NEWSನಮ್ಮಜಿಲ್ಲೆನಮ್ಮರಾಜ್ಯ

ಜ.6ರಿಂದ KSRTC ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಜಾರಿ: ನಿರ್ದೇಶಕರ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ 2025ರ ಜನವರಿ 6ರಿಂದ ಜಾರಿಗೆ ಬರಲಿದೆ ಎಂದು ಸಂಸ್ಥೆಯ ನಿರ್ದೇಶಕರು (ಸಿ&ಜಾ) ತಿಳಿಸಿದ್ದಾರೆ.

ಈ ಸಂಬಂಧ ಇಂದು (ಡಿ.30) ಆದೇಶ ಹೊರಡಿಸಿರುವ ನಿರ್ದೇಶಕರು ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನ “KSRTC Arogya” ಯೋಜನೆಗೆ ನೌಕರರ ವಂತಿಕೆಯನ್ನು 2024ರ ಡಿಸೆಂಬರ್‌ ತಿಂಗಳಿಂದಲೇ ಪ್ರತಿ ತಿಂಗಳು 650 ರೂ.ಗಳನ್ನು ಕಡಿತಗೊಳಿಸಬೇಕು ಎಂದು ಹೇಳಿದ್ದಾರೆ.

ನಿಗಮದಲ್ಲಿ ಹಾಲಿ ಇರುವ ವೈದ್ಯಕೀಯ ವೆಚ್ಚ ಮರುಪಾವತಿ ವ್ಯವಸ್ಥೆಯ ಜತೆಗೆ ನೌಕರರಿಂದ ಪ್ರತಿ ತಿಂಗಳು 650 ರೂ.ಗಳ ವಂತಿಕೆ ಪಡೆದು (Contributory Scheme) ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಯನ್ನು 06.01.2025 ರಿಂದ ಜಾರಿಗೊಳಿಸಲಾಗುತ್ತಿದೆ.

ಹೀಗಾಗಿ ಈ ಯೋಜನೆಗೆ ನಿಗಮದ ನೌಕರರಿಂದ ಮಾಸಿಕ ವಂತಿಕೆ ಪ್ರತಿ ತಿಂಗಳು 650 ರೂ.ಗಳನ್ನು ಪಡೆದು ಜಾರಿಗೊಳಿಸಲು ನಿಗಮದ ನೋಂದಾಯಿತ ಕಾರ್ಮಿಕ ಸಂಘಟನೆಗಳು ಲಿಖಿತವಾಗಿ ಒಪ್ಪಿಗೆ ಪತ್ರವನ್ನು ನೀಡಿವೆ ಎಂದು ತಿಳಿಸಿದ್ದಾರೆ.

ಇನ್ನು ಈ ಯೋಜನೆಯೂ ತರಬೇತಿ ನೌಕರರು, ನ್ಯಾಯಾಲಯದ ಆದೇಶದ ಮೇರೆಗೆ 17/ಬಿ ರಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಸರ್ಕಾರದ ಇತರೇ ಇಲಾಖೆಗಳು, ಇತರೇ ಸಾರಿಗೆ/ ನಿಗಮಗಳಿಂದ ಎರವಲು ಸೇವೆಯ ಮೇಲೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಸಿಗುವುದಿಲ್ಲ.

ಹೀಗಾಗಿ ಇವರನ್ನು ಹೊರತು ಪಡಿಸಿ, ಉಳಿದ ಎಲ್ಲ ನೌಕರರಿಂದ ಡಿಸೆಂಬರ್-2024ರ ವೇತನದಿಂದ ಮುಂದುವರಿದಂತೆ ಮಾಸಿಕ 650 ರೂ.ಗಳನ್ನು ಪ್ರತಿ ತಿಂಗಳು ಕಡಿತಗೊಳಿಸಲು ಸೂಕ್ತಾಧಿಕಾರಿಗಳು ಮಂಜೂರಾತಿ ನೀಡಿದ್ದಾರೆ. ಅದರಂತೆ ಅಗತ್ಯ ಕ್ರಮವಹಿಸಬೇಕು ಎಂದು ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೂ ತಿಳಿಸಿದ್ದಾರೆ.

ಇನ್ನು ಯೋಜನೆಗಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಸುತೋಲೆಯನ್ನು ಹೊರಡಿಸಲಾಗುವುದು ಎಂದಿರುವ ನಿರ್ದೇಶಕರು, ಈ ಸಂಬಂಧ ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರು ಕೇಂದ್ರ ಕಚೇರಿ, ಕರಾರಸಾ ನಿಗಮ ಹಾಗೂ ಎಲ್ಲ ಹಿರಿಯ/ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಾರ್ಯ ವ್ಯವಸ್ಥಾಪಕರು, ಕಾರ್ಯ ನಿರ್ವಾಹಕ ಅಭಿಯಂತರರಿಗೂ ಸೂಚನೆ ನೀಡಿ ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ