CrimeNEWSನಮ್ಮರಾಜ್ಯ

ಏಳು ಎಂಬಿಬಿಎಸ್ ವಿದ್ಯಾರ್ಥಿಗಳ ಅನುತ್ತೀರ್ಣಗೊಳಿಸಿದ ಆರೋಪ ವಿಚಾರಣಾ ವರದಿ ರದ್ದು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲಂಚ ಕೊಡಲಿಲ್ಲ ಎಂಬ ಕಾರಣಕ್ಕೆ ಶಸ್ತ್ರಚಿಕಿತ್ಸೆ ವಿಷಯದ ಪ್ರಾಯೋಗಿಕ ಪರೀಕ್ಷೆಯಲ್ಲಿ ಕಲಬುರಗಿಯ ಖಾಜಾ ಬಂದೇ ನವಾಜ್ ವೈದ್ಯಕೀಯ ವಿಜ್ಞಾನ ಕಾಲೇಜಿನ ಏಳು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಗೊಳಿಸಿದ ಆರೋಪಕ್ಕೆ ಸಂಬಂಧಿಸಿದ ವಿಚಾರಣಾ ವರದಿಯನ್ನು ಹೈಕೋರ್ಟ್ ರದ್ದುಪಡಿಸಿ, ಹೊಸ ವರದಿ ಸಲ್ಲಿಸುವಂತೆ ಸೂಚಿಸಿದೆ.

ವಿನೋದಿನಿ ಸೇರಿದಂತೆ ಏಳು ಮಂದಿ ಎಂಬಿಬಿಎಸ್ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಚ್. ಟಿ. ನರೇಂದ್ರ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶನಿವಾರ ವಿಚಾರಣೆ ನಡೆಸಿತು.

ಹೊಸದಾಗಿ ಸಮಿತಿ ರಚಿಸಬೇಕು. ಇದರಲ್ಲಿ ಬೇರೆ ಕಾಲೇಜಿನ ಪ್ರಾಧ್ಯಾಪಕರು ಇರಬೇಕು. ಈ ಸಮಿತಿ ವಿಚಾರಣೆ ನಡೆಸಿದ ವರದಿ ಸಲ್ಲಿಸಬೇಕು. ಸಮಿತಿ ರಚನೆ ಹಾಗೂ ವಿಚಾರಣಾ ವರದಿ ಸಲ್ಲಿಸುವ ಪ್ರಕ್ರಿಯೆ ಹದಿನೈದು ದಿನಗಳಲ್ಲಿ ಪೂರ್ಣಗೊಳಿಸಬೇಕು ಎಂದು ರಾಜೀವ್ ಗಾಂಧಿ ಆರೋಗ್ಯ ವಿವಿ ರಿಜಿಸ್ಟ್ರಾರ್ ಅವರಿಗೆ ನಿರ್ದೇಶಿಸಿ ಪೀಠ ವಿಚಾರಣೆ ಮುಂದೂಡಿತು.

ಪ್ರಕರಣ ಕುರಿತಂತೆ ವಿಚಾರಣೆಗೆ ಆದೇಶಿಸಬೇಕು ಹಾಗೂ ಮತ್ತೆ ಪ್ರಾಯೋಗಿಕ ವಿಷಯ ಪರೀಕ್ಷೆ ನಡೆಸಲು ವಿಶ್ವವಿದ್ಯಾಲಯಕ್ಕೆ ಆದೇಶಿಸಬೇಕು ಎಂದು ಅರ್ಜಿದಾರರ ಪರ ವಕೀಲ ರಹಮತ್ ಉಲ್ಲಾ ಕೊತ್ವಾಲ್ ವಾದ ಮಂಡಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್...