CrimeNEWSನಮ್ಮರಾಜ್ಯ

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಬಿಗ್‌ ರಿಲೀಫ್‌ ನೀಡಿದ ಹೈ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ವಿಚಾರಣೆ ಎದರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಹೈ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ.

ರಾಜ್ಯದಲ್ಲಿ ಇನ್ನು ಕೆಲವೆ ಕೆಲವು ದಿನಗಳಲ್ಲಿ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಬರುತ್ತಿದ್ದು, ಈ ಚುನಾವಣೆಯಲ್ಲಿ ಡಿಕೆಶಿ ಅವರನ್ನು ಮಾನಸಿಕವಾಗಿ ಹಿಂಸಿಸಬೇಕು ಎಂಬ ಉದ್ದೇಶದಿಂದಲೋ ಏನೋ ಗೊತ್ತಿಲ್ಲ.

ಆದರೆ ಈ ಸಂದರ್ಭದಲ್ಲಿ ಡಿಕೆಶಿ ಮತ್ತು ಅವರ ಕುಟುಂಬದವರಿಗೆ ಸಿಬಿಐ (CBI) ನೋಟಿಸ್ ಕೊಡುತ್ತಲೇ ಇದೆ. ಹೀಗೆ ಸುಖಾಸುಮ್ಮನೆ ಹಿಂಸೆ ಕೊಡುವ ಕೆಲಸವನ್ನು ಮಾಡುತ್ತಾ ಇದ್ದಾರೆ ಎಂಬ ವಿಚಾರವನ್ನು ಶಿವಕುಮಾರ್‌ ಅವರ ಪರ ವಕೀಲರಾದ ಜಾದವ್ ಕೋರ್ಟ್ ಗಮನಕ್ಕೆ ತಂದಿದ್ದರು.

ಡಿಕೆಶಿ ಅವರು ಈ ಪ್ರಕರಣದಲ್ಲಿ ಆರೋಪಿ. ಆದರೆ ಅವರನ್ನು ಹೊರತುಪಡಿಸಿ ಅವರ ಪುತ್ರಿಯನ್ನು ವಿಚಾರಣೆಗೆ ಹಾಜರಾಗುವಂತೆ ಕರೆಯುತ್ತಿದ್ದಾರೆ. ಇದರಿಂದ ಅವರ ಕುಟುಂಬಕ್ಕೆ ತೊಂದರೆ ಆಗುತ್ತಿದೆ. ಚುನಾವಣೆಗೆ ಅಡ್ಡಿಪಡಿಸಬೇಕು, ಮಾನಸಿಕ ಹಿಂಸೆ ಕೊಡಬೇಕು ಅಂತಲೇ ಈ ರೀತಿ ಮಾಡಲಾಗುತ್ತಿದೆ ಎಂದು ಕೋರ್ಟ್ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಅವರ ಪುತ್ರಿ ಚುನಾವಣೆ ಸ್ಪರ್ಧೆ ಮಾಡುತ್ತಿಲ್ಲ ಅಲ್ವಾ? ವಿಚಾರಣೆಗೆ ಹಾಜರಾಗಲು ತೊಂದರೆ ಏನಿದೆ? ವಿಚಾರಣೆಗೆ ಸಹಕರಿಸಬೇಕು ಅಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಸಿಬಿಐ ಪರ ವಕೀಲ ಪ್ರಸನ್ನಕುಮಾರ್ ವಾದ ಮಂಡಿಸಿ, ಡಿಕೆಶಿ ಅವರ ಮಗಳ ಹೆಸರಿನಲ್ಲಿ 150 ಕೋಟಿ ರೂ. ಆಸ್ತಿ ಇದೆ. ಅದರ ಮೌಲ್ಯ ಏನು ಅಂತ ತಿಳಿದುಕೊಳ್ಳಬೇಕು. ತನಿಖೆ ಇನ್ನೂ 6 ತಿಂಗಳು ನಡೆಯಲಿದೆ. ಬಳಿಕ ಅಂತಿಮ ವರದಿ ಸಲ್ಲಿಸಬೇಕು ಎಂದು ವಾದಿಸಿದರು.

ಈ ವೇಳೆ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಪೀಠ ಮೂಲ ಅರ್ಜಿಯೊಂದು ವಿಚಾರಣೆಗೆ ಬಾಕಿ ಉಳಿದಿದೆ. ಅದು ಇನ್ನೂ ಇತ್ಯರ್ಥ ಆಗದೇ ಇರುವ ಹಿನ್ನೆಲೆ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದ್ದು, ಫೆಬ್ರವರಿ 24ಕ್ಕೆ ತನಿಖಾ ಪ್ರಗತಿ ವರದಿ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್