CrimeNEWSದೇಶ-ವಿದೇಶ

ಒಬ್ಬಂಟಿಯಾಗಿ ಸಿಕ್ಕ ಯುವಕನ ಮೇಲೆ ನಾಲ್ವರು ಯುವತಿಯರಿಂದ ಸಾಮೂಹಿಕ ಅತ್ಯಾಚಾರ..!

ವಿಜಯಪಥ ಸಮಗ್ರ ಸುದ್ದಿ

ಪಂಜಾಬ್‌: ಒಬ್ಬಂಟಿಯಾಗಿ ಸಿಕ್ಕ ಯುವಕನ ಮೇಲೆ ನಾಲ್ವರು ಯುವತಿಯರು ಮೇಲೆರಗಿ ಅತ್ಯಾಚಾರ ಮಾಡಿರುವ ಘಟನೆ ದೇಶದಲ್ಲಿ ನಡೆದಿದ್ದರು, ಯುವ ಸಮುದಾಯವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ.

ಹೌದು! ದೇಶದಲ್ಲಿ ಈವರೆಗೂ ಮಹಿಳೆಯರು ಮತ್ತು ಯುವತಿಯರಿಗೆ ರಕ್ಷಣೆ ಇಲ್ಲ ಎಂದು ಅಲ್ಲಲ್ಲಿ ಕೇಳಿ ಬರುತ್ತಿತ್ತು. ಆದರೆ ಪ್ರಸ್ತುತ ಘಟನೆ ಗಮನಿಸಿದರೆ ಪುರುಷರಿಗೂ ರಕ್ಷೆಣೆ ಇಲ್ಲ ಎಂಬುವುದು ಆತಂಕಕ್ಕೆ ಕಾರಣವಾಗಿದೆ.

ಪಂಜಾಬ್‌ನ ಜಲಂಧರ್‌ನ ಅರಣ್ಯ ಪ್ರದೇಶದಲ್ಲಿ ನಾಲ್ವರು ಯುವತಿಯರು ಕಾಡಿನಲ್ಲಿ ಯುವಕನಿಗೆ ಮಾದಕ ದ್ರವ್ಯ (Narcotics) ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಕಪುರ್ತಲಾ ರಸ್ತೆಯ ಬಳಿ ಮನೆಗೆ ತೆರಳುತ್ತಿದ್ದ ನನ್ನನ್ನು ಯುವತಿಯರು ವಿಳಾಸ ಕೇಳಿದರು. ನಾನು ಹೇಳುತ್ತಿದ್ದ ವೇಳೆ ಕಣ್ಣಿಗೆ ಏನನ್ನೋ ಎರಚಿದರು. ನಾನು ಪ್ರಜ್ಞಾಹೀನನಾದ ಬಳಿಕ ತಮ್ಮ ಕಾರಿನಲ್ಲಿ ಹಾಕಿಕೊಂಡು ಅಜ್ಞಾತ ಸ್ಥಳಕ್ಕೆ ಕರೆದೊಯ್ದರು. ಬಳಿಕ ನನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದರು ಎಂದು ಸಂತ್ರಸ್ತ ಯುವಕ ಹೇಳಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಕುಡಿದ ಮತ್ತಿನಲ್ಲಿದ್ದ ನಾಲ್ವರು ಯುವತಿಯರು ಒಬ್ಬರ ಮೇಲೊಬ್ಬರಂತೆ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ನನಗೂ ಸಹ ಬಲವಂತದಿಂದ ಮದ್ಯ ಕುಡಿಸಿ ಹಲ್ಲೆ ನಡೆಸಿದ್ದಾರೆ. ಲೈಂಗಿಕ ದೌರ್ಜನ್ಯದ ಬಳಿಕ ನನ್ನನ್ನು ನಗರದ ಯಾವುದೋ ಸ್ಥಳದಲ್ಲಿ ಬಿಟ್ಟು ಆ ಯುವತಿಯರು ಪರಾರಿಯಾಗಿದ್ದಾರೆ. ನನಗೆ ನ್ಯಾಯ ಕೊಡಿಸಿ ಎಂದು ಆತ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದಾನೆ.

ಈ ಘಟನೆ ತಿಳಿಯುತ್ತಿದ್ದಂತೆಯೇ ಪಂಜಾಬ್ ಪೊಲೀಸ್ ಗುಪ್ತಚರ ಇಲಾಖೆ ಈ ಬಗ್ಗೆ ಸ್ವಯಂಪ್ರೇರಿತ ತನಿಖೆ ಪ್ರಾರಂಭಿಸಿದೆ. ಆದರೆ ಈ ಬಗ್ಗೆ ಯಾವುದೇ ವ್ಯಕ್ತಿ ದೂರು ನೀಡಿಲ್ಲ. ತನ್ನ ಮೇಲೆ ನಡೆದಿರುವ ಅತ್ಯಾಚಾರ ದೌರ್ಜನ್ಯದ ಬಗ್ಗೆ ಆತ ಮಾಧ‍್ಯಮಗಳಿಗೆ ಮಾಹಿತಿ ನೀಡಿದ್ದಾನೆ ಎಂದು ವರದಿಯಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು