NEWSದೇಶ-ವಿದೇಶನಮ್ಮರಾಜ್ಯ

ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ ಪಡೆದ ಕೆಎಸ್‌ಆರ್‌ಟಿಸಿ

ವಿಜಯಪಥ ಸಮಗ್ರ ಸುದ್ದಿ

ಸಿಂಗಾಪುರ್‌: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ -2023ರನ್ನು ಸಿಂಗಾಪುರ್‌ನಲ್ಲಿ ಪ್ರದಾನ ಮಾಡಲಾಯಿತು.

ಸಿಂಗಾಪುರ್‌ನಲ್ಲಿ ಗುರುವಾರ ಆ.17ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆಎಸ್‌ಆರ್‌ಟಿಸಿ ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರಾದ ಮಂಜುಳ ನಾಯ್ಕ್‌ ಮತ್ತು ಮಂಡಳಿ ಕಾರ್ಯದರ್ಶಿ & ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಟಿ.ಎಸ್‌.ಲತಾ ಅವರು ಪ್ರಶಸ್ತಿ ಸ್ವೀಕರಿಸಿದರು.

World Sustainability Congress ಅವರು ಕೊಡಮಾಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ಯಾಂಡ್ 2023ನೇ ಸಾಲಿನ 14ನೇ ಆವೃತ್ತಿಯ 18ನೇ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಡಿ ಕೆಎಸ್‌ಆರ್‌ಟಿಸಿ ನಿಗಮವು ಆಯ್ಕೆಯಾಗಿತ್ತು.

World Sustainability Congress ಆಯೋಜಿಸಿದ್ದ ಸಮಾರಂಭದಲ್ಲಿ ಕಂಟ್ರಿ ಮ್ಯಾನೇಜರ್, ಅಸೋಸಿಯೇಷನ್ ಆಫ್ ಇಂಟರ್ ನ್ಯಾಷನಲ್ ಸರ್ಟಿಫೈಡ್ ಪ್ರೋಫೆಶನಲ್ ಅಕೌಂಟೆಂಟ್ ಎನ್.ಜಿ. ವಿಲ್ಬರ್, ಚೀಫ್ ಎನ್ವೈರ್ಮೆಂಟ್, ಸೋಷಿಯಲ್ ಮತ್ತು ಗೌರ್ನನ್ಸ್ ಆಫೀಸರ್, ಕಂಪ್ಲಯನ್ ಮತ್ತು ಡಾಟಾ ಪ್ರೈವೆಸಿ ಅಧಿಕಾರಿ ಅಟಾರ್ನಿ ಕರೀನ ಲೆನೋರ್ ಎಸ್. ಬಯೋನ್ ಪ್ರಶಸ್ತಿ ಪ್ರದಾನ ಮಾಡಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು