NEWSದೇಶ-ವಿದೇಶ

ಕೊರೊನಾ ವಿರುದ್ಧದ ಹೋರಾಟಕ್ಕೆ ಪಿಎಂ ಕೇರ್ಸ್ ನಿಧಿಯಿಂದ 3100 ಕೋಟಿ ರೂ. ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಪಿ.ಎಂ.ಕೇರ್ಸ್ (ತುರ್ತು ಪರಿಸ್ಥಿತಿಗಳಲ್ಲಿ ಪ್ರಧಾನ ಮಂತ್ರಿ ಅವರ ನಾಗರಿಕ ನೆರವು ಮತ್ತು ಪರಿಹಾರ ) ನಿಧಿ ಟ್ರಸ್ಟ್ ಬುಧವಾರ ಕೋವಿಡ್ -19 ರ ವಿರುದ್ದ ಹೋರಾಡಲು 3100 ಕೋ.ರೂ.ಗಳನ್ನು ದೇಶದ ಎಲ್ಲಾ ರಾಜ್ಯಗಳಿಗೂ ಅವಶ್ಯಕತೆಗೆ ಅನುಗುಣವಾಗಿ  ಬಿಡುಗಡೆ ಮಾಡಿದೆ.

ಒಟ್ಟು 3100 ಕೋ ಟಿ ರೂ.ಗಳಲ್ಲಿ 2000 ಕೋಟಿ ರೂ.ಗಳನ್ನು ವೆಂಟಿಲೇಟರ್‌ಗಳ ಖರೀದಿಗೆ , 1000 ಕೋ ಟಿ ರೂ.ಗಳನ್ನು ವಲಸೆ ಕಾರ್ಮಿಕರ ಕಾಳಜಿಗಾಗಿ ಬಳಸಲು ಮತ್ತು 100 ಕೋ ಟಿ ರೂ.ಗಳನ್ನು ಲಸಿಕೆ ಅಭಿವೃದ್ಧಿಗಾಗಿ  ನೀಡಲು ತಿಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಟ್ರಸ್ಟನ್ನು 2020 ರ ಮಾರ್ಚ್ 27 ರಂದು  ಪ್ರಧಾನ ಮಂತ್ರಿ  ನರೇಂದ್ರ ಮೋದಿ (ಅಧಿಕಾರೇತರ) ಅವರ ನೇತೃತ್ವದಲ್ಲಿ ರಚಿಸಲಾಗಿತ್ತು. ಇದರ ಇತರ ಅಧಿಕಾರೇತರ ಸದಸ್ಯರೆಂದರೆ ರಕ್ಷಣಾ ಸಚಿವರು, ಗೃಹ ಸಚಿವರು ಮತ್ತು ಹಣಕಾಸು ಸಚಿವರು. ಈ ಪ್ಯಾಕೇಜನ್ನು ಘೋಷಿಸಿದ ಪ್ರಧಾನ ಮಂತ್ರಿ   ಪಿ.ಎಂ. ಕೇರ್ಸ್ ನಿಧಿಗೆ ಉದಾರವಾಗಿ ದೇಣಿಗೆ ನೀಡಿದವರಿಗೆ ಕೃತಜ್ಞತೆ ಸಲ್ಲಿಸಿದರು. ಈ ನಿಧಿ, ಕೊರೊನಾ-19 ವಿರುದ್ಧ ಭಾರತದ ಹೋರಾಟಕ್ಕೆ ನೆರವಾಗಲಿದೆ.

50,000 ವೆಂಟಿ ಲೇಟರುಗಳು
ದೇಶಾದ್ಯಂತ ಕೋವಿಡ್-19 ಪ್ರಕರಣಗಳನ್ನು ನಿಭಾಯಿಸಲು ಮೂಲಸೌಕರ್ಯವನ್ನು ಕ್ರೋಢೀಕರಿಸುವುದಕ್ಕಾಗಿ 50 ಸಾವರ ದೇಶಿ ನಿರ್ಮಿತ ವೆಂಟಿಲೇಟರುಗಳನ್ನು ಪಿ.ಎಂ. ಕೇರ್ಸ್ ನಿಧಿಯಿಂದ ಅಂದಾಜು 2,000 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು. ಈ ವೆಂಟಿಲೇಟರುಗಳನ್ನು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರಕಾರ ನಿರ್ವಹಿಸುವ ಕೋವಿಡ್ ಆಸ್ಪತ್ರೆಗಳಿಗೆ ಗಂಭೀರ ಸ್ಥಿತಿಯಲ್ಲಿರುವ ಕೋವಿಡ್ -19 ಪ್ರಕರಣಗಳ ಚಿಕಿತ್ಸೆಗಾಗಿ ಒದಗಿಸಲಾಗುವುದು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ವಲಸೆ ಕಾರ್ಮಿಕರಿಗೆ ಪರಿಹಾರ
ವಲಸೆಗಾರರ ಮತ್ತು ಬಡವರ ಕಲ್ಯಾಣಕ್ಕಾಗಿ ಈಗಿರುವ ಕ್ರಮಗಳನ್ನು ಬಲಪಡಿಸಲು ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 1000 ಕೋಟಿ ರೂ. ಗಳ ನೆರವನ್ನು ಪಿ.ಎಂ. ಕೇರ್ಸ್ ನಿಧಿಯಿಂದ ಕೊಡಲಾಗುವುದು. ಈ ಮೊತ್ತವನ್ನು ಜಿಲ್ಲಾಧಿಕಾರಿಗಳು/ ಮುನ್ಸಿಪಲ್ ಕಮಿಷನರ್‌ ವಲಸೆಗಾರರಿಗೆ ವಸತಿ ಒದಗಿಸುವಿಕೆ, ಆಹಾರ ವ್ಯವಸ್ಥೆ, ವೈದ್ಯಕೀಯ ಚಿಕಿತ್ಸೆ  ಮತ್ತು ವಲಸೆಗಾರರ ಸಾರಿಗೆ ವೆಚ್ಚಕ್ಕಾಗಿ ಬಳಸಿಕೊಳ್ಳಲು ಅನುಕೂಲವಾಗುವಂತೆ  ಒದಗಿಸಲಾಗುವುದು.

ಲಸಿಕೆ ಅಭಿವೃದ್ಧಿ
ಕೋವಿಡ್-19 ಕ್ಕೆ ಲಸಿಕೆಯು ಅತ್ಯಂತ ಅವಶ್ಯಕವಾಗಿದ್ದು ಮತ್ತು ಭಾರತೀಯ ಶೈಕ್ಷಣಿಕ ವಲಯ, ನವೋದ್ಯಮಗಳು, ಹಾಗೂ ಕೈಗಾರಿಕೆಗಳು ಲಸಿಕೆ ವಿನ್ಯಾಸ ಮತ್ತು ಅಭಿವೃದ್ಧಿಗಾಗಿ ಮುಂದೆ ಬಂದಿವೆ. ಕೋವಿಡ್ -19 ಲಸಿಕೆ ವಿನ್ಯಾಸಕಾರರನ್ನು ಮತ್ತು ಅಭಿವೃದಿಗಾರರನ್ನು ಬೆಂಬಲಿಸಲು ಪಿ.ಎಂ. ಕೇರ್ಸ್ ನಿಧಿಯಿಂದ 100 ಕೋಟಿ ರೂಪಾಯಿಗಳನ್ನು ಲಸಿಕೆ ಅಭಿವೃದ್ಧಿಗೆ ವೇಗ ತಂದುಕೊಡುವುದಕ್ಕಾಗಿ ನೀಡಲಾಗುವುದು, ಇದನ್ನು ಪ್ರಧಾನ ವೈಜ್ಞಾನಿಕ ಸಲಹೆಗಾರರ ಮೇಲುಸ್ತುವಾರಿಯಲ್ಲಿ ಬಳಸಲಾಗುವುದು ಎಂದು ಟ್ರಸ್ಟ್‌ ಮಾಹಿತಿ ನೀಡಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

2 Comments

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್...