NEWSಕ್ರೀಡೆದೇಶ-ವಿದೇಶವಿದೇಶ

ಒಲಂಪಿಕ್ಸ್ -ದ್ಯುತಿ ಚಾಂದ್ ಸೆಮಿ ಫೈನಲ್ ಗೇರುವಲ್ಲಿ ವಿಫಲ: ಭಾರತದ ಮತ್ತೊಂದು ಪದಕದ ಆಸೆ ಭಗ್ನ

ವಿಜಯಪಥ ಸಮಗ್ರ ಸುದ್ದಿ

ಟೋಕಿಯೋ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ 32 ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಮತ್ತೊಂದು ಪದಕದ ಆಸೆ ಭಗ್ನವಾಗಿದ್ದು, ಭಾರತದ ದ್ಯುತಿ ಚಾಂದ್ ಸೆಮಿ ಫೈನಲ್ ಗೇರುವಲ್ಲಿ ವಿಫಲರಾಗಿದ್ದಾರೆ.

ಇಂದು (ಸೋಮವಾರ) ಬೆಳಗ್ಗೆ ನಡೆದ ರೇಸ್‌ನಲ್ಲಿ ಕೊನೆ ಸ್ಥಾನವನ್ನು ಪಡೆದು ಅವರು ಕ್ರೀಡಾಕೂಟದಿಂದ ನಿರ್ಗಮಿಸಿ ನಿರಾಶೆ ಮೂಡಿಸಿದರು.

100ಮೀ. ಓಟ ಸ್ಪರ್ಧೆಯ ಮೊದಲ ಸುತ್ತಿನಲ್ಲಿ ವಿಫಲರಾಗಿದ್ದದ ಅವರು 23.85ಸೆಕೆಂಡ್‌ಗಳಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಓಡಿಶಾದ ೨೫ ವರ್ಷದ ದ್ಯುತಿ ತಮ್ಮ ಕ್ರೀಡಾ ಋತುವಿನಲ್ಲಿ ವೈಯಕ್ತಿಕವಾಗಿ 23 ಸೆಕೆಂಡ್‌ಗಳೊಂದಿಗೆ ಅತ್ಯುತ್ತಮ ಸಾಧನೆ ಮಾಡಿದರಾದರೂ 200 ಮೀ. ಸೆಮಿಫೈನಲ್ಸ್ ಅರ್ಹತಾ ಸುತ್ತಿನಲ್ಲಿ ನಿರೀಕ್ಷಿತ ಫಲಿತಾಂಶ ಲಭಿಸಲಿಲ್ಲ.

ಅಥ್ಲೆಟಿಕ್ ಮಹಿಳೆಯರ 200 ಮೀ ರಿಲೇಯ ಮೊದಲ ಸುತ್ತಿನಲ್ಲೇ ಭಾರತದ ದ್ಯುತಿ ಚಾಂದ್ 7ನೇ ಸ್ಥಾನವನ್ನು ಪಡೆದುಕೊಳ್ಳುವುದರ ಮೂಲಕ ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಅಲ್ಲದೆ ಸ್ಪರ್ಧೆಯಿಂದ ಔಟ್ ಆಗಿದ್ದಾರೆ.

2018ರ ಏಷ್ಯನ್ ಕ್ರೀಡಾಕೂಟದಲ್ಲಿ ರಜತ ಪದಕ ಗೆದ್ದು ಒಲಿಂಪಿಕ್ಸ್‌ನಲ್ಲಿ ಭಾರೀ ಭರವಸೆ ಮೂಡಿಸಿದ್ದ ಈ ಓಟಗಾತಿಯ ವಿಫಲತೆ ಕ್ರೀಡಾಭಿಮಾನಿಗಳಲ್ಲಿ ಬೇಸರಕ್ಕೆ ಕಾರಣವಾಗಿದೆ.

ಇನ್ನು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಈವರೆಗೂ 2 ಪದಕಗಳನ್ನು ಗೆದ್ದಿದ್ದು, ಮಹಿಳಾ ವೇಟ್ ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು (49 ಕೆಜಿ ವಿಭಾಗ) ಭಾರತಕ್ಕೆ ಬೆಳ್ಳಿ ಪದಕ ತಂದಿದ್ದು, ನಿನ್ನೆ ಬ್ಯಾಡ್ಮಿಂಟನ್ ನಲ್ಲಿ ಪಿ.ವಿ. ಸಿಂಧು ಕಂಚಿನ ಪದಕ ಗೆದ್ದಿದ್ದಾರೆ.

ಅಂತೆಯೇ ಮಹಿಳೆಯರ 69 ಕೆಜಿ ವಿಭಾಗದ ಬಾಕ್ಸಿಂಗ್ ಎರಡನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತದ ಲವ್ಲಿನಾ ಬರ್ಗಹೈನ್ ಅವರು ಚೈನೀಸ್ ತೈಪೆಯ ಚೆನ್ ನಿಯೆನ್-ಚಿನ್ ವಿರುದ್ಧ 4-1 ಅಂತರದಲ್ಲಿ ಜಯ ಸಾಧಿಸುವುದರ ಮೂಲಕ ಸೆಮಿಫೈನಲ್ ಪ್ರವೇಶಿಸಿದ್ದು, ಭಾರತಕ್ಕೆ ಮತ್ತೊಂದು ಪದಕ ಖಾತ್ರಿ ಪಡಿಸಿದ್ದಾರೆ.

ಹಾಸನ: ಮಂಗಗಳ ಮಾರಣಹೋಮ ಪ್ರಕರಣ- ಐವರ ಬಂಧನ

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು