NEWSನಮ್ಮಜಿಲ್ಲೆನಮ್ಮರಾಜ್ಯ

ಕರಾರಸಾಸಂ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜಯದೇವ್‌ ನೇಮಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಚಾಲಕ ಕಂ ನಿರ್ವಾಹಕ ಜಯದೇವ್‌ ಅವರನ್ನು ನೇಮಕ ಮಾಡಿ ಸಂಘದ ಅಧ್ಯಕ್ಷರು ನೇಮಕಾತಿ ಆದೇಶ ಪತ್ರವನ್ನು ವಿತರಿಸಿದರು.

ಇಂದು ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಪ್ರಧಾನ ಕಾರ್ಯದರ್ಶಿ ಜಯದೇವ ಅವರನ್ನು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸತೀಶ್‌ ಸ್ವಾಗತಿಸಿದರು.

ಜಯದೇವ ಅವರು ಕೆಎಸ್‌ಆರ್‌ಟಿಸಿ ಕೇಂದ್ರೀಯ ವಿಭಾಗ 6 ನೇ ಘಟಕದಲ್ಲಿ ಚಾಲಕ ಕಂ ನಿರ್ವಾಹಕರಾಗಿದ್ದು ಸದಾ ನೌಕರರ ಸಮಸ್ಯೆಗೆ ಸ್ಪಂದಿಸುವುದರಲ್ಲಿ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ ಅವರನ್ನು ಸಂಘದ ಸರ್ವ ಸದಸ್ಯರು ಒಮ್ಮತದಿಂದ ನೇಮಕ ಮಾಡಿದ್ದಾರೆ ಎಂದು ಸಂಘದ ಕಾನೂನು ಸಲಹೆಗಾರರಾದ ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ತಿಳಿಸಿದರು.

ಇನ್ನು ಸಂಘಕ್ಕೆ ಮತ್ತು ಸದಸ್ಯರಿಗೆ ಯಾವುದೇ ಚ್ಯುತಿ ಬಾರದಂತೆ ಕಾನೂನಿನಡಿಯಲ್ಲಿ ತಾವು ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದು ಇದೇ ವೇಳೆ ಪ್ರಧಾನ ಕಾರ್ಯದರ್ಶಿಗೆ ಕಿವಿ ಮಾತು ಹೇಳಿದರು.

ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸತೀಶ್‌  ಅನಾರೋಗ್ಯ  ಕಾರಣದಿಂದ  ತಮ್ಮ ಪದವಿಯಿಂದ ಹಿಂದೆ ಸರಿದಿದ್ದು ನೂತನವಾಗಿ ಜಯದೇವ್‌ ಅವರನ್ನು ನೇಮಕ ಮಾಡಲಾಗಿದೆ.

ಇದೇ ಕಾರ್ಯಕ್ರಮಲ್ಲಿ ಸದಸ್ಯತ್ವ ಪಡೆದವರಿಗೆ ಐಡಿ ಕಾರ್ಡ್‌ಗಳನ್ನು ವಿತರಣೆ ಮಾಡಲಾಯಿತು. ಈ ವೇಳೆ ಸಂಘದ ಅಧ್ಯಕ್ಷ ಭೈರೇಗೌಡ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಸತೀಶ್‌, ಉಪಾಧ್ಯಕ್ಷ ಪ್ರಕಾಶ್‌, ನಿವೃತ್ತ ಡಿಟಿಒ ಹಾಗೂ ಸಂಘದ ಕಾರ್ಯಾಧ್ಯಕ್ಷ ವೇಣುಗೋಪಾಲ್‌, ನಿರ್ದೇಶಕರಾದ ಮುಂಜುನಾಥ್‌, ಮಹದೇವ್‌ ಇತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ