CrimeNEWSದೇಶ-ವಿದೇಶಸಿನಿಪಥ

ಖ್ಯಾತ ನಟಿ ಅಪರ್ಣಾ ನಾಯರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ- ಸಾವಿಗೆ ಕಾರಣ ನಿಗೂಢ

ವಿಜಯಪಥ ಸಮಗ್ರ ಸುದ್ದಿ

ತಿರುವನಂತಪುರಂ: ಮಲಯಾಳಂನ ಖ್ಯಾತ ಸಿನಿಮಾ ನಟಿ ಅಪರ್ಣಾ ನಾಯರ್ (31) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದು, ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಹೌದು! ಇತ್ತೀಚೆಎಗೆ ಭಾರತೀಯ ಸಿನಿಮಾ ರಂಗದಲ್ಲಿ ಅಸಹಜ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿವೆ.ಈ ರೀತಿಯ ಅನುಮಾನಾಸ್ಪದ ಸಾವುಗಳಿಗೆ ಚಿತ್ರರಂಗವೇ ಬೆಚ್ಚಿ ಬಿದ್ದಿದೆ. ಇಂದು ಮಲಯಾಳಂ ಸಿನಿಮಾ ರಂಗದಲ್ಲಿ ಇಂಥದ್ದೊಂದು ಘಟನೆ ಸಂಭವಿಸಿದ್ದು ಆತಂಕ ಹೆಚ್ಚು ಮಾಡಿದೆ.

ಗುರುವಾರ ರಾತ್ರಿ 7.30ರ ಸಮಯಲ್ಲಿ ಅಪರ್ಣಾ ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡ ಅವರ ತಾಯಿ ಮತ್ತು ಸಹೋದರಿ ಕೂಡಲೇ ಅಪರ್ಣಾ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆರ, ಅಷ್ಟೊತ್ತಿಗಾಗಲ ಅಪರ್ಣಾ ಅವರು ಕೊನೆಯುಸಿರೆಳೆದಿದ್ದರು.

ಅಪರ್ಣಾ ಅವರು ತಿರುವನಂತಪುರಂ ನಿವಾಸದಲ್ಲಿ ಪತಿ, ಇಬ್ಬರು ಮಕ್ಕಳು, ತಾಯಿ ಮತ್ತು ಸಹೋದರಿಯೊಂದಿಗೆ ವಾಸಿಸುತ್ತಿದ್ದರು. ಈ ನಡುವೆ ಅವರಿಗೆ ಸಿನಿಮಾ ಮತ್ತು ಕಿರುತೆರೆಯಲ್ಲಿಯೂ ಸಾಕಷ್ಟು ಅವಕಾಶಗಳು ಹುಡುಕಿಕೊಂಡು ಬರುತ್ತಿದ್ದವು. ಆದರೂ ಕೇವಲ 31ನೇ ವಯಸ್ಸಿನಲ್ಲೇ ಕುಟುಂಬ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದು ಏಕೆ ಎಂಬುವುದು ಗೊತ್ತಾಗಿಲ್ಲ.

ಹಲವು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿದ್ದ ಇವರಿಗೆ ಸಾಕಷ್ಟು ಅವಕಾಶಗಳು ಇದ್ದರೂ ಇಂಥದ್ದೊಂದು ನಿರ್ಧಾರ ತೆಗೆದುಕೊಂಡಿದ್ದಕ್ಕೆ ಕಾರಣ ಏನಿರಬಹುದು ಎಂದು ಪೊಲೀಸರು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ.

ಸದ್ಯ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ. ನಟಿಯ ಅಗಲಿಕೆಗೆ ಕೇರಳ ಸಿನಿಮಾ ಮತ್ತು ಕಿತುತೆರೆ ಕಲಾವಿದರು ಹಾಗೂ ಉದ್ಯಮ ಕಂಬನಿ ಮಿಡಿದಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು