CrimeNEWSನಮ್ಮಜಿಲ್ಲೆ

ಕಿಚ್ಚುಗುತ್ತಿ ಮಾರಮ್ಮ ದೇಗುಲದ ಪ್ರಸಾದದಲ್ಲಿ ವಿಷವಿತ್ತು 4 ವರ್ಷ- ಮೃತರ ಸ್ಮರಣೆ

ವಿಜಯಪಥ ಸಮಗ್ರ ಸುದ್ದಿ

ಹನೂರು : ತಾಲೂಕಿನ ಸುಳ್ವಾಡಿ ಗ್ರಾಮದ ಹೊರವಲಯದಲ್ಲಿರುವ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ‌ ಪ್ರಸಾದಕ್ಕೆ ಕಿಡಿಗೇಡಿಗಳು ವಿಷ ಬೆರೆಸಿ ಭಕ್ತರಿಗೆ ನೀಡಿದ್ದರಿಂದ ಆದ ಪ್ರಮಾದ ಇವತ್ತಿಗೂ ಯಾರೂ ಮರೆಯುವಂತಿಲ್ಲ. ಆ ಒಂದು ಭೀಕರ ಘಟನೆಗೆ ‌ನಡೆದು ನಾಲ್ಕು ವರ್ಷವಾದ‌ ಹಿನ್ನೆಲೆ‌ ಹಿರಿಯ ಮುಖಂಡ ಪೆದ್ದನಪಾಳ್ಯ ಮಣಿ‌ ನೇತೃತ್ವದಲ್ಲಿ‌ ಸಂತಾಪ ಸೂಚಿಸಲಾಯಿತು.

ದೇವಿಯ ದರ್ಶನಕ್ಕೆ ಬಂದು ಪ್ರಸಾದ ಸ್ವೀಕರಿಸಿ ಪ್ರಾಣ ಬಿಟ್ಟವರ ಸಂಖ್ಯೆ 17. ಹಾಗೆಯೇ ಸಂತ್ರಸ್ತರಾದವರು 129 ಮಂದಿ. ಅಂದು ಸಂತ್ರಸ್ತರಾದವರ ಪರಿಸ್ಥಿತಿ ಇಂದಿಗೂ ಅತಂತ್ರವಾಗಿಯೇ ಇದೆ. ಇವತ್ತಿಗೂ 2018ರ ಡಿಸೆಂಬರ್ 14ರ ಆ ದುರಂತದ ಕರಾಳ ನೆನಪು ಎಲ್ಲರಲ್ಲಿ‌ ಕಹಿಯಾಗಿ ಉಳಿದಿದೆ. ಯಾರದೋ ಕಿಚ್ಚಿಗೆ ಬಲಿಯಾದ ಅಮಾಯಕ ಜೀವಗಳು ಕಣ್ಣ ಮುಂದೆ ಬರುತ್ತವೆ.

ಕಿಚ್ಚುಗುತ್ತಿ ಮಾರಮ್ಮ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಟ್ರಸ್ಟ್ ರಚನೆಯಾಯಿತು. ಆ ಟ್ರಸ್ಟ್ ಗೆ ಅಧ್ಯಕ್ಷರಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಬೃಹನ್ಮಠದ ಕಿರಿಯ ಇಮ್ಮಡಿ ಮಹದೇವ ಸ್ವಾಮೀಜಿಯನ್ನು ನೇಮಕ ಮಾಡಲಾಗಿತ್ತು.

ಏಳೆಂಟು ಮಂದಿ ಟ್ರಸ್ಟಿಗಳಿದ್ದರು. ಇದೆಲ್ಲದರ ನಡುವೆ ಟ್ರಸ್ಟ್‌ನ ಮ್ಯಾನೇಜರ್ ಪತ್ನಿ ಅಂಬಿಕಾಗೂ ಅಧ್ಯಕ್ಷ ಇಮ್ಮಡಿ ಮಹದೇವ ಸ್ವಾಮಿಗೂ ನಂಟು ಇದ್ದಿದ್ದರಿಂದಾಗಿ ಆಕೆಯೇ ಟ್ರಸ್ಟ್‌ನ ಅಧ್ಯಕ್ಷಳಂತೆ ವರ್ತಿಸಲು ಶುರು ಮಾಡಿದ್ದಳು. ದಿನಕಳೆದಂತೆ ಕಿಚ್ಚುಗುತ್ತಿ ಮಾರಮ್ಮ ದೇವಾಲಯದ ಆಡಳಿತದ ಅಧಿಕಾರ ಹಿಡಿಯಲು ಹಾತೊರೆಯುತ್ತಿದ್ದಳು. ಇದಕ್ಕೆ ಬೆಂಗಾವಲಾಗಿ ನಿಂತಿದ್ದು ಬೃಹನ್ಮಠದ ಕಿರಿಯ ಇಮ್ಮಡಿ ಸ್ವಾಮೀಜಿ ಇದೇ ದುರಂತಕ್ಕೆ ಕಾರಣವಾಯಿತು.

ಮಾಸುವುದಿಲ್ಲ ಆ ದುರಂತದ ಕ್ಷಣ: ಪ್ರಸಾದಕ್ಕೆ ವಿಷ ಬೆರೆಸಿ ಒಂದಷ್ಟು ಮಂದಿಗೆ ಆರೋಗ್ಯ ಏರುಪೇರಾಗಿ ದೇವಸ್ಥಾನದ ಟ್ರಸ್ಟ್‌ಗೆ ಕೆಟ್ಟ ಹೆಸರು ತರಬೇಕೆಂಬುದು ಅವರ ಇರಾದೆಯಾಗಿತ್ತು. ಹೀಗಾಗಿಯೇ ಅವರು ಟೊಮೋಟೋ ಬಾತ್ ಮಾಡಿ ಅದರಲ್ಲಿ ಕ್ರಿಮಿನಾಶಕ ಬೆರೆಸಿ ಭಕ್ತರಿಗೆ ಹಂಚಿದ್ದರು. ಆದರೆ ಅಂದು ಆಗಿದ್ದೇ ಬೇರೆ. ವಿಷಕ್ಕೆ 17 ಮಂದಿ ಅಮಾಯಕರು ಪ್ರಾಣ ಬಿಟ್ಟರು. 129 ಮಂದಿ ಪ್ರಾಣಾಪಾಯದಿಂದ ಪಾರಾದರೂ ಒಂದಲ್ಲ ಒಂದು ತೊಂದರೆಯಿಂದ ಬಳಲುತ್ತಿದ್ದಾರೆ.

ಇಂದಿಗೂ ಈ ದೇವಾಲಯದ ಸುತ್ತಲಿನ ಗ್ರಾಮಗಳಾದ ಬಿದರಳ್ಳಿ, ಮಾರ್ಟಳ್ಳಿ, ಸುಳ್ವಾಡಿ, ಎಂ.ಜಿ.ದೊಡ್ಡಿ ಹೀಗೆ ಹಲವು ಗ್ರಾಮಗಳ ಜನ ಆ ದುರಂತದ ಕ್ಷಣಗಳನ್ನು ನೆನಪಿಸಿಕೊಂಡು ಕಣ್ಣೀರಿಡುತ್ತಿದ್ದಾರೆ ಎಂದು ಪೆದ್ದನಪಾಳ್ಯ ಮಣಿ ಕಂಬನಿ‌ ಮೀಡಿದರು.‌

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ