CrimeNEWSಬೆಂಗಳೂರು

ಗಣಿ, ಭೂ ವಿಜ್ಞಾನ ಇಲಾಖೆಯ   ಮಹಿಳಾ ಅಧಿಕಾರಿ ಕೊಲೆ: ಪ್ರೀ ಪ್ಲಾನ್  ಹತ್ಯೆ ಶಂಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಾಕು ಇರಿದು ಸರ್ಕಾರಿ ಅಧಿಕಾರಿಯನ್ನು ಹತ್ಯೆ ಮಾಡಿರುವ ಘಟನೆ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್​​ಮೆಂಟ್​ನಲ್ಲಿ ನಡೆದಿದೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿಯಾಗಿದ್ದ ಪ್ರತಿಮಾ  ಹತ್ಯೆಯಾದ ಅಧಿಕಾರಿ. ನಿನ್ನೆ ರಾತ್ರಿ 8.30ಕ್ಕೆ ಕೊಲೆಯಾಗಿದ್ದಾರೆ. ಆದರೆ, ಇಂದು ಬೆಳಗ್ಗೆ ಅಣ್ಣ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗುತ್ತಿದೆ.

ಪೂರ್ಣಿಮಾ ಶಿವಮೊಗ್ಗದ ತೀರ್ಥಹಳ್ಳಿ ಮೂಲದವರು. ಸದ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕಿಯಾಗಿದ್ದ ಅವರು, ಅಪಾರ್ಟ್​​ ಮೆಂಟ್​​ನಲ್ಲಿ ಒಬ್ಬರೆ ವಾಸವಿದ್ದರು. ಹೀಗಾಗಿ ಪ್ರತಿಮಾ ಅವರನ್ನು ಪ್ರೀ ಪ್ಲಾನ್ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಅಪಾರ್ಟ್​​ ಮೆಂಟ್​​ನಲ್ಲಿ ಪ್ರತಿಮಾ  ಒಬ್ಬರೇ ವಾಸ ಮಾಡುತ್ತಿದ್ದು, ಪತಿ ಮತ್ತು  ಪುತ್ರ ತೀರ್ಥಹಳ್ಳಿಯಲ್ಲಿ ನೆಲೆಸಿದ್ದಾರೆ. ಇನ್ನು ಇವರು ಕಚೇರಿಯ ಕೆಲಸ ಮುಗಿಸಿಕೊಂಡು ರಾತ್ರಿ  ಮನೆಗೆ ಬಂದಿದ್ದಾರೆ.  ಕಾರು ಚಾಲಕ ಅವರನ್ನು ಮನೆ ಬಳಿ ಬಿಟ್ಟು ಹೋದ ಬಳಿಕ ಘಟನೆ ನಡೆದಿದೆ ಎನ್ನಲಾಗಿದೆ.

ಇನ್ನು ರಾತ್ರಿ ಅಣ್ಣ ಕರೆ ಮಾಡಿದಾಗ ಪ್ರತಿಮಾ  ಕರೆ ಸ್ವೀಕರಿಸಿಲ್ಲ ಏನೋ ಆಯಾಸಗೊಂಡು ಮಲಗಿರಬೇಕು ಎಂದು ಸುಮ್ಮನಾಗಿ, ಬೆಳಗ್ಗೆ ಮನೆ ಬಳಿ ಬಂದು ನೋಡಿದ್ದಾರೆ. ಆಗ ಘಟನೆ ಬೆಳಕಿಗೆ ಬಂದಿದೆ.

ಇನ್ನು ಹತ್ಯೆಯಾಗಿರುವ ಮನೆಯಲ್ಲಿ ಯಾವುದೇ ವಸ್ತುಗಳು ಕಳವಾಗಿಲ್ಲ. ಮೇಲ್ನೋಟಕ್ಕೆ ಉದ್ದೇಶಪೂರ್ವಕವಾಗಿ ಈ ಕೊಲೆ ನಡೆದಿದೆ ಎಂಬ ಅನುಮಾನ ಮನೆಯವರಲ್ಲಿ ಹುಟ್ಟುಕೊಂಡಿದೆ. ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕುಟುಂಬಸ್ಥರಿಗೆ ಇಂದು ಬೆಳಗ್ಗೆ ಈ ವಿಚಾರ ಗೊತ್ತಾಗಿದ್ದು,  ಮೃತದೇಹದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಎಸಿಪಿ ಪವನ್, ಡಿಸಿಪಿ ರಾಹುಲ್ ಕುಮಾರ್ ಭೇಟಿ ನೀಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ