CrimeNEWSನಮ್ಮಜಿಲ್ಲೆನಮ್ಮರಾಜ್ಯ

ಕಾಡಾನೆ ಎಂದು ದಸರಾ ಆನೆ ಬಲರಾಮನಿಗೆ ಗುಂಡು ಹೊಡೆದವನ ಬಂಧನ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ತಮ್ಮ ಜಮೀನನ ಫಸಲನ್ನು ನಾಶ ಮಾಡಲು ಕಾಡಾನೆ ಬಂದಿದೆ ಎಂದು ದಸರಾ ಆನೆ ಬಲರಾಮನಿಗೆ ಗುಂಡು ಹೊಡೆದಿದ್ದ ಜಮೀನೊಂದರ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪದಲ್ಲಿದ್ದ ಜಮೀನಿಗೆ ಬಲರಾಮ ಆನೆ ಹೋಗಿತ್ತು. ಈ ವೇಳೆ ಜಮೀನಿನ ಮಾಲೀಕ ಸುರೇಶ್‌ ಎಂಬಾತ ಸಿಂಗಲ್‌ ಬ್ಯಾರಲ್‌ ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದ.

ಪರಿಣಾಮ ಬಲರಾಮ ಆನೆ ತೊಡೆ ಭಾಗಕ್ಕೆ ಗುಂಡು ಹೊಕ್ಕಿ ಗಾಯಗೊಂಡು ಜಮೀನನಲ್ಲೇ ನರಳುತ್ತಿತ್ತು. ಈ ನಡುವೆ ಇತ್ತ ಸಂಜೆಯಾದರೂ ಬಲರಾಮ ಬರಲಿಲ್ಲವಲ್ಲ ಎಂದು ಮಾವುತರು ಹುಡುಕಿಕೊಂಡು ಹೋದಾಗ ಜಮೀನಿನಲ್ಲಿ ನರಳುತ್ತ ಬಿದ್ದಿರುವುದನ್ನು ಕಂಡು ಕೂಡಲೇ ವೈದ್ಯರಿಗೆ ಕರೆ ಮಾಡಿ ಮಾಹಿತಿ ನೀಡಿದರು.

ಬಳಿಕ ಸಾಕಾನೆ ಶಿಬಿರಕ್ಕೆ ಬಲರಾಮನನ್ನು ಕರೆತಂದು ಚಿಕಿತ್ಸೆ ನೀಡಿದ್ದಾರೆ. ಗುಂಡು ತೀರ ಒಳಗೆ ಹೋಗಿಲ್ಲದಿರುವುದರಿಂದ ಬಲರಾಮನ ಪ್ರಾಣಕ್ಕೆ ಏನು ತೊಂದರೆ ಇಲ್ಲ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪಶುವೈದ್ಯಾಧಿಕಾರಿ ಡಾ.ರಮೇಶ್ ಆನೆಗೆ ಚಿಕಿತ್ಸೆ ಮುಂದುವರಿಸಿದ್ದು, ಬಲರಾಮ‌ ಚೇತರಿಸಿಕೊಳ್ಳುತ್ತಿದ್ದಾನೆ.

ಇತ್ತ ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಬಂದೂಕು, ಕಾರ್ಟ್ರಿಜ್‌ನ್ನು ವಶಪಡಿಸಿಕೊಳ್ಳಲಾಗಿದೆ. ಜಮೀನು ಮಾಲೀಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಒಕ್ಕಣ್ಣನಾದ ಬಲರಾಮ ಆನೆ ಮೈಸೂರು ದಸರಾ ಮಹೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಮೂಲಕ ತನ್ನ ಗಾಂಭೀರ್ಯದ ನಡೆಯಿಂದ ಜಂಬೂಸವಾರಿ ವೇಳೆ ಇಡೀ ನೋಡುಗರ ಮನಗೆದಿದ್ದಾನೆ. ಹೀಗೆ 14 ಬಾರಿ ಚಿನ್ನದ ಅಂಬಾರಿಯನ್ನು ಹೊತ್ತು ದಸರಾ‌ ಮೆರವಣಿಗೆಯಲ್ಲಿ ಸಾಗಿದ್ದು ಈಗ ವಯಸ್ಸಾಗಿರುವುದರಿಂದ ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾನೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ