NEWSನಮ್ಮರಾಜ್ಯ

ಕೊರೊನಾ ಸಂಬಂಧ ನಾಳೆ ಸಿಎಂ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ  

45ಸಾವಿರ‌ ಕುಟುಂಬಗಳಿಗೆ ರೇಷನ್‌ಕಿಟ್ ವಿತರಣೆ ವೇಳೆ ಸಚಿವ ಶ್ರೀರಾಮುಲು ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ರಾಜ್ಯದಲ್ಲಿ ಕೊವೀಡ್ 19- ತಡೆಗಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನಾಳೆ(ಏ.19) ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಬಳ್ಳಾರಿಯ ರೂಪನಗುಡಿ ರಸ್ತೆಯಲ್ಲಿ ಶಾಸಕ ಸೋಮಶೇಖರ್ ರೆಡ್ಡಿ ಅವರು ಹಾಗೂ ದಾನಿಗಳಿಂದ 45ಸಾವಿರ‌ ಕುಟುಂಬಗಳಿಗೆ ಪಡಿತರ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಬಳ್ಳಾರಿಯಲ್ಲಿ 45 ಸಾವಿರ ಕುಟುಂಬಗಳಿಗೆ ಶಾಸಕ ಸೋಮಶೇಖರ್ ರೆಡ್ಡಿ ಮತ್ತು ದಾನಿಗಳು ರೇಷನ್ ಮುಟ್ಟಿಸೋ ಕೆಲಸ ಮಾಡುತ್ತಿದ್ದಾರೆ.ದಾನಿಗಳಿಗೆ ಭಗವಂತ ಮತ್ತಷ್ಟು ಶಕ್ತಿ ಕೊಡಲಿ ಎಂದು ಬೇಡುವೆ ಎಂದರು.

ನಿನ್ನೆ ಯಡಿಯೂರಪ್ಪ ನಮ್ಮ ಸಭೆ ಕರೆದು, ಮಾಹಿತಿ ಪಡೆದಿದ್ದಾರೆ. ರಾಜ್ಯದ ನಾನಾ ಜಿಲ್ಲೆಗಳನ್ನು ಎಬಿಸಿ ಅಂತ ವಿಂಗಡಣೆ ಮಾಡಲಾಗಿದೆ. ಏಪ್ರಿಲ್ 20ರ ನಂತರ ನಿಯಮ ಸಡಲಿಕೆಗಳ ಕುರಿತು ಚರ್ಚೆ ಮಾಡಲಾಗುತ್ತದೆ. ಜನರು ಕೂಡ ಬಹಳ ದಿನಗಳಾಯ್ತು ಒಂದೇ ಕಡೆ ಇದ್ದಾರೆ. ಕೆಲವೆಡೆ ದಿನದಿಂದ ದಿನಕ್ಕೆ ಕೇಸ್ ಹೆಚ್ಚಾಗುತ್ತಿವೆ. ಜನರು ಕೂಡ ಸಹಕಾರ ಕೊಡಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು.

ಆರೆಂಜ್ ಝೋನ್ ನಲ್ಲಿ‌ ಲಾಕ್ ಡೌನ್ ಸಡಲಿಕೆ ವಿಚಾರವಾಗಿ ಸಿಎಂ ಯಡಿಯೂರಪ್ಪ ಬಳಿ ನಮ್ಮ ಸಲಹೆ ನೀಡಿದ್ದೇನೆ ಎಂದು ವಿವರಿಸಿದ ಅವರು ಹೊಸಪೇಟೆಯಲ್ಲಿ 11 ಪಾಸಿಟಿವ್ ಪ್ರಕರಣ ವಿಚಾರದ ಕುರಿತ ಸೀಲ್ ಡೌನ್ ಆದ ಪ್ರದೇಶಗಳು ಮಾತ್ರ ಕಟ್ಟುನಿಟ್ಟಾಗಿ ಮಾಡಿ, ಉಳಿದ ಕಡೆ ಸಡಲಿಕೆ ನೀಡೋದು ಒಳ್ಳೇಯದು ಎಂದು ಅಭಿಪ್ರಾಯಪಟ್ಟರು.

ಶಾಸಕ ಜಿ.ಸೋಮಶೇಖರ್ ರೆಡ್ಡಿ ಮತ್ತಿತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ