NEWSನಮ್ಮರಾಜ್ಯ

ಜನತಾ ದಾಸೋಹ ಆರಂಭಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ಹಸಿದವರಿಗೆ ಅನ್ನ ನೀಡಲು ಮುಂದಾದ ಜೆಡಿಎಸ್‌ ಮುಖಂಡರು

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ವಿಶ್ವಮಾರಿ ಕೊರೊನಾದಿಂದ ದೇಶದಲ್ಲಿ ಉಂಟಾಗಿರುವ ಲಾಕ್‌ಡೌನ್‌ನಿಂದ ಸಮಸ್ಯೆಗೆ ಸಿಲುಕಿರುವವರಿಗೆ ತುತ್ತಿನ ಚೀಲ ತುಂಬಿಸಲು ಮಾಜಿ ಮುಖ್ಯ ಮಂತ್ರಿ   ಎಚ್‌.ಡಿ. ಕುಮಾರಸ್ವಾಮಿ ಜನತಾ ದಾಸೋಹ ಕಾರ್ಯ ಆರಂಭಿಸಿದ್ದಾರೆ.

ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ನಿತ್ಯ ಆಹಾರ ನೀಡಲು  ಸಿದ್ಧವಾಗಿರುವ ಎಚ್‌ಡಿಕೆ ಜನತಾ ದಾಸೋಹದ ಮೂಲಕ ಹಸಿವು ನೀಗಿಸುತ್ತಿದ್ದಾರೆ. ಅಲ್ಲದೆ ಇದೇ ರೀತಿ ನಿಮ್ಮ ನಿಮ್ಮ ಕ್ಷೇತ್ರ ವ್ಯಾಪ್ತಿಗಳಲ್ಲಿ ಮಾಡಬೇಕು ಎಂದು ತಮ್ಮ ಪಕ್ಷದ ಶಾಸಕರಿಗೆ ಮತ್ತು ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ತಲಾ ಒಂದು ಸಾವಿರ ಮಂದಿಗೆ ಭೋಜನೆ ವ್ಯವಸ್ಥೆ ಮಾಡುವ ಗುರಿಯನ್ನು ಹೊಂದಲಾಗಿದ್ದು ಆರಂಭದಲ್ಲಿ ರಾಮನಗರ, ಚನ್ನಪಟ್ಟಣದಲ್ಲಿ ದಾಸೋಹವನ್ನು ನಡೆಸಲಾಗುತ್ತಿದೆ.

ಇನ್ನು ರಾಜ್ಯದಲ್ಲಿ ಕೊರೊನಾ ಹಾವಳಿಯಿಂದ ಉಂಟಾಗುತ್ತಿರುವ ಸಮಸ್ಯೆ ಸಮಗ್ರ ಮಾಹಿತಿ  ಪಡೆಯಲು ಕುಮಾರಸ್ವಾಮಿ ಅವರು ಮಂಡ್ಯ, ರಾಮನಗರ, ಚನ್ನಪಟ್ಟಣದ ಪಕ್ಷದ ಮುಖಂಡರ ಜತೆ ಸಮಾಲೋಚನಾಸಭೆಯನ್ನು ಕಳೆದ ಎರಡು ದಿನದ ಹಿಂದೆ ನಡೆಸಿದ್ದಾರೆ.

ಕೊರೊನಾ ವೈರಸ್‌ ವಿರುದ್ಧ ಸಮರದಲ್ಲಿ ಅನ್ನದಾತರ  ಸಂಕಷ್ಟವನ್ನು ಕಡೆಗಣಿಸದಂತೆ ರಾಜ್ಯ ಸರಕಾರವನ್ನು ಎಚ್ಚರಿಸಿರುವ ಕುಮಾರಸ್ವಾಮಿ ರೈತರಿಗೆ ಎಲ್ಲಾರೀತಿಯ ವ್ಯವಸ್ಥೆ ಮಾಡಿಕೊಡಬೇಕು. ಪ್ರಸ್ತುತ ಕಟಾವಿಗೆ ಬಂದಿರುವ ಫಸಲನ್ನು ಸೂಕ್ತ ಬೆಲೆಗೆ ಮಾರಾಟ ಮಾಡಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ರಾಮನಗರ ಜಿಲ್ಲೆಯ ನಿವಾಸಿಗಳಿಗೆ ನಿತ್ಯದ ಆಹಾರ ಸಾಮಗ್ರಿಗಳನ್ನು ಸರಬರಾಜು ಮಾಡಲು  ಸಹ ಕುಮಾರಸ್ವಾಮಿ ನಿರ್ಧರಿಸಿದ್ದು, ಅದಕ್ಕಾಗಿ ಮಾಹಿತಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

 

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!