NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಕರ್ನಾಟಕ ಶಾಸಕರು ದೇಶದಲ್ಲೇ ಅತ್ಯಂತ ಸಿರಿವಂತರು – ಡಿಕೆಶಿ ಸೇರಿ ಮೂವರು ಟಾಪ್‌

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು ದೇಶದಲ್ಲೇ ಅತ್ಯಂತ ಸಿರಿವಂತರು ಎಂಬ ವರದಿಯೊಂದು ಹೊರಬಿದ್ದಿದೆ. ಅದರಲ್ಲಿ ಕನಕಪುರ ಕ್ಷೇತ್ರದ ಡಿ.ಕೆ.ಶಿವಕುಮಾರ್​, ಗೌರಿಬಿದನೂರು ಕ್ಷೇತ್ರ ಪುಟ್ಟಸ್ವಾಮಿಗೌಡ, ಗೋವಿಂದರಾಜನಗರದ ಪ್ರಿಯಕೃಷ್ಣ ರಾಜ್ಯದ ಮೂವರು ಶ್ರೀಮಂತ ಶಾಸಕರು ಎಂದು ಗುರುತಿಸಿಕೊಂಡಿದ್ದಾರೆ.

ಅಸೋಸಿಯೇಷನ್​ ಫಾರ್​ ಡೆಮಾಕ್ರೆಟಿಕ್​ ರಿಫರ್ಮ್ಸ್​ ಮತ್ತು ನ್ಯಾಷನಲ್​ ಎಲೆಕ್ಷನ್​ ವಾಚ್​ ಎಂಬ ಎರಡು ಸಂಸ್ಥೆಗಳು ಅಧ್ಯಯನ ನಡೆಸಿದ್ದು, ದೇಶದ ವಿವಿಧ ರಾಜ್ಯಗಳ ಶಾಸಕರ ಆಸ್ತಿ ಪ್ರಮಾಣದ ಬಗ್ಗೆ ಅಧ್ಯಯನ ನಡೆಸಿದೆ. ಅದರಲ್ಲಿ ಒಟ್ಟಾರೆ 64.39 ಕೋಟಿಯಷ್ಟಿದೆ ಎಂದು ತಿಳಿದುಬಂದಿದೆ. ಇನ್ನು ಕರ್ನಾಟಕ ಶಾಸಕರ ಆಸ್ತಿ ಪ್ರಮಾಣದ 64.39 ಕೋಟಿಯಷ್ಟಿದೆ ಎಂದು ವರದಿ ಹೇಳಿದೆ.

28 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶ 4033 ಶಾಸಕರು ಕುರಿತಾಗಿ ಅಧ್ಯಯನಕ್ಕಿಳಿದ ಅಸೋಸಿಯೇಷನ್​ ಫಾರ್​ ಡೆಮಾಕ್ರೆಟಿಕ್​ ರಿಫರ್ಮ್ಸ್​ ಮತ್ತು ನ್ಯಾಷನಲ್​ ಎಲೆಕ್ಷನ್​ ವಾಚ್ ಸಂಸ್ಥೆ 4001 ಶಾಸಕರು ಅಫಿಡವಿಟ್​​ನಲ್ಲಿ ನೀಡಿರುವ ಮಾಹಿತಿ ಆಧರಿಸಿ ಅಧ್ಯಯನ ಮಾಡಿದೆ.

ಇನ್ನು ಕರ್ನಾಟಕದ 223 ಶಾಸಕರ ಪೈಕಿ 32 ಶಾಸಕರು 100 ಕೋಟಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದಾರೆ. ಆ ಮೂಲಕ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದಾರೆ. ಕರ್ನಾಟಕದ ಬಳಿಕ ಅರುಣಾಚಲಪ್ರದೇಶ, ಆಂಧ್ರಪ್ರದೇಶ ನಂತರದ ಸ್ಥಾನಗಳಲ್ಲಿವೆ.

ಅಂದಹಾಗೆಯೇ ಡಿ.ಕೆ.ಶಿವಕುಮಾರ್​ 1413 ಕೋಟಿ, ಪುಟ್ಟಸ್ವಾಮಿಗೌಡ 1267 ಕೋಟಿ, ಪ್ರಿಯಕೃಷ್ಣ 1156 ಕೋಟಿಯಷ್ಟು ಆಸ್ತಿಯನ್ನು ಹೊಂದಿದ್ದಾರೆ. ಕರ್ನಾಟಕ ಮಾತ್ರವಲ್ಲ, ಮಹಾರಾಷ್ಟ್ರ, ಗುಜರಾತ್​, ಹಿಮಾಚಲ ಪ್ರದೇಶ, ಮಧ್ಯ ಪ್ರದೇಶಗಳಲ್ಲೂ ಕೂಡ ಅತಿ ಹೆಚ್ಚು ಆಸ್ತಿಯನ್ನು ಹೊಂದಿರುವ ಶಾಸಕರು ಇದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು