NEWSಆರೋಗ್ಯಸಿನಿಪಥ

ಕ್ಯಾನ್ಸರ್ ಗೆದ್ದ ಶಿವಣ್ಣ: ಡಬಲ್‌ ಪವರ್‌ನೊಂದಿಗೆ ಬರುತ್ತೇನೆ ಅಂದ ನಟ 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್‌ವುಡ್ ಹಿರಿಯ ನಟ ಶಿವರಾಜ್‌ಕುಮಾರ್ ಅವರು ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ. ಕ್ಯಾನ್ಸರ್ ಗೆದ್ದಿರುವ ಶಿವಣ್ಣ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರುವ ಜತೆಗೆ ದರ್ಶನವನ್ನೂ ಕೊಟ್ಟಿದ್ದಾರೆ. ಜತೆಗೆ ಕ್ಯಾನ್ಸರ್‌ನಿಂದ ಮುಕ್ತರಾಗಿರುವ ಕುರಿತು ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಅಮೆರಿಕದಿಂದಲೇ ಅಭಿಮಾನಿಗಳಿಗೆ ಸಂದೇಶವೊಂದನ್ನು ಶಿವಣ್ಣ ದಂಪತಿ ರವಾನಿಸಿದ್ದಾರೆ. ಗೀತಾ ಶಿವರಾಜ್‌ಕುಮಾರ್‌ ಮಾತನಾಡಿ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ನೀವೆಲ್ಲರೂ ಮಾಡಿದ ಪ್ರಾರ್ಥನೆಯಿಂದ ಶಿವರಾಜ್‌ಕುಮಾರ್‌ ಎಲ್ಲ ರಿಪೋರ್ಟ್‌ ನೆಗೆಟಿವ್‌ ಬಂತು. ಅವರೀಗ ಕ್ಯಾನ್ಸರ್‌ ಫ್ರೀ ಅಂತ ವೈದ್ಯರು ಅಫಿಷಿಯಲಿ ಹೇಳಿದ್ದಾರೆ. ನಿಮ್ಮೆಲ್ಲರ ಹಾರೈಕೆಯಿಂದ ಅವರು ಗುಣಮುಖರಾಗಿದ್ದಾರೆ. ಇದನ್ನೂ ನಾನು ಎಂದಿಗೂ ಮರೆಯೋದಿಲ್ಲ ಎಂದಿದ್ದಾರೆ.

ಬಳಿಕ ಶಿವಣ್ಣ ಮಾತನಾಡಿ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಭಯ ಆಗುತ್ತೆ ಮಾತನಾಡಬೇಕಾದರೆ, ಎಲ್ಲಿ ಎಮೋಷನಲ್‌ ಆಗಿ ಬಿಡ್ತೀನಿ ಅಂತ. ಇಲ್ಲಿಂದ ಹೋಗುವಾಗ ಎಮೋಷನಲ್‌ ಆಗಿದ್ದೇ, ಭಯ ಅನ್ನೋದು ಇದ್ದೇ ಇರುತ್ತದೆ. ಆ ಭಯ ಕಮ್ಮಿ ಮಾಡೋಕೆ ಎಂದೇ ಅಭಿಮಾನಿ ದೇವರುಗಳಿದ್ದಾರೆ.

ವೈದ್ಯರು ನನ್ನ ನೋಡಿಕೊಂಡ ರೀತಿಯಿಂದ ಇನ್ನಷ್ಟು ಧೈರ್ಯ ಬಂತು. ’45’ ಚಿತ್ರದ ಶೂಟಿಂಗ್‌ ಮಾಡುವಾಗ ಕಿಮೋ ಥೆರಾಫಿಯಲ್ಲಿ ಕೆಲಸ ಮಾಡಿದ್ದೀನಿ. ಕ್ಲೈಮ್ಯಾಕ್ಸ್‌ ಫೈಟ್‌ ಎಲ್ಲ ಮಾಡಿದ್ದೇನೆ ಎಂದು ನಟ ಹಂಚಿಕೊಂಡರು.

ಅಮೆರಿಕಗೆ ಚಿಕಿತ್ಸೆಗೆ ಹೊರಡುವ ಡೇಟ್‌ ಹತ್ತಿರ ಬಂದಾಗ ಸ್ವಲ್ಪ ಒತ್ತಡ ಜಾಸ್ತಿ ಆಯಿತು. ಆದರೆ ಸದಾ ಪತ್ನಿ ಗೀತಾ ಮತ್ತು ಮಗಳು ನಿವಿ ನನ್ನ ಜೊತೆ ಬೆಂಬಲವಾಗಿ ನಿಂತಿದ್ದಾರೆ. ಹೀಗಾಗಿ ಯಾವುದೇ ಒತ್ತಡಕ್ಕೂ ಒಳಗಾಗದೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

ನನ್ನ ಚಿಕಿತ್ಸೆ ಮಾಡಿದ ವೈದ್ಯ ಮನೋಹರ್‌ ಅವರು ಮಗುವಿನಂತೆ ನನ್ನ ನೋಡಿಕೊಂಡರು. ಯೂರಿನರಿ ಬ್ಲಾಡ್‌ ತೆಗೆದು ಹೊಸದು ಬ್ಲಾಡ್‌ ಹಾಕಿದ್ದಾರೆ. ಯಾರು ಗಾಬರಿ ಆಗಬೇಡಿ ನಾನು ಆರಾಮ ಆಗಿದ್ದೇನೆ. ಐ ವಿಲ್‌ ಬಿ ಬ್ಯಾಕ್‌, ಡಬಲ್‌ ಪವರ್‌ನೊಂದಿಗೆ ಬರುತ್ತೇನೆ. ಎಲ್ಲ ನನ್ನ ಅಭಿಮಾನಿ ದೇವರುಗಳಿಗೂ ಧನ್ಯವಾದಗಳು ಎಂದು ಶಿವಣ್ಣ ಹೇಳಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು