CrimeNEWSನಮ್ಮಜಿಲ್ಲೆ

ಗಣಿ ಅಧಿಕಾರಿ ಪ್ರತಿಮಾ ಕೊಲೆ ಆರೋಪಿ ಬಂಧನ- ಮಾಜಿ ಕಾರು ಚಾಲಕನಿಂದ ಕೃತ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ಹಿಂದೆ ತೆಗೆದಹಾಕಿದ್ದ ಕಾರು ಚಾಲಕನನ್ನು ಬಂಧಿಸಲಾಗಿದೆ.

ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಎಸ್ಕೇಪ್‌ಆಗಿ ಇವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಅಲ್ಲದೆ ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಕಳೆದ 4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದ. ಗುತ್ತಿಗೆ ಆಧಾರದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದ. ಅಪಘಾತದ ನಂತರ ಕಚೇರಿಯಲ್ಲೇ ಕಾರು ಬಿಟ್ಟು ತೆರಳಿದ್ದ.

ಇನ್ನು ಕಿರಣ್ ನಡವಳಿಕೆಯಿಂದ ಕೋಪಗೊಂಡಿದ್ದ ಪ್ರತಿಮಾ, 10 ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದರು. ಈ ವೇಳೆ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಗೋಗರೆದು ಬೇಡಿಕೊಂಡಿದ್ದ. ಆದರೆ ಪ್ರತಿಮಾ ಅವರು ಕಿರಣ್‍ನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಪ್ರತಿಮಾ ಮೇಲೆ ದ್ವೇಷಕಾರಿದ್ದದ್ದಾನೆ.

ಇತ್ತ ಅಕ್ರಮ ಗಣಿಗಾರಿಕೆ ನಡೆಯುವ ಸ್ಥಳಕ್ಕೆ ಪ್ರತಿಮಾ ರೇಡ್ ಹೋಗುವ ವಿಚಾರ ಲೀಕ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇತ್ತು. ಈ ಕಾರಣಕ್ಕೆ ಪ್ರತಿಮಾ ವಾರ್ನ್ ಕೂಡ ಮಾಡಿದ್ದರು. ಈ ವೇಳೆ ಬೈದಾಗ ತಪ್ಪಾಗಿದೆ ಕೆಲಸದಿಂದ ತೆಗೆಯಬೇಡಿ ಎಂದು ಕೇಳಿಕೊಂಡಿದ್ದ ಎಂದು ಹೇಳಲಾಗುತ್ತಿದೆ.

ಕೊಲೆ ದಿನವೂ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ದುಂಬಾಲು ಬಿದ್ದಿದ್ದನು. ಆದರೆ ಆಕೆ ಅದನ್ನು ತಿರಸ್ಕರಿಸಿದ್ದರಿಂದ ಶನಿವಾರ ಮನೆ ಬಳಿಯೇ ಕಾದು ಕುಳಿತು ಹೊಂಚು ಹಾಕಿ ಕೊಲೆ ಮಾಡಿ ಕಿರಣ್ ಪರಾರಿಯಾಗಿದ್ದ. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇಂದು ನ್ಯಾಯಾಧೀಶರ ಮುಂದೆ ಮುಂದೆ ಹಾಜರುಪಡಿಸಿ ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ