NEWSಕೃಷಿನಮ್ಮಜಿಲ್ಲೆ

ಕಾವೇರಿಗಾಗಿ ಮೈ ಮೇಲೆ ಸಗಣಿ ಸುರಿದು ಕೊಂಡು ಮಂಡ್ಯದಲ್ಲಿ ವಿನೂತನ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ತಮಿಳುನಾಡಿಗೆ ನೀರು ಹರಿಸಿ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗುತತಿರುವುದರಿಂದ ರೈತರು ಫಸಲೊಡ್ಡಲೂ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಗಾಂಜಾ ಬೆಳೆಯಲು ನಮಗೆ ಅವಕಾಶ ಕಲ್ಪಿಸಬೇಕು ಇಲ್ಲವೇ ದಯಾ ಮರಣ ನೀಡಿ ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮೈ ಮೇಲೆ ಸಗಣಿ ಸುರಿದುಕೊಂಡು ಮಂಡ್ಯದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತ ಶಿವಕುಮಾರ ಆರಾಧ್ಯ ಮೈ ಮೇಲೆ ಸಗಣಿ ಸುರಿದುಕೊಂಡು ಪ್ರತಿಭಟಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.

ಕೆಆರ್‌ಎಸ್ ಜಲಾಶಯದ ಕಾವೇರಿ ನೀರನ್ನು ಸಂಪೂರ್ಣವಾಗಿ ತಮಿಳುನಾಡಿಗೆ ಹರಿಯಲು ಬಿಟ್ಟಿರುವುದರಿಂದ ಈಗಾಗಲೇ ಜಲಾಶಯಗಳು ಬರಿದಾಗಿವೆ. ಇಂಥ ಸನ್ನಿವೇಶದಲ್ಲಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಪ್ರತಿನಿತ್ಯ ಮೂರು ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚಿಸಿದೆ, ರೈತರಿಗೆ ಭತ್ತ, ರಾಗಿ, ಕಬ್ಬು ಬೆಳೆಯಲು ನೀರಿಲ್ಲದ ಕಾರಣ ಗಾಂಜಾ ಬೆಳೆಯಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರು.

ಗಾಂಜಾ ಬೆಳೆ ಬೆಳೆಯಲು ಕಾವೇರಿ ನೀರಿನ ಅವಶ್ಯಕತೆಯಿಲ್ಲ, ಮನೆಯ ತಿಪ್ಪೆಯ ಗುಂಡಿ, ಸ್ನಾನ, ಪಾತ್ರೆ ತೊಳೆದ ನೀರು, ಸಸಿಯ ಕುಂಡಗಳಲ್ಲಿ, ಹಿತ್ತಲಿನ ಕೀರೆಮಡಿ ಮತ್ತು ಕೈತೋಟದಲ್ಲಿ ಗಾಂಜಾ ಬೆಳೆ ಬೆಳೆಯಲು ಸಾಧ್ಯವಿದೆ, ಇದರಿಂದ ಸಂಕಷ್ಟ ಕಾಲದಲ್ಲಿ ರೈತರ ಬದುಕು ಮುನ್ನಡಲಿದೆ ಎಂದು ಹೇಳಿದರು.

ಗಾಂಜ ಬೆಳೆಗೆ ಅವಕಾಶ ಮಾಡಿಕೊಡದಿದ್ದರೆ ರಾಷ್ಟ್ರಪತಿಯವರ ಮೂಲಕ ದಯಾಮರಣ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಾತನೂರು ಯೋಗೇಶ್, ನಂಜುಂಡಸ್ವಾಮಿ, ಹೊಸಹಳ್ಳಿ ಶಿವು, ಎಚ್.ಕೆ ಮಂಜುನಾಥ್,ಬಿ.ಟಿ ಶಿವಲಿಂಗಯ್ಯ, ಶಿವಣ್ಣ ಇತರರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು