CrimeNEWSನಮ್ಮಜಿಲ್ಲೆಸಂಸ್ಕೃತಿ

ಕೊಲೆಗಾರರಿಗೆ ತಕ್ಕ ಶಿಕ್ಷೆ ಆಗುತ್ತದೆ ಸಲ್ಲೇಖನ ವ್ರತ ಕೈಬಿಡಿ: ಗುಣಧರ ನಂದಿ ಮಹಾರಾಜರಲ್ಲಿ ಉಪ ಮುಖ್ಯಮಂತ್ರಿ ಶಿವಕುಮಾರ್‌ಮನವಿ

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿಕ್ಕೋಡಿಯ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನ ಮುನಿ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಕೊಲೆಗಾರರಿಗೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವರೂರ ನವಗ್ರಹ ತೀರ್ಥ ಕ್ಷೇತ್ರದ 108 ಆಚಾರ್ಯ ಗುಣಧರ ನಂದಿ ಮಹಾರಾಜ ಅವರು ಆರಂಭಿಸಿರುವ ಸಲ್ಲೇಖನ ವ್ರತವನ್ನು ಕೈಬಿಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮನವಿ ಮಾಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ ಅವರು, ಹತ್ಯೆ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗುವಂತೆ ಆಗ್ರಹಿಸಿ ಗುಣಧರ ನಂದಿ ಮಹಾರಾಜರು ಕೈಗೊಂಡಿರುವ ಸಲ್ಲೇಖನ ವ್ರತವನ್ನು ಕೈಬಿಡುವಂತೆ ಮನವಿ ಮಾಡಿದ್ದು, ಮುನಿಗಳ ಹತ್ಯೆಯ ಹಿಂದೆ ಯಾರೇ ಇದ್ದರೂ ಸರ್ಕಾರ ಸೂಕ್ತ ತನಿಖೆ ನಡೆಸಿ ಕೊಲೆಗಾರರಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಲಿದೆ ಎಂದು ಹೇಳಿದರು.

ಸಾರ್ವಜನಿಕರು ಶಾಂತಿ ಕಾಪಾಡಬೇಕು ಹತ್ಯೆಕೋರರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮನವಿ ಡಿಸಿಎಂ ತಿಳಿಸಿದ್ದಾರೆ.

ಕೊಟ್ಟಿದ್ದ ಹಣವನ್ನು ವಾಪಸ್‌ ಕೇಳಿದ್ದಕ್ಕೆ ಇದೇ ಜುಲೈ 6ರಂದು ಹಿರೇಕೋಡಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರನ್ನು ಇಬ್ಬರು ಹಂತಕರು ಅಪಹರಿಸಿ ಬಳಿಕ ಬರ್ಬರವಾಗಿ ಹತ್ಯೆ ಮಾಡಿದ್ದರು. ಹತ್ಯೆ ಮಾಡಿದ ಬಳಿಕ ಮೃತದೇಹವನ್ನ ಮಣ್ಣಲ್ಲಿ ಹೂತಿಟ್ಟಿದ್ದರು.

ಈ ಹಿನ್ನಲೆ ಪೊಲೀಸರಿಗೆ ನಿನ್ನೆ (ಶನಿವಾರ) ಕಾಮಕುಮಾರ ನಂದಿ‌ ಮಹರಾಜರ ಮೃತದೇಹ ಕಟಕಬಾವಿ ಗ್ರಾಮದಲ್ಲಿ ಸಿಕ್ಕಿದ್ದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುತ್ತು. ಇಂದು ಬೆಳಗ್ಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ