NEWSಕೃಷಿ

ಉಡುಪಿಯಲ್ಲಿ ನೋಡಲ್ ಅಧಿಕಾರಿಗಳ ನೇಮಕ

ಚಿಲ್ಲರೆ ವ್ಯಾಪಾರ ಸರಬರಾಜು ಪ್ರಕ್ರಿಯೆಗಾಗಿ ನೇಮಕ l ಡಿಸಿ ಜಗದೀಶ್‌ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಉಡುಪಿ: ಕೋವಿಡ್ -19 ಸಗಟು ಮತ್ತು ಚಿಲ್ಲರೆ ವ್ಯಾಪಾರದ ಸರಬರಾಜು ಪ್ರಕ್ರಿಯೆಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ   ಜನರಸಂಚಾರಿಸುವುದನ್ನು ನಿರ್ಬಂಧಿಸಲಾಗಿದೆ. ಇದನ್ನು ಇನ್ನಷ್ಟು ಬಿಗಿಗೊಳಿಸಿದ್ದಾರೆ.

ಜನರಿಗೆ  ಅಗತ್ಯವಿರುವ ದಿನಸಿ ಮತ್ತಿತರ ಅವಶ್ಯಕ ಸಾಮಗ್ರಿಗಳನ್ನು ನಿಗದಿತ ಸಮಯದಲ್ಲಿ ಮಾತ್ರ  ಸಾಮಾಜಿಕ ಅಂತರ ಪಾಲಿಸಿ ಖರೀದಿಸಲು ಅವಕಾಶವನ್ನು ನೀಡಿ ಪ್ರತಿದಿನ ಬೆಳಗ್ಗೆ 7 ರಿಂದ 11 ರವರೆಗೆ  ಸಮಯ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.

ಜಿಲ್ಲೆಯ ಸಾರ್ವಜನಿಕರ ದೈನಂದಿನ ಬಳಕೆಗೆ ಅವಶ್ಯಕವಿರುವ  ನಿತ್ಯದ ಆಹಾರ ಪದಾರ್ಥಗಳಾದ ಹಾಲು, ಪಡಿತರ ದವಸ ಧಾನ್ಯಗಳು, ಹಣ್ಣು ಮತ್ತು ತರಕಾರಿ ಹಾಗೂ ಇತರೆ ಅವಶ್ಯಕ ಸಾಮಗ್ರಿಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಸಾರ್ವಜನಿಕರಿಗೆ ಸಮರ್ಪಕವಾಗಿ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಅಗತ್ಯ ವಸ್ತುಗಳ ದಾಸ್ತಾನು ಶೇಖರಿಸಿಕೊಂಡು ಕೃತಕ ಅಭಾವ ಸೃಷ್ಟಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಮತ್ತು ದಿನನಿತ್ಯದ ಆಹಾರ ಸಾಮಗ್ರಿಗಳ ಪೂರೈಕೆಯ ಸಂಬಂಧ ಅಗತ್ಯ ಕ್ರಮವಹಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ನೋಡಲ್ ಅಧಿಕಾರಿಗಳ ವಿವರ

ರಾಜು .ಕೆ ಸಹಾಯಕ  ಕಮೀಷನರ್ ಕುಂದಾಪುರ ಮೊ.ಸಂ.8762823984.

ಭುವನೇಶ್ವರಿ ,ಉಪ ನಿರ್ದೇಶಕರು ,ತೋmಗಾರಿಕೆ ಇಲಾಖೆ ಉಡುಪಿ ಮೊ.ಸಂ 9448999225.

ಗಜೇಂದ್ರ .ವಿ ಸಹಾಯಕ ನಿಯಂತ್ರಕರು  ಕಾನೂನು ಮಾಪನ ಶಾಸ್ತ್ರ ಉಡುಪಿ ಮೊ.ಸಂ. 9845154263.

ಗೋಪಾಲ್ ಕಾಕನೂರ್, ಕಾರ್ಯದರ್ಶಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕಾರ್ಕಳ, ಮೊ.ಸಂ 9886925800.

ಗಾಯತ್ರಿ , ಕಾರ್ಯದರ್ಶಿ , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಉಡುಪಿ ಮೊ.ಸಂ.9900599335.

ದೀಪ್ತಿ , ಕಾರ್ಯದರ್ಶಿ , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕುಂದಾಪುರ, 9663858151 ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಿ  ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ