NEWSನಮ್ಮರಾಜ್ಯ

ಕೊರೊನಾಗೂ ಚಿಕನ್ ಸೇವನೆಗು ಸಂಬಂಧವಿಲ್ಲ

ಮಾಂಸಹಾರಿಗಳಿಗೆ ಅನಗತ್ಯ ಭಯ ಬೇಡ ಎಂದ ಸಚಿವ ಸಿ.ಟಿ.ರವಿ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಮಾಂಸಹಾರಿಗಳು ಅನಗತ್ಯವಾಗಿ ಭಯ ಪಡದೇ ಚಿಕನ್ ಸೇವಿಸಬಹುದಾಗಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ತಿಳಿಸಿದರು.

ಇಂದು ನಗರದ ಕೆ.ಎಂ. ಮುಖ್ಯ ರಸ್ತೆಯಲ್ಲಿರುವ ಲೈಫ್‌ಲೈನ್ಸ್ ಟೆಂಡರ್ ಚಿಕನ್ ಸೆಂಟರ್‌ಗೆ ಭೇಟಿ ನೀಡಿ ಚಿಕನ್ ಖರೀದಿಸಿ ಮಾತನಾಡಿದರು.

ಕೊರೋನಾ ಸೋಂಕಿಗೂ ಚಿಕನ್‌ಗೂ ಯಾವುದೇ ಸಂಬಂಧವಿಲ್ಲ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮೀನು, ಮೊಟ್ಟೆ, ಮಾಂಸವನ್ನು ಸೇವಿಸಬಹುದಾಗಿದೆ ಎಂದು ಆಹಾರ ತಜ್ಞರು ದೃಢ ಪಡಿಸಿದ್ದಾರೆ ಎಂದರು.

ಕೊರೋನಾ ಸೋಂಕಿನ ಹಿನ್ನೆಲೆ ಚಿಕನ್ ಸೇವನೆ ಬಗ್ಗೆ ಮಾಂಸ ಪ್ರಿಯರಿಗೆ ಭಯವಿದ್ದು, ಚಿಕನ್ ದೇಹಕ್ಕೆ ಪ್ರೋಟಿನ್ ಅಂಶ ನೀಡುವುದರ ಜೊತೆಗೆ ದೇಹಕ್ಕೆ ಬೇಕಾಗಿರುವ ರೋಗನಿರೋಧಕ ಶಕ್ತಿ ಒದಗಿಸುತ್ತದೆ ಎಂದು ಆಹಾರ ತಜ್ಞರು ದೃಢ ಪಡಿಸಿರುವುದರಿಂದ ಮಾಂಸ ಸೇವನೆ ಮಾಡುವವರು ಯಾವುದೇ ಅಂಜಿಕೆ ಇಲ್ಲದೆ ಕೋಳಿ ಮಾಂಸ ಸೇವಿಸಬಹುದಾಗಿದೆ ಎಂದರು.

ಮಾಂಸ ಮಾರಾಟದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದು ಕೊಳ್ಳುವ ಮೂಲಕ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದ ಅವರು ಆರೋಗ್ಯಕ್ಕೆ ಬೇಕಾದ ಪೌಷ್ಟಿಕ ಅಂಶಗಳನ್ನು ಒದಗಿಸುವ ಚಿಕನ್, ಮೊಟ್ಟೆ ಮೀನುಗಳನ್ನು ಭಯವಿಲ್ಲದೆ ಉಪಯೋಗಿಸಬಹುದಾಗಿದೆ ಎಂದರು.

ನಗರಸಭೆ ಮಾಜಿ ಸದಸ್ಯ ಟಿ. ರಾಜಶೇಖರ್, ಲೈಫ್‌ಲೈನ್ಸ್ ಫೀಡ್ಸ್‌ನ ವ್ಯವಸ್ಥಾಪಕ ಕಿಶೋರ್ ಕುಮಾರ್ ಹೆಗ್ಡೆ, ಮಧುಕರ್ ಪ್ರಭು, ಭಗವತಿ ಕೃಷ್ಣ, ಜನರಲ್ ಮ್ಯಾನೆಜರ್ ಮುರಾರಿ, ಶರತ್ ಕುಮಾರ್ ಸೇರಿದಂತೆ ಮತ್ತಿತರರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ