NEWSಕ್ರೀಡೆ

ಕೆಕೆಆರ್‌ ವಿರುದ್ಧ ಆರ್‌ಸಿಬಿ ಸೋತರೂ ಬೌಲಿಂಗ್​ನಲ್ಲಿ ಮಿಂಚಿದ ಕನ್ನಡಿಗ ವೈಶಾಕ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಆರ್​ಸಿಬಿ ತಂಡ ಕೋಲ್ಕತ್ತ ನೈಟ್​ ರೈಡರ್ಸ್​ ವಿರುದ್ಧ ಹೀನಾಯವಾಗಿ ಸೋತಿದೆ. ಆರ್​ಸಿಬಿ ಸೋಲಿಗೆ ಬೌಲಿಂಗ್ ವಿಭಾಗವೇ ಪ್ರಮುಖ ಕಾರಣ. ನಂಬುಗೆಯ ಬೌಲರ್ಸ್​ ತುಂಬಾನೇ ದುಬಾರಿಯಾದರು. ಪರಿಣಾಮ ಕೆಕೆಆರ್ ತಂಡದ ಮುಂದೆ ಆರ್​ಸಿಬಿ ತಲೆ ಬಾಗಬೇಕಾಯಿತು.

ಮೊಹ್ಮದ್ ಸಿರಾಜ್, ಜೋಸೆಫ್, ಯಶ್ ದಯಾಳ್ ತುಂಬಾನೇ ದುಬಾರಿಯಾದರು. ಸಿರಾಜ್ ಮೂರು ಓವರ್​ ಮಾಡಿ ಯಾವುದೇ ವಿಕೆಟ್ ಪಡೆಯದೇ 46 ರನ್​ಗಳನ್ನು ನೀಡಿದರು. ಅದೇ ರೀತಿ ಯಶ್ ದಯಾಳ್ ಕೂಡ 4 ಓವರ್ ಮಾಡಿ 46 ರನ್​ ನೀಡಿದರು. ಇನ್ನು, ಜೋಸೆಫ್ ಕೇವಲ 2 ಓವರ್ ಮಾಡಿ 34 ರನ್​​ ನೀಡಿದರು.

ವಿಶೇಷ ಅಂದರೆ ಕನ್ನಡಿಗ ವಿಜಯಕುಮಾರ್ ವೈಶಾಕ್‌ 4 ಓವರ್​ ಮಾಡಿ 23 ರನ್​​ಗಳನ್ನು ಮಾತ್ರ ನೀಡಿ ಒಂದು ವಿಕೆಟ್ ಪಡೆದರು. ಹಾಗೆಯೇ ಮಯಾಂಕ್ ಡಗರ್​ ಅವರು 2.5 ಓವರ್ ಮಾಡಿ ಒಂದು ವಿಕೆಟ್ ಪಡೆದು 23 ರನ್​​ ಕೊಟ್ಟರು. ವಿಶೇಷ ಅಂದರೆ ಕಮರೂನ್ ಗ್ರೀನ್ ಕೇವಲ ಒಂದು ಓವರ್ ಮಾಡಿ 7 ರನ್​ ಮಾತ್ರ ನೀಡಿದ್ದರು.

ಎಲ್ಲ ಬೌಲರ್​ಗಳಿಂತ ಗ್ರೀನ್ ಬೆಟರ್​​ ಬೌಲಿಂಗ್ ಮಾಡಿ ಗಮನ ಸೆಳೆದರು. ಇನ್ನು ಮೊದಲು ಬ್ಯಾಟ್ ಮಾಡಿದ್ದ ಆರ್​ಸಿಬಿ ಕೊಹ್ಲಿ ಅವರ 86 ರನ್​ಗಳ ಅಜೆಯ ಆಟದಿಂದ 6 ವಿಕೆಟ್ ಕಳೆದುಕೊಂಡು 182 ರನ್​ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಕೆಕೆಆರ್, ಮೂರು ವಿಕೆಟ್ ಕಳೆದುಕೊಂಡು 186 ರನ್​ಗಳಿಸಿ ಸಂಭ್ರಮಿಸಿತು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ