NEWSನಮ್ಮಜಿಲ್ಲೆ

ಕೊವೀಡ್-19: ಪ್ರತಿಬಂಧ ಉದ್ದೇಶ ಸಫಲತೆಗೆ ನಾಕಾಬಂದಿ

ಅಧಿಕಾರಿಗಳು ಜಿಲ್ಲೆಯ ರಕ್ಷಾ ಕವಚವಾಗಿ l ಸಚಿವ ಸಿ.ಸಿ.ಪಾಟೀಲ್‌ ಕರೆ

ವಿಜಯಪಥ ಸಮಗ್ರ ಸುದ್ದಿ

ಗದಗ: ಕೊವೀಡ್-19 ಸೋಂಕು ತಡೆಗೆ ಜಿಲ್ಲೆಯ ಲಾಕ್‌ಡೌನ್‌ ಜತೆಗೆ ಜಿಲ್ಲೆಗೆ ಹೊರಗಿನಿಂದ ಸೋಂಕು ಬರದಂತೆ ತಡೆಯಲು ಜಿಲ್ಲೆಯ ಎಲ್ಲ ಚೆಕ್‌ಪೋಸ್ಟ್‌ ಅಧಿಕಾರಿ ಸಿಬ್ಬಂದಿ ಜಿಲ್ಲೆಯ ಜನರ ರಕ್ಷಾ ಕವಚದಂತೆ ತಮಗೆ ವಹಿಸಿರುವ ತಪಸಾಣಾ ಮತ್ತು ನಿಯಂತ್ರಣ ಕಾರ್ಯಗಳನ್ನು ಯಾವುದೇ ದಾಕ್ಷಿಣ್ಯವಿಲ್ಲದೇ ಕಟ್ಟುನಿಟ್ಟಾಗಿ ಪಾಲಿಸಿ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ  ಸಿ ಸಿ ಪಾಟೀಲ್‌ ಕರೆ ನೀಡಿದರು..

ಜಿಲ್ಲೆಯ  ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಕೊವಿಡ್-19 ನಿಯಂತ್ರಣದ ಅಂಗವಾಗಿ ಸ್ಥಾಪಿತ ಕೊಣ್ಣೂರು ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಅವರು ಕಾರ್ಯ ಚಟುವಟಿಕೆಯನ್ನು  ಪರಿಶೀಲಿಸಿದರು.

ಕೊವಿಡ್-19 ವಿರುದ್ಧದ ಹೋರಾಟದಲ್ಲಿ ನಮ್ಮ ಜಿಲ್ಲೆಗೆ ಪ್ರವೇಶಿಸುವ ಪ್ರತಿ ವ್ಯಕ್ತಿಯ ಮತ್ತು ವಾಹನದ ತಪಾಸಣೆ ಕಟ್ಟು ನಿಟ್ಟಾಗಿ ನಡೆಸಬೇಕು. ಸಂಶಯ ಪ್ರಕರಣವಿದ್ದಲ್ಲಿ ತಕ್ಷಣ ಸಂಬಂಧಿತ  ಅಧಿಕಾರಿಗೆ ಮಾಹಿತಿ ನೀಡಬೇಕು. ಸರಿಯಾದ ದಾಖಲೆ ಇಲ್ಲದಿದ್ದಲ್ಲಿ ವಾಹನಗಳನ್ನು ವಶಪಡಿಸಿಕೊಂಡು ವರದಿ ಸಲ್ಲಿಸಬೇಕು ಎಂದರು.

ಈಗ ಸಾರ್ವಜನಿಕ ಆರೋಗ್ಯದ ವಿಪ್ಪತ್ತಿನ ಸಂದರ್ಭವಿದ್ದು ಒಂದೇ ಒಂದು ತಪ್ಪು ವೀಪರಿತ ಪರಿಣಾಮಕ್ಕೆ ಕಾರಣವಾಗಲಿದೆ.  ಆದುದರಿಂದ ಜಿಲ್ಲೆಯ ಎಲ್ಲ  ಗಡಿ ಚೆಕ್‌ಪೋಸ್ಟ್‌ ಗಳು ಸರಿಯಾಗಿ ಕರ್ತವ್ಯ ನಿರ್ವಹಿಸುವುದು ಅತ್ಯವಶಕ ಎಂದು ತಿಳಿಸಿದ್ದಾರೆ.

ಗದಗ ಬಾಗಲಕೋಟೆಯ ಚೆಕ್‌ಪೋಸ್ಟ್‌ ನಲ್ಲಿ  ನಿರತ ಸಿಬ್ಬಂದಿಗಳಿಗೆ ಮಜ್ಜಿಗೆಯ ವಿತರಿಸಿ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ