NEWSನಮ್ಮಜಿಲ್ಲೆನಮ್ಮರಾಜ್ಯ

ಕೋಲಾರ: ಸಾರಿಗೆ ನೌಕರರ ಮೊದಲ ಹಂತದ ಸೈಕಲ್‌ ಜಾಥಾಗೆ ತೆರೆ – ಬೇಡಿಕೆ ಈಡೇರುವವರೆಗೂ ಹೋರಾಟ ನಿರಂತರ

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರಿಗೆ ಸರ್ಕಾರ ಕೊಟ್ಟ ಭರವಸೆಯಂತೆ ಸರ್ಕಾರಿ ನೌಕರರಂತೆ ಸಮಾನ ವೇತನವನ್ನು ವೇತನದ ಆಯೋಗದ ಮಾದರಿಯಲ್ಲಿ ನೀಡಬೇಕು ಹಾಗೂ ಇತರೆ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಸಾರಿಗೆ ನೌಕರರು ಕಳೆದ ಅಕ್ಟೋಬರ್‌ 10ರಂದು ಬಳ್ಳಾರಿಯಿಂದ ಆರಂಭಿಸಿದ ಸೈಕಲ್‌ ಜಾಥಾಗೆ ಶುಕ್ರವಾರ ತೆರೆ ಬಿದ್ದಿದೆ.

ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದ ಸುದ್ದಿ ನೀವು ಒಮ್ಮೆ ನೋಡಿ: http://ಕಲಬುರಗಿ: .27ರಂದು ಮೊಳಗಿತು ಸಾರಿಗೆ ನೌಕರರ ಹೋರಾಟದ ಕಹಳೆ – ಅಧಿಕಾರಿಗಳಲ್ಲಿ ತಲ್ಲಣ

ಇದಕ್ಕೂ ಮುನ್ನಾ ಕೆಎಸ್ಸಾರ್ಟಿಸಿ ನೌಕರರ ಒಕ್ಕೂಟದ ಸಾವಿರಾರು ನೌಕರರು ನಗರದ ಬಸ್‌ ನಿಲ್ದಾಣ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಸೈಕಲ್ ಜಾಥಾ ಹಾಗೂ ಕಾಲ್ನಡಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿ ವೆಂಕಟ್‌ರಾಜ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.

ಆ ಬಳಿಕ ನಗರದಲ್ಲಿ ಆಯೋಜಿಸಿದ್ದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಕೆಎಸ್‌ಆರ್‌ಟಿಸಿ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್, 2021 ಏಪ್ರಿಲ್‌ನ ಸಾರಿಗೆ ನೌಕರರ ಮುಷ್ಕರ ಸಂದರ್ಭದಲ್ಲಿ ವಜಾ ಮಾಡಿರುವ ನೌಕರರನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೆ ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು. ವರ್ಗಾವಣೆ, ಇಂಕ್ರಿಮೆಂಟ್ ಕಡಿತ ಮುಂತಾದ ಶಿಕ್ಷೆಗಳಿಗೆ ಗುರಿಪಡಿಸಿರುವುದನ್ನು ಹಿಂಪಡೆಯಬೇಕು. 2021ರ ಏಪ್ರಿಲ್ 6ರ ಹಿಂದಿನಂತೆ ಯಾಥಾ ಸ್ಥಿತಿ ಕಾಪಾಡಬೇಕೆಂದು ಆಗ್ರಹಿಸಿದರು.

ಸಾರಿಗೆ ನಿಗಮದ ನೌಕರರಿಗೆ ಸರ್ಕಾರಿ ನೌಕರರಂತೆ ಸರಿ ಸಮಾನ ವೇತನ ನೀಡಬೇಕು, ನಾಲ್ಕು ವರ್ಷಗಳಿಗೊಮ್ಮೆ ಆಗುತ್ತಿರುವ ಅವೈಜ್ಞಾನಿಕ ವೇತನ ಪರಿಷ್ಕರಣೆ ಪದ್ಧತಿ ಕೈ ಬಿಟ್ಟು ಸರ್ಕಾರದ ಇಲಾಖೆ ಮತ್ತು ನಿಗಮ ಮಂಡಳಿಗಳಲ್ಲಿ ಚಾಲ್ತಿಯಲ್ಲಿರುವಂತೆ ವೇತನದ ಆಯೋಗದ ಮಾದರಿಯಲ್ಲಿ ನಮಗೂ ವೇತನ ನೀಡಬೇಕು ಒತ್ತಾಯಿಸಿದರು.

ಕೂಟದ ಪ್ರಧಾನ ಕಾರ್ಯದರ್ಶಿ ತಿಪ್ಪೆಸ್ವಾಮಿ ಮಾತನಾಡಿ, ಮುಖ್ಯಮಂತ್ರಿ ಅವರು ಈ ಹಿಂದೆ ಸಾರಿಗೆ ಸಂಸ್ಥೆ ಸಂಘಟನೆಗೆ ನೀಡಿರುವ ಲಿಖಿತ ಭರವಸೆ ಈಡೇರಿಸ ಬೇಕು, ಕಳೆದ 47 ದಿನಗಳಿಂದ ರಾಜ್ಯದ 18 ಜಿಲ್ಲೆಗಳಲ್ಲಿ ಸೈಕಲ್ ಜಾಥಾ ಮಾಡಿದ್ದು, ಪ್ರತಿ ಜಿಲ್ಲೆಯಲ್ಲೂ ಅಲ್ಲಿನ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಮಹಾ ಸಮಾವೇಶ ಹಮ್ಮಿಕೊಂಡು ಸರ್ಕಾರದ ಗಮನಸೆಳೆಯಲಾಗುತ್ತಿದೆ ಎ೦ದರು.

ಕಳೆದ 2020ರ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿ ನೀಡಿದ ಲಿಖಿತ ಭರವಸೆ ಎರಡು ವರ್ಷ ಕಳೆಯುತ್ತಾ ಬಂದರೂ ಈಡೇರಿಸಿಲ್ಲ. ವಿಕಾಸಸೌಧದಲ್ಲಿ ಮಂಡಿಸಿದ 9 ಬೇಡಿಕೆಗಳಲ್ಲಿ 5 ಮಾತ್ರ ಈಡೇರಿಸಿದ್ದು, ಉಳಿದ 4 ಬೇಡಿಕೆಗಳಿಗೆ ಆಗ್ರಹಿಸಿ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದು ನಿರಂತವಾಗಿ ಮುಂದುವರಿಯಲಿದೆ ಎಂದು ತಿಳಿಸಿದರು.

ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳಾದ ಬಿ.ವಿ.ಶ್ರೀನಿವಾಸಯ್ಯ, ಎನ್.ಕೆ. ಮಂಜುನಾಥ್, ಸಿ.ಶಂಕರಪ್ಪ, ಸೋಮಶೇಖರ್, ಚಿನ್ನಪ್ಪ, ಜಿ.ಎಸ್ .ನಾಗರಾಜ್‌, ಕೂಟದ ರಾಜ್ಯ ಮಹಿಳಾಧ್ಯಕ್ಷೆ ಚಂಪಕಾವತಿ, ಕೃಷ್ಣ ಗುಡುಗುಡಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಸಾವಿರಾರು ನೌಕರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ