NEWSಕೃಷಿ

ಕನಿಷ್ಠ ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರವು 2019-20ನೇ ಸಾಲಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ    FAQ ಗುಣಮಟ್ಟದ  ತೊಗರಿಗೆ ಪ್ರತಿ ಕ್ವಿಂಟಾಲ್ ಗೆ 6100 ರೂ. ನಂತೆ ಖರೀದಿಸಲು ಆದೇಶಿಸಿದೆ. ಅದರಂತೆ 3.18 ಲಕ್ಷ ರೈತರು ನೋಂದಾಯಿಸಿಕೊಂಡಿದ್ದು, 2.53 ಲಕ್ಷ ರೈತರಿಂದ 22.75 ಲಕ್ಷ ಕ್ವಿಂಟಾಲ್ ತೊಗರಿಯನ್ನು ಈಗಾಗಲೇ ಖರೀದಿಸಲಾಗಿದೆ.

ಬೆಂಬಲ ಬೆಲೆ ಯೋಜನೆಯಡಿ ಪ್ರತಿ ರೈತರಿಂದ ಗರಿಷ್ಠ 10 ಕ್ವಿಂಟಾಲ್ ಮಾತ್ರ ತೊಗರಿ ಖರೀದಿಸಲಾಗಿದ್ದು, ಕೇಂದ್ರ ಸರ್ಕಾರವು ಇನ್ನೂ 5 ಕ್ವಿಂಟಾಲ್ ತೊಗರಿಯನ್ನು ಈಗಾಗಲೇ ನೋಂದಾಯಿಸಿಕೊಂಡು ಮಾರಾಟ ಮಾಡಿದ ರೈತರಿಂದ ಖರೀದಿಸಲು ಅನುಮತಿಸಿದೆ.

ಬೆಂಬಲ ಬೆಲೆ ಯೋಜನೆಯ ಪ್ರಯೋಜನ ಪಡೆಯದೇ ಬಾಕಿ ಉಳಿದ 65.316 ಜನ ರೈತರಿಂದ ಬೆಲೆ ಸ್ಥಿರೀಕರಣ ಯೋಜನೆಯಡಿ (PSಈ) ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ತೊಗರಿಯನ್ನು ಖರೀದಿಸಲು ಕೇಂದ್ರ ಸರ್ಕಾರ ಅನುಮತಿಸಿರುತ್ತದೆ. ಆದುದರಿಂದ ಬೆಂಬಲ ಬೆಲೆ ಯೋಜನೆಯಡಿ ನೊಂದಾಯಿಸಿ ಪ್ರಯೋಜನ ಪಡೆಯದ ರೈತರು ಕೂಡಲೇ ಖರೀದಿ ಕೇಂದ್ರಕ್ಕೆ ಹೋಗಿ ತಾವು ಬೆಳೆದ ತೊಗರಿಯನ್ನು ಪ್ರತಿ ಕ್ವಿಂಟಾಲ್ ಗೆ 6100 ರೂ.ನಂತೆ ಬೆಲೆ ಸ್ಥಿರೀಕರಣ ಯೋಜನೆಯಡಿ ಮಾರಾಟ ಮಾಡಬಹದು ಏ.20ಕ್ಕೆ ಅಂತ್ಯವಾಗುವಂತೆ 32,421 ರೈತರಿಂದ ಒಟ್ಟು 2.98 ಲಕ್ವ ಕ್ವಿಂಟಾಲ್ ತೊಗರಿ ಖರಿದಿಸಿರುವುದಾಗಿ ಮಾರ್ಕ್‍ಫೆಡ್ (ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಳ) ತಿಳಿಸಿದೆ.

ಕೊವಿಡ್ -19 ವ್ಯವಸ್ಥೆಗೆ ಯಾವುದೇ ಭಂಗವಾಗದ ರೀತಿಯಲ್ಲಿ ರೈತರುಗಳು ಸಹಕರಿಸಿ, ಇದರ ಪ್ರಯೋಜನವನ್ನು ಪಡೆಯಬಹುದು ಎಂದು ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ  ತಿಳಿಸಿದ್ದಾರೆ.

ಕಡಲೆ: ಕೇಂದ್ರ ಸರ್ಕಾರವು ಗುಣಮಟ್ಟದ  ಕಡಲೆಗೆ ಪ್ರತಿ ಕ್ವಿಂಟಾಲ್ ಗೆ 4875 ರೂ.ನಂತೆ ಗರಿಷ್ಢ 14.34 ಲಕ್ಷ ಕ್ವಿಂಟಾಲ್ ಖರೀದಿಸಲು ಅನುಮತಿಸಿದೆ. ಈವರೆವಿಗೆ 1,04,313 ಜನ ರೈತರು ನೊಂದಾಯಿಸಿಕೊಂಡಿದ್ದು, ಏ.21ರ ಅಂತ್ಯಕ್ಕೆ 51,172 ಜನ ರೈತರಿಂದ 4.42 ಲಕ್ಷ ಕ್ವಿಂಟಾಲ್ ಖರೀದಿಸಿರುವುದಾಗಿ ಮಾರ್ಕ್‍ಫೆಡ್ ಸಂಸ್ಥೆ ತಿಳಿಸಿದೆ. ಮಾರ್ಕ್‍ಫೆಡ್ ಸಂಸ್ಥೆ ಖರೀದಿ ಮಾಡುತ್ತಿದ್ದು, ಕಡಲೆ ಬೆಳೆಗಾರರು ಇದರ ಪ್ರಯೋಜನವನ್ನು ಪಡೆಯಬಹುದು ಎಂದು ಬೆಳಗುರ್ಕಿ  ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ