CrimeNEWSನಮ್ಮಜಿಲ್ಲೆಬೆಂಗಳೂರು

ಜಾಲತಾಣದಲ್ಲಿ ಪರಿಚಯವಾದವನ ಜತೆ ಲವ್‌- ಬೆದರಿಸಿ ಸ್ನೇಹಿತರೊಂದಿಗೆ ಅತ್ಯಾಚಾರ ಎಸಗಿದ ಪ್ರಿಯತಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾದ ಯುವಕನ ಪ್ರೀತಿಯ ಬಲೆಗೆ ಬಿದ್ದ ಯುವತಿಯನ್ನು ಬೆದರಿಸಿ ಆತ ಅತ್ಯಾಚಾರ ವೆಸಗಿರುರುವ ಘಟನೆ ನಗರದಲ್ಲಿ ನಡೆದಿದೆ.

ಆಂಡಿ ಎಂಬ ಯುವಕನೇ ತನ್ನ ಪ್ರೀತಿಯ ಬಲೆಗೆ ಬಿದ್ದ ಯುವತಿಯೊಂದಿಗೆ ಪ್ರೀತಿ ಹೆಸರಲ್ಲಿ ಸುತ್ತಾಡಿ, ಆ ನಂತರ ಕೆಲ ಖಾಸಗಿ ಫೋಟೊಗಳನ್ನು ಸೆರೆಹಿಡಿದುಕೊಂಡಿದ್ದಾನೆ. ಬಳಿಕ ಆ ಫೋಟೋಗಳನ್ನು ಬಳಸಿಕೊಂಡು ಆಕೆಗೆ ಬೆದರಿಕೆ ಹಾಕಿದ್ದಾನೆ. ಅದರಿಂದ ಆತಂಕಗೊಂಡ ಯುವತಿ ಆತನಿಂದ ದೂರವಾಗಿದ್ದಾಳೆ.

ಆದರೆ ಅಷ್ಟಕ್ಕೆ ಸುಮ್ಮನಾಗದ ಆ್ಯಂಡಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವುದಾಗಿ ಬೆದರಿಕೆ ಹಾಕಿ ಅತ್ಯಾಚಾರವೆಸಗಿದ್ದಾನೆ. ಈ ವೇಳೆ ಆಕೆಗೆ ಗೊತ್ತಿಲ್ಲದಂತೆ ಕಿರಾತಕ ಮೊಬೈಲ್​​​ನಲ್ಲಿ ವಿಡಿಯೋ ಸಹ ಮಾಡಿಕೊಂಡಿದ್ದಾನೆ. ಇದೇ ರೀತಿ ಹಲವು ಬಾರಿ ಬೆದರಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಆರೋಪವಿದೆ.

ಇನ್ನು ತನ್ನನ್ನು ಪ್ರೀತಿಸಿದ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೀಚಕ ಬಳಿಕ ಆತನ ಗೆಳೆಯರೊಂದಿಗೆ ಸೇರಿ ಆಕೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಆ್ಯಂಡಿ ಗೆಳೆಯರೂ ಬೆದರಿಸಿ ಕರೆಸಿಕೊಂಡು ಅತ್ಯಾಚಾರ ಮಾಡಿದ್ದು, ಆ ಬಳಿಕ ಆಂಡಿ ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾನೆ.

ಆ ವಿಡಿಯೋಗಳು ವೈರಲ್ ಆಗಿವೆ. ಇದಾದ ಬಳಿಕ ನೊಂದ ಯುವತಿಯಿಂದ ಪೊಲೀಸ್ ಠಾಣೆಯಲ್ಲಿ ಆಂಡಿ ಜಾರ್ಜ್, ಸಂತೋಷ್, ಶಶಿ ಎಂಬುವರ ವಿರುದ್ಧ ದೂರು ನೀಡಿದ್ದು, ದೂರಿನ ಮೇರೆಗೆ ಈ ಮೂವರನ್ನು ಕೋಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಆರೋಪಿಗಳ ಬಳಿ ಇದ್ದ ಮೊಬೈಲ್, ಪೆನ್ ಡ್ರೈವ್ ಸೇರಿದಂತೆ ಟೆಕ್ನಿಕಲ್ ಸಾಕ್ಷಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಪೊಲೀಸರು.

ಆರೋಪಿ ಆಂಡಿ ಖಾಸಗಿ ಶಾಲೆಯ ಡ್ಯಾನ್ಸಿಂಗ್ ಟೀಚರ್ ಆಗಿದ್ದು, ಇದೇ ಮಾದರಿ ಕೃತ್ಯಗಳನ್ನು ಬೇರೆಡೆ ನಡೆಸಿದ್ದಾನೆ ಎಂಬ ಅನುಮಾನವಿದ್ದು ಆ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಮೇಲ್ನೋಟಕ್ಕೆ ಮಾತ್ರ ಇದೊಂದೇ ಪ್ರಕರಣದಲ್ಲಿ ಭಾಗಿಯಾಗಿರೋದು ಪತ್ತೆಯಾಗಿದೆ. ಸದ್ಯ ಯುವತಿ ಮೂವರ ವಿರುದ್ಧ ಪ್ರತ್ಯೇಕವಾಗಿ ಅತ್ಯಾಚಾರ ಪ್ರಕರಣ ದಾಖಲು ಮಾಡಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು