CrimeNEWSದೇಶ-ವಿದೇಶಸಂಸ್ಕೃತಿ

ಗುಜರಾತ್‌ನಿಂದ ಚಾಮುಂಡಿ ಬೆಟ್ಟಕ್ಕೆ ಬಂದ ಬಸ್‌ನಲ್ಲಿ ಬೆಂಕಿ – ತಪ್ಪಿದ ಭಾರಿ ಅನಾಹುತ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚಾಮುಂಡಿಬೆಟ್ಟದ ಬಸ್‌ ನಿಲ್ದಾಣ ಸಮೀಪ 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿತು.

ಅರಮನೆ ನಗರಿ ಮೈಸೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಅವಘಡ ಸಂಭವಿಸಿದೆ. ನಾಡ ದೇವತೆ ಚಾಮುಂಡಿಯ ದರ್ಶನಕ್ಕೆ ಬಂದ ಭಕ್ತರಲ್ಲಿ  ಇದರಿಂದ ಕೆಲ ಕಾಲ ಆತಂಕ ಮೂಡಿತ್ತುತು. ಆದರೆ ದೇವಿಯ ಕೃಪೆ  ಮತ್ತು  ಚಾಲಕನ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದ್ದು, ನಿಟ್ಟುಸಿರು ಬಿಟ್ಟಿದ್ದಾರೆ.

ಗುಜರಾತ್‌ನಿಂದ ಪ್ರವಾಸಿಗರನ್ನು ಹೊತ್ತ ಬಸ್‌ ಚಾಮುಂಡಿಬೆಟ್ಟಕ್ಕೆ ಬಂದಿತ್ತು. ಈ ವೇಳೆ ಬೆಟ್ಟದ ಸಮೀಪದ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಡಿಸೇಲ್ ಸೋರಿಕೆಯಿಂದ ಬಸ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಲ್ಲದೆ ಚಾಲನೆಯಲ್ಲಿದ ಬಸ್‌ನ ಸೈಲೆನ್ಸರ್ ನಿಂದ ಹೊಗೆ ಬರಲಾರಂಭಿಸಿದೆ.

ಕೂಡಲೇ ಅದನ್ನು ಗಮನಿಸಿದ ಚಾಲಕ ಬೆಂಕಿಯ ಸಂಪರ್ಕದ ವೈರ್‌ಗಳನ್ನು ಕಟ್ ಮಾಡಿದ್ದಾರೆ. ಇತ್ತ ಪ್ರವಾಸಿಗರನ್ನು ತಕ್ಷಣವೇ ಬಸ್‌ನಿಂದ ಕೆಳಗಿಳಿಸಿದ್ದಾರೆ. ಪರಿಣಾಮ ಬಸ್‌ ಭಸ್ಮವಾಗುವುದು ತಪ್ಪಿದ್ದು ಇತ್ತ ಪ್ರಯಾಣಿಕರು ದೊಡ್ಡ ಅವಘಡದಿಂದ ಪಾರಾದಂತಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ