NEWSನಮ್ಮಜಿಲ್ಲೆನಮ್ಮರಾಜ್ಯ

ಚನ್ನಪಟ್ಟಣ: 2ಗಂಟೆ ಕಾದರೂ ಬಸ್‌ ಇಲ್ಲ ಎಂದು ನಿಲ್ದಾಣದಲ್ಲೇ ಪ್ರಯಾಣಿಕರ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಚನ್ನಪಟ್ಟಣ: ಬೆಂಗಳೂರಿಗೆ ತೆರಳಲು ಬಸ್‌ ಸಮಸ್ಯೆ ಇದೆ ಎಂದು ಆರೋಪಿಸಿ ಕೆಎಸ್‌ಆರ್‌ಟಿಸಿ ಸಂಸ್ಥೆ ವಿರುದ್ಧ ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ಬಸ್‌ ಬಿಡಿ ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ ಘಟನೆ ಚನ್ನಪಟ್ಟ ಬಸ್‌ ನಿಲ್ದಾಣದಲ್ಲಿ ಜರುಗಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಸ್ ನಿಲ್ದಾಲ್ಧಾಣದಲ್ಲಿ ಪ್ರತಿ ಭಾನುವಾರ ಇದೇ ಸಮಸ್ಯೆ ಆಗುತ್ತಿದೆ. ನಾವು ಸಂಬಂಧಪಟ್ಟ ನಿಲ್ದಾಣದ ನಿಯಂತ್ರಣಾಧಿಕಾರಿಗಳನ್ನು ಕೇಳಿದರೆ ಅವರು ಸ್ಪಂದಿಸುತ್ತಿಲ್ಲ ಎಂದು ಕುಪಿತಗೊಂಡ ಶಿವಲಿಂಗೇಗೌಡ ಸೇರಿ ಇತರ ಪ್ರಯಾಣಿಕರು ನಿಲ್ದಾಣದಲ್ಲೇ ಪ್ರತಿಭಟನೆ ಮಾಡಿದರು.

ನಾವು 2ಗಂಟೆಗಿಂತಲು ಹೆಚ್ಚು ಸಮಯ ಬಸ್‌ಗಾಗಿ ಕಾಯುತ್ತಿದ್ದೇವೆ ಆದರೆ ಬಸ್‌ಗಳು ಬರುತ್ತಿಲ್ಲ. ಇನ್ನು ಮೈಸೂರಿನಿಂದ ಬರುತ್ತಿರುವ ಬಸ್‌ಗಳು ತುಂಬಿದ್ದು, ಕಾಲಿಡುವುದಕ್ಕೂ ಜಾಗವಿಲ್ಲ. ಹೀಗಾಗಿ ಚನ್ನಪಟ್ಟಣದಿಂದ ಬಸ್‌ ವ್ಯವಸ್ಥೆ ಮಾಡಿಸಿ ಎಂದು ಕೇಳಿದರೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಇನ್ನು ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ನಿವಾರಿಸಿದರು ಎಂದು ಸಾರ್ವಜನಿಕರು ತಿಳಿಸಿದ್ದು, ಮತ್ತೆ ಮುಂದಿನ ಭಾನುವಾರ ಇದೇ ರೀತಿ ಆದರೆ, ನಮ್ಮ ಪ್ರತಿಭಟನೆ ಬೇರೆ ರೀತಿಯೇ ಇರುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ