಎಂದು ಮನವಿ ಮಾಡಿದ್ದಾರೆ.

ಹೌದು! ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ತಮ್ಮ ಪಕ್ಷದ ಮಹತ್ವಾಕಾಂಕ್ಷಿ ಪಂಚ ಯೋಜನೆಯಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದೆ. ರಾಜ್ಯದ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಇದೇ 2023ರ ಜೂನ್ 11 ರಿಂದ ಆರಂಭವಾದ ಉಚಿತ ಪ್ರಯಾಣದ ಲಾಭ ಪಡೆದಿರುವ ಮಹಿಳೆಯರ ಸಂಖ್ಯೆ ನವೆಂಬರ್ 22 ವರೆಗೆ ಶತಕೋಟಿ ದಾಟಿದೆ.

ರಾಜ್ಯದ 4 ನಿಗಮಗಳ ಬಸ್​ಗಳಲ್ಲಿ ಈವರೆಗೂ 100 ಕೋಟಿ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಹೇಳಿಕೊಳ್ಳುದಕ್ಕೆ ಖುಷಿಯಾಗುತ್ತಿದೆ ಎಂದು ತಿಳಿಸಿರುವ ಸಚಿವರು, ಈ ಶಕ್ತಿ ಯೋಜನೆ ಜಾರಿಯಾಗಿ ಐದೇ ತಿಂಗಳಿಗೆ 2,397 ಕೋಟಿ ರೂಪಾಯಿ ಮೌಲ್ಯದ ಟಿಕೆಟ್‌ಗಳನ್ನು ದರವನ್ನು ನಿಗಮಗಳಿಗೆ ನಮ್ಮ ಸರ್ಕಾರ ಸಂದಾಯ ಮಾಡಿದ್ದು, ಉಳಿದಿದ್ದನ್ನು ಮಾಡಲಿದೆ ಎಂದಿದ್ದಾರೆ.

ಜೂನ್ 11 ರಿಂದ ನವೆಂಬರ್ 22ರ ವರೆಗೂ 100.47 ಕೋಟಿ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಅಂದರೆ ಕಳೆದ 165 ದಿನಗಳಲ್ಲಿ 100 ಕೋಟಿಯ 47 ಲಕ್ಷದ 56 ಸಾವಿರದ 184 ಮಹಿಳಾ ಪ್ರಯಾಣಿಕರು ಸಂಚಾರ ಮಾಡಿದ್ದಾರೆ ಎಂಬುದು ಸಂತಸ ವಿಷಯವಾಗಿದೆ.

ಶತಕೋಟಿಯ ಶಕ್ತಿ! ಶಕ್ತಿ ಯೋಜನೆಯಲ್ಲಿ ರಾಜ್ಯದ ಮಹಿಳೆಯರ ಪ್ರಯಾಣ 100 ಕೋಟಿ ತಲುಪಿರುವುದು ಗಮನಿಸಿದರೆ, ಇದು ಮಹಿಳಾ ಸಬಲೀಕರಣದ ದಾರಿಯಲ್ಲಿ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ. ಮಾತ್ರವಲ್ಲ ಇದೇ ಸಂಭ್ರಮದಲ್ಲಿ ಸಾರಿಗೆ ಸಂಸ್ಥೆಗಳ ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು