NEWSಕೃಷಿನಮ್ಮರಾಜ್ಯ

ಕಾಡು ಪ್ರಾಣಿಗಳಿಂದ ಬೆಳೆ ಹಾನಿ ತಪ್ಪಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ: ಕುರುಬೂರು ಕಿಡಿ

ವಿಜಯಪಥ ಸಮಗ್ರ ಸುದ್ದಿ

ಎಚ್.ಡಿ.ಕೋಟೆ: ಕಾಡು ಪ್ರಾಣಿಗಳ ಹಾವಳಿ ರೈತರ ಬೆಳೆ ಹಾನಿ ತಪ್ಪಿಸಲು ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಕಾಡಂಚಿನ ಪ್ರದೇಶದಲಿ ರೈತರ ಬೆಳೆಗಳನ್ನ ನಾಶ ಮಾಡಿ ಜನಸಾಮಾನ್ಯರ ಬದುಕಿಗೆ ಭಯದ ವಾತಾವರಣ ಸೃಷ್ಟಿಸುತ್ತಿರುವ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಅರಣ್ಯ ಇಲಾಖೆ ನಿರ್ಲಕ್ಷ ತನ ತೋರುತ್ತಿದೆ. ಕೂಡಲೇ ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಇಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಎಚ್.ಡಿ.ಕೋಟೆ ತಾಲೂಕು ರೈತರ ಸಭೆಯಲ್ಲಿ ಆಗ್ರಹಿಸಿದರು.

ಬರಗಾಲದ ಸಂಕಷ್ಟದಲ್ಲಿರುವ ರೈತರ ಸಾಲ ವಸೂಲಾತಿಗಾಗಿ ಬ್ಯಾಂಕುಗಳು ರೈತರಿಗೆ ಕಿರುಕುಳ ಕೊಡುವುದನ್ನು ನಿಲ್ಲಿಸಿ, ಬರ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಳ್ಳುವುದನ್ನು ತಪ್ಪಿಸಬೇಕು. ಮಳೆಯಿಂದ ಹಾನಿಯಾಗಿರು ಫಸಲಿಗೆ ಹಾಗೂ ಬಾಳೆ ಬೆಳೆ ಸೇರಿ ಮತ್ತಿತರ ಬೆಳೆ ನಷ್ಟ ಆಗಿರುವುದಕ್ಕೆ ಸಂಪೂರ್ಣ ನಷ್ಟ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಹಾಲು ಉತ್ಪಾದಕ ರೈತರಿಗೆ ಪ್ರೋತ್ಸಾಹಧನ ಐದು ರೂಪಾಯಿ ಕೂಡ ಕಳೆದ ಎಂಟು ತಿಂಗಳಿಂದ ಬಿಡುಗಡೆ ಮಾಡಿಲ್ಲ. ಸುಮಾರು 700 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು. ಕಾವೇರಿ ಪ್ರಾಧಿಕಾರದ ಸೂಚನೆ ಧಿಕ್ಕರಿಸಿ ಕಾವೇರಿ ಕೊಳ್ಳದ ರೈತರ ಹಿತರಕ್ಷಿಸಿ.

ಕಾವೇರಿ ಅಚ್ಚುಕಟ್ಟು ಭಾಗದಲ್ಲಿ ಕಳೆದ ವರ್ಷ ಬರಗಾಲದ ಕಾರಣ ಯಾವುದೇ ಬೆಳೆ ಬೆಳೆದಿಲ್ಲ ಎಂಬುದನ್ನು ಗಂಭೀರವಾಗಿ ಅರಿತು ನೀರು ಹರಿಸುವುದಿಲ್ಲ ಎಂದು ಕಾವೇರಿ ಪ್ರಾಧಿಕಾರಕ್ಕೆ ತಿಳಿಸಲಿ ಎಂದು ಆಗ್ರಹಿಸಿದರು.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಸಂಘಟನಾ ಕಾರ್ಯದರ್ಶಿ ಕೆಂಡಗಣ್ಣಸ್ವಾಮಿ, ತಾಲೂಕ ಅಧ್ಯಕ್ಷ ರಾಜೇಶ್, ಸರಗೂರು ತಾಲೂಕು ಉಪಾಧ್ಯಕ್ಷ ಸುನಿಲ್, ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ, ಅಂಬಳೆ ಮಂಜುನಾಥ, ಗಂಗಾಧರ, ಕೆಂಡಗಣ್ಣಪ್ಪ ಮತ್ತಿತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ