NEWSದೇಶ-ವಿದೇಶ

ಕೊರೊನಾ ನಿಗ್ರಹಕ್ಕಾಗಿ ಭಾರತಕ್ಕೆ 2.9 ಮಿಲಿಯನ್ ಡಾಲರ್ ಘೋಷಿಸಿದ ದೊಡ್ಡಣ್ಣ

ವಿಶ್ವದ 64 ರಾಷ್ಟ್ರಗಳಿಗೆ ಸೋಕು ತಡೆಗೆ 174 ಮಿಲಿಯನ್ ಡಾಲರ್ ನೆರವು ನೀಡುತ್ತಿದೆ ಅಮೆರಿಕ

ವಿಜಯಪಥ ಸಮಗ್ರ ಸುದ್ದಿ

ವಾಷಿಂಗ್ಟನ್: ವಿಶ್ವದ 64 ರಾಷ್ಟ್ರಗಳಿಗೆ  ಕೊರೊನಾ ವೈರಸ್‌ ಸೋಕು ತಡೆಗೆ ಅಮೆರಿಕ 174 ಮಿಲಿಯನ್ ಡಾಲರ್ ಅನ್ನು ನೀಡುವುದಾಗಿ ಘೋಷಣೆ ಮಾಡಿದೆ.

ಫೆಬ್ರವರಿಯಲ್ಲಿ ಅಮೆರಿಕಾ 100 ಮಿಲಿಯನ್ ಡಾಲರ್ ಹಣವನ್ನು ನೀಡಿತ್ತು. ಈಗ ಹೊಸದಾಗಿ ಬಿಡುಗಡೆ ಮಾಡುವ ಹಣವೂ ಸೇರಿ 174 ಮಿಲಿಯನ್ ಡಾಲರ್ ಆಗಿದೆ. ಕೊರೊನಾ ವೈರಸ್‌ನಿಂದ ಹೆಚ್ಚು ತೊಂದರೆ ಅನುಭವಿಸುತ್ತಿರುವ ರಾಷ್ಟ್ರಗಳಿಗೆ ಈ ನೆರವು ನೀಡಲಾಗುತ್ತಿದೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಟ್‌ ತಿಳಿಸಿದ್ದಾರೆ.

ಅಮೆರಿಕ ಘೋಷಿಸಿದ ಹಣದಲ್ಲಿ ಭಾರತಕ್ಕೆ 2.9 ಮಿಲಿಯನ್ ಡಾಲರ್ ಸಿಗುತ್ತಿದೆ. ಇದನ್ನು ಪ್ರಯೋಗಾಲಯ ವ್ಯವಸ್ಥೆಗಳಿಗೆ, ತಾಂತ್ರಿಕ ತಜ್ಞರಿಗೆ, ಚಿಕಿತ್ಸೆಗೆ ಬಳಸುವಂತೆ ತಿಳಿಸಿದೆ.

ಈಗ ಬಿಡುಗಡೆ ಮಾಡಿರುವ ಹಣದಿಂದ ಹೆಚ್ಚಿನ ಆರೋಗ್ಯ ನೆರವು ಸಿಗುತ್ತದೆ ಎಂದು ಸ್ಟೇಟ್ ಡಿಪಾರ್ಟ್ಮೆಂಟ್ ಹೇಳಿದೆ.

ಈ ನೂತನ  ನೆರವು ಘೋಷಣೆ ಮಾಡಿರುವುದು ಜಾಗತಿಕ ಆರೋಗ್ಯ ನಾಯಕತ್ವದ ದಾಖಲೆಯನ್ನು ನಿರ್ಮಿಸುತ್ತದೆ. ದಶಕಗಳಿಂದ ಯುನೈಟೆಡ್ ಸ್ಟೇಟ್ಸ್ ಸಾರ್ವಜನಿಕ ಆರೋಗ್ಯದಲ್ಲಿ ದ್ವಿಪಕ್ಷೀಯ ನೆರವು ನೀಡುವ ವಿಶ್ವದ ಅತಿದೊಡ್ಡ ಪೂರೈಕೆದಾರ ರಾಷ್ಟ್ರವಾಗಿದೆ.

ಇದು ಆರೋಗ್ಯಕ್ಕೆ ನೀಡುತ್ತಿರುವ ನೆರವಿನಿಂದ ಲೆಕ್ಕವಿಲ್ಲದಷ್ಟು ಜೀವಗಳು ಉಳಿದಿವೆ ಎಂದು ಹೇಳುವುದರಲ್ಲಿ ಯಾವುದೇ ಸಂಶಯವಿಲ್ಲ. ಆರೋಗ್ಯ ಸಂಸ್ಥೆಗಳನ್ನು ನಿರ್ಮಿಸುವ ಜತೆಗೆ ಸಮುದಾಯಗಳು ಮತ್ತು ರಾಷ್ಟ್ರಗಳ ಸ್ಥಿರತೆಯನ್ನು ಉತ್ತೇಜಿಸಿದೆ ಎಂದು ಯುಎಸ್‌ಎಐಡಿ ಉಪ ಆಡಳಿತಾಧಿಕಾರಿ ಬೊನೀ ಗ್ಲಿಕ್ ತಿಳಿಸಿದ್ದಾರೆ.

ಭಾರತದಲ್ಲಿ 800ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಅಮೆರಿಕದಲ್ಲಿ ಒಂದು ಲಕ್ಷ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ನಡುವೆ ಮೂರನೇ ಹಂತವನ್ನು ತಲುಪಿರುವ ಕೊರೊನಾ ವೈರಸ್‌ ನಿಯಂತ್ರಣಕ್ಕೆ ಭಾರತ ಸೇರಿದಂತೆ ಎಲ್ಲಾ ರಾಷ್ಟ್ರಗಳು ಅತ್ಯಂತ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ.

ಭಾರತದಲ್ಲಿ ಇಲ್ಲಿಯವರೆಗೂ ಸೋಂಕಿತರ ಪ್ರಮಾಣದ 910 ತಲುಪಿದು, ಇನ್ನೂ ಏರಿಕೆಯಾಗುತ್ತಿರುವುದನ್ನು ಎಲ್ಲರೂ ಗಮನಿಸುತ್ತಿದ್ದೇವೆ.  ಜತೆಗೆ 20 ಜನರು ಮೃತಪಟ್ಟಿದ್ದಾರೆ. ಅಂದರೆ ಇಂದು ಇಬ್ಬರು ಸಾವನ್ನಪ್ಪಿದ್ದಾರೆ.  ಆದ್ದರಿಂದ ಜನರು ಸಹ ಮುಂಜಾಗ್ರತೆ ವಹಿಸಿ ಆದಷ್ಟು ಮನೆಯಲ್ಲೇ ಕಾಲಕಳೆಯಬೇಕು ಎಂದು ಆರೋಗ್ಯ ಇಲಾಖೆ ಮತ್ತು ಪ್ರಧಾನಿಯವರು ಮನವಿ ಮಾಡುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು