NEWSಉದ್ಯೋಗನಮ್ಮಜಿಲ್ಲೆ

ಏಕಕಾಲಕ್ಕೆ 5 ಪರೀಕ್ಷೆ: ಗೊಂದಲದಲ್ಲಿ ಅಭ್ಯರ್ಥಿಗಳು – ಪ್ರತ್ಯೇಕವಾಗಿ ಪರೀಕ್ಷೆ ನಡೆಸಲು ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅ.28ರಿಂದ 30ರ ವರೆಗೆ ನಡೆಸಲು ಪ್ರಕಟಿಸಿರುವ ತಾತ್ಕಾಲಿಕ ವೇಳಾಪಟ್ಟಿಯು ಅಭ್ಯರ್ಥಿಗಳ ಗೊಂದಲಕ್ಕೆ ಕಾರಣವಾಗಿದೆ. ಪ್ರತಿ ನಿಗಮ ಮಂಡಳಿಗಳ ಪರೀಕ್ಷೆಯನ್ನು ಪ್ರತ್ಯೇಕವಾಗಿ ನಡೆಸುವಂತೆ ಆಗ್ರಹ ವ್ಯಕ್ತವಾಗಿದೆ.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕಟ್ಟಡ ನಿರ್ಮಾಣ ಮತ್ತು ಕಾರ್ವಿುಕರ ಕಲ್ಯಾಣ ಮಂಡಳಿ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿರುವ ವಿವಿಧ 700ಕ್ಕೂ ಹೆಚ್ಚಿನ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ.

ಆದರೆ, ಅ.28ರಂದು ವಿದ್ಯುನ್ಮಾನ ನಿಗಮದ ಆಪ್ತ ಕಾರ್ಯದರ್ಶಿ- ಗ್ರೂಪ್-ಸಿ ಹುದ್ದೆ, ಹಿರಿಯ ಸಹಾಯಕ (ತಾಂತ್ರಿಕ/ತಾಂತ್ರಿಕೇತರ), ಸಹಾಯಕ (ತಾಂತ್ರಿಕ/ತಾಂತ್ರಿಕೇತರ) ಪರೀಕ್ಷೆಗಳು. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಹಿರಿಯ ಸಹಾಯಕ, ಕಾರ್ವಿುಕ ಮಂಡಳಿಯ ಪ್ರಥಮ ದರ್ಜೆ ಸಹಾಯಕ ಗ್ರೂಪ್-ಸಿ, ಆಪ್ತ ಸಹಾಯಕ, ಎಂಎಸ್​ಐಎಲ್​ನ ಸೇಲ್ಸ್ ಮೇಲ್ವಿಚಾರಕ, ಮಾರಾಟ ಪ್ರತಿನಿಧಿ, ಸೇಲ್ಸ್ ಇಂಜಿನಿಯರ್ (ಮೆಕಾನಿಕಲ್, ಎಲೆಕ್ಟ್ರಿಕಲ್, ಸಿವಿಲ್, ಇ ಆಂಡ್ ಸಿ), ಲೆಕ್ಕ ಗುಮಾಸ್ತ ಮತ್ತು ಗುಮಾಸ್ತ ಹುದ್ದೆಗಳಿಗೆ ಒಂದೇ ದಿನ ಪರೀಕ್ಷೆ ನಡೆಸುತ್ತಿದೆ.

ಇದೇ ರೀತಿ ಅ.29 ಮತ್ತು 30ರಂದು ಕೂಡ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ವಿವಿಧ ನಿಗಮ ಮಂಡಳಿಗಳಲ್ಲಿರುವ ಹುದ್ದೆಗಳಿಗೆ ಒಂದಕ್ಕಿಂತ ಹೆಚ್ಚಿನ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಒಂದೇ ಪರೀಕ್ಷೆ ಬರೆಯಲು ಅವಕಾಶವಿದೆ. ಹೆಚ್ಚಿನ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಇದರಿಂದ ಇತರೆ ಇಲಾಖೆಯಲ್ಲಿರುವ ಹುದ್ದೆ ಕೈತಪ್ಪಲಿದೆ. ಹೀಗಾಗಿ ಪ್ರತ್ಯೇಕವಾಗಿ ಪ್ರತಿ ನಿಗಮದ ಪರೀಕ್ಷೆಗಳನ್ನು ನಡೆಸಬೇಕು ಎಂದು ಅಭ್ಯರ್ಥಿಗಳು ಆಗ್ರಹಿಸಿದ್ದಾರೆ.

ಆತಂಕ ಬೇಡ ಎಂದ ಕೆಇಎ: ಒಂದಕ್ಕಿಂತ ಹೆಚ್ಚು ಇಲಾಖೆಗಳ ಒಂದೇ ಕೇಡರ್​ಗೆ ಸಂಬಂಧಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಒಂದೇ ಪರೀಕ್ಷೆಯನ್ನು ಬರೆದರೆ ಸಾಕು ಅದನ್ನು ಅದೇ ಕೇಡರ್​ನ ಮತ್ತೊಂದು ನಿಗಮ ಪರೀಕ್ಷೆಗೂ ಅನ್ವಯಿಸಲಿದೆ ಎಂದು ಕೆಇಎ ಸ್ಪಷ್ಟಪಡಿಸಿದೆ.

2 ಪರೀಕ್ಷೆಗಳಿಗೆ ಶುಲ್ಕ ವಸೂಲಿ: ಅಭ್ಯರ್ಥಿಗಳು ಎಷ್ಟು ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುತ್ತಾರೋ ಅಷ್ಟೂ ಪರೀಕ್ಷೆಗಳಿಗೆ ಪ್ರತ್ಯೇಕವಾಗಿ ಕೆಇಎ ಶುಲ್ಕವನ್ನು ಪಾವತಿಸಿಕೊಂಡಿದೆ. ಆದರೆ, ಒಂದೇ ಕೇಡರ್​ನಲ್ಲಿನ ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗಳಿಗೆ ಒಂದೇ ಪರೀಕ್ಷೆ ನಡೆಸಿದರೆ ಹೇಗೆ? ಹಾಗಾದರೆ, ಒಂದೇ ಕೇಡರ್​ನ ಪರೀಕ್ಷೆಗಳಿಗೆ ಒಂದೇ ಶುಲ್ಕ ಪಡೆಯಬೇಕಿತ್ತು. ಎರಡು ಪರೀಕ್ಷೆಗಳಿಗೆ ಶುಲ್ಕ ಪಡೆದು ಒಂದೇ ಪರೀಕ್ಷೆ ನಡೆಸುವುದು ಎಷ್ಟು ಸರಿ ಎಂಬುದು ಅಭ್ಯರ್ಥಿಗಳ ಪ್ರಶ್ನೆಯಾಗಿದೆ.

ನಿಗಮ ಮಂಡಳಿಗಳ ಭಾಷಾ ಪರೀಕ್ಷೆಗಳಾದ ಕನ್ನಡ/ಇಂಗ್ಲಿಷ್ ಮತ್ತು ಸಾಮಾನ್ಯ ಪರೀಕ್ಷೆಗಳಿಗೆ ಮಾತ್ರ ಒಂದೇ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪತ್ರಿಕೆ-2 ಅನ್ನು ಆಯಾ ನಿಗಮ ಮಂಡಳಿಗಳಿಗೆ ಪ್ರತ್ಯೇಕವಾಗಿಯೇ ನಡೆಸಲಾಗುತ್ತದೆ. ಈ ಸಂಬಂಧ ವಿವರಣಾತ್ಮಕವಾಗಿ ಪ್ರಕಟಣೆ ಹೊರಡಿಸಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಸ್ಪಷ್ಟನೆ ನೀಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು