NEWSನಮ್ಮಜಿಲ್ಲೆ

ಕೇಂದ್ರದಿಂದ ಮಾಹಿತಿ ಬಾರದ ಹಿನ್ನೆಲೆ: ವಿದ್ಯುತ್ ಬಿಲ್ ಪಾವತಿಸಿ

ಗ್ರಾಹಕರಿಗೆ ಅಪರ ಮುಖ್ಯಕಾರ್ಯದರ್ಶಿ ಮಹೇಂದ್ರ ಜೈನ್ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಉತ್ಪಾದಕರ ಬಿಲ್‍ನ್ನು ಪಾವತಿಸಲು ಹಾಗೂ ಗ್ರಾಹಕರಿಗೆ ಅಡಚಣೆ ರಹಿತ ವಿದ್ಯುತ್ ಸರಬರಾಜು ಮಾಡಲು ಅನುವಾಗುವಂತೆ ಮಾಡಲು ಗ್ರಾಹಕರನ್ನು ಆನ್‍ಲೈನ್, ಡಿಜಿಟಲ್ ವಿಧಾನಗಳ ಮೂಲಕ ವಿದ್ಯುತ್ ಬಿಲ್ಲನ್ನು ಪಾವತಿಸಲು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಮಹೇಂದ್ರ ಜೈನ್ ವಿನಂತಿಸಿದ್ದಾರೆ.

ವಿದ್ಯುತ್ ಗ್ರಾಹಕರು ಮೂರು ತಿಂಗಳ ಅವಧಿಗೆ ಬಿಲ್ ಪಾವತಿಸುವುದನ್ನು  ಮುಂದೂಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದು, ಆದರೆ ಬಿಲ್ ಪಾವತಿಯ ಬಗ್ಗೆ ಕೇಂದ್ರ ಇಂಧನ ಸಚಿವಾಲಯದಿಂದ ರಾಜ್ಯ ಸರ್ಕಾರ ಅಥವಾ ವಿದ್ಯುತ್ ಸರಬರಾಜು ಕಂಪನಿಗಳು ಯಾವುದೇ ನಿರ್ದೇಶನಗಳನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ.

ಏಪ್ರಿಲ್ ಮಾಹೆಯ ಮಾಸಿಕ ಮಾಪಕ ಓದುವಿಕೆ ಹಾಗೂ ಬಿಲ್ ವಿತರಣೆಯನ್ನು  ಸರಾಸರಿ ಬಿಲ್ ಅಥವಾ ಹಿಂದಿನ ತಿಂಗಳ  ಬಿಲ್‍ನ್ನು ನೀಡುವ ಮೂಲಕ  ನಿರ್ವಹಿಸಲಾಗುವುದು.

ಹಾಲಿ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಎಲ್ಲಾ ವಿದ್ಯುತ್ ಗ್ರಾಹಕರಿಗೆ ವಿದ್ಯುತ್  ಬಿಲ್‍ನ್ನು ಇ-ಮೇಲ್, ಎಸ್‍ಎಮ್‍ಎಸ್, ಪಾಟ್ಸಾಪ್ ಮುಖಾಂತರ ಕಳುಹಿಸಲಾಗುವುದು. ಗ್ರಾಹಕ ಸಹಾಯವಾಣಿ 1912 ಗೆ ಕರೆ ಮಾಡಿ, ಅಕೌಂಟ್ ಐಡಿ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿ ಬಿಲ್ ವಿವರಗಳನ್ನು ಪಡೆಯಬಹುದು. ಅಲ್ಲದೇ ವಿದ್ಯುತ್ ಸರಬರಾಜು ಕಂಪನಿಯ ಮೊಬೈಲ್ ಆಪ್,  ಜಾಲತಾಣದಲ್ಲಿ ನೋಂದಾಯಿಸಿಕೊಂಡು ಸಹ ಬಿಲ್ ವಿವರಗಳನ್ನು ಪಡೆಯಬಹುದಾಗಿದೆ. ಗ್ರಾಹಕರು ಸಂಬಂಧಪಟ್ಟ ಉಪವಿಭಾಗ ಕಛೇರಿಯನ್ನು ಸಂಪರ್ಕಿಸಿ ಬಿಲ್ ವಿವರಗಳನ್ನು ಪಡೆಯಬಹುದಾಗಿದೆ.

ಆನ್‍ಲೈನ್ ಪಾವತಿಗಳನ್ನು ವಿದ್ಯುತ್ ಸರಬರಾಜು ಕಂಪನಿಗಳ ಜಾಲತಾಣದಲ್ಲಿ, ಕರ್ನಾಟಕ-1 ರ ಜಾಲತಾಣ,  ಮೊಬೈಲ್ ಆಪ್‍ಗಳಲ್ಲ, ಬಿಬಿಪಿಎಸ್ ಮೂಲಕ ಪಾವತಿಸಲು ಎಲ್ಲಾ ಬ್ಯಾಂಕುಗಳ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ವಾಲೆಟ್ ಪೇಮೆಂಟ್, ಯುಪಿಐ ಪೇಮೆಂಟ್, ಪೇಯು ಆಪ್ ಹಾಗೂ ಐಎಂಐ ಮೊಬೈಲ್ ಆಪ್ ಇವುಗಳಲ್ಲಿ ಯಾವುದೇ ವಿಧಾನದ   ಮೂಲಕ  ಪಾವತಿಸಬಹುದಾಗಿದೆ.

ಯಾವುದೇ ಗ್ರಾಹಕರು ಬಿಲ್ ಪಾವತಿಸಲು ಅನಿವಾರ್ಯ ಕಾರಣಗಳಿಂದ ಸಾಧ್ಯವಾಗದಿದ್ದಲ್ಲಿ, ಅಂತಹ ಗ್ರಾಹಕರು ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿಗಳ ಉಪವಿಭಾಗಾಧಿಕಾರಿಗಳ ಕಛೇರಿಗೆ ಲಿಖಿತ ಮನವಿ ಸಲ್ಲಿಸಲು ಕೋರಿರುತ್ತಾರೆ.

ಈ ವಿಧಾನವು ಪ್ರಸ್ತುತ ಮಾಹೆಗೆ ಮಾತ್ರ ಅನ್ವಯವಾಗಲಿದ್ದು, ಮೇ 1  ರಿಂದ ಹಿಂದಿನಂತೆ ಮಾಪಕ ಓದುವಿಕೆ, ಬಿಲ್ ಹಂಚುವಿಕೆ ಹಾಗೂ ಬಿಲ್ ಸ್ವೀಕೃತಿ ಚಟುವಟಿಕೆಗಳನ್ನು ನಿರ್ವಹಿಸಲಾಗುವುದು ಮತ್ತು ಸರಾಸರಿ ಬಿಲ್ಲಿನಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಮುಂದಿನ ಮಾಹೆಯ ಬಿಲ್ಲಿನಲ್ಲಿ ಸರಿಪಡಿಸಲಾಗುವುದು ಎಂದು  ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!