ಕ್ರೀಡೆ

ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಕಮ್‍ಬ್ಯಾಕ್ ಸಾಧ್ಯತೆಗಳೇ ಇಲ್ಲ: ವೀರು

ವಿಜಯಪಥ ಸಮಗ್ರ ಸುದ್ದಿ

ಅಹಮದಾಬಾದ್:  ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಕಮ್‍ಬ್ಯಾಕ್ ಮಾಡುತ್ತಾರೆ ಅಂತ ಅಭಿಮಾನಿ ಹೊಂದಿದ್ದ ನಿರೀಕ್ಷೆ ಫಲಿಸಲು ಸಾಧ್ಯತೆಗಳೇ ಇಲ್ಲ ಎಂದು ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ಅಹಮದಾಬಾದ್‍ನಲ್ಲಿ ಮಾತನಾಡಿದ ಅವರು, ಕೆ.ಎಲ್.ರಾಹುಲ್ ಹಾಗೂ ರಿಷಬ್ ಪಂತ್ ವಿಕೆಟ್ ಕೀಪರ್ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಕೆ.ಎಲ್.ರಾಹುಲ್ ಕೂಡ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ಅವರನ್ನು ತಂಡದಿಂದ ಹೊರಹಾಕುವುದು ಕಷ್ಟ. ಧೋನಿ ಏಕದಿನ ವಿಶ್ವಕಪ್ ಸೆಮಿಫೈನಲ್ ಸೋಲಿನ ನಂತರ ಯಾವುದೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ ಎಂದು ತಿಳಿಸಿದರು.

ನಾನು ರಾಜಕೀಯಕ್ಕೆ ಕಾಲಿಡುವುದಿಲ್ಲ. ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್ ಸಂಸದರಾಗಿದ್ದಾರೆ, ಅಷ್ಟು ಸಾಕು ಎಂದು ಸೆಹ್ವಾಗ್ ಮಧ್ಯಮದವರ ಪ್ರಶ್ನೆಯೊದಕ್ಕೆ ಉತ್ತರ ನೀಡದರು.

ಐಪಿಎಲ್‍ನಲ್ಲಿ ಮಿಂಚಿದರೆ, ಉತ್ತಮ ಪ್ರದರ್ಶನ ನೀಡಿದರೆ ಐಸಿಸಿ ಟಿ20 ವಿಶ್ವಕಪ್‍ಗೆ ಧೋನಿ ಮರಳುತ್ತಾರೆ ಎನ್ನಲಾಗುತ್ತಿತ್ತು. ಆದರೆ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಐಪಿಎಲ್ ರದ್ದಾಗುವ ಸಾಧ್ಯತೆ ಹೆಚ್ಚಾಗುತ್ತಿದೆ. ಈ ನಡುವೆ ಮತ್ತೆ ತಂಡಕ್ಕೆ ಮರಳುವರೆ ಎಂಬ ಅಭಿಮಾನಿಗಳ ನಿರೀಕ್ಷೆಗೆ ಸೆಹ್ವಾಗ್‌ ಆ ಸಾಧ್ಯತೆ ಕಡಿಮೆ ಎಂದು ತಿಳಿಸಿದ್ದಾರೆ.

ಭಾರತ 2007ರಲ್ಲಿ ಚೊಚ್ಚಲ ಟಿ20 ವಿಶ್ವಪಕ್ ಹಾಗೂ 2011ರಲ್ಲಿ ಏಕದಿನ ವಿಶ್ವಕಪ್‍ಗಳನ್ನು ಧೋನಿ ನಾಯಕತ್ವದಲ್ಲಿ ಗೆದ್ದು ಬೀಗಿತ್ತು. ಆದರೆ ಈಗ ಅವರಿಗೆ ಕಮ್‍ಬ್ಯಾಗ್ ಸಾಧ್ಯತೆಗಳೇ ಕಡಿಮೆ ಎಂದು ಸೆಹ್ವಾಗ್ ಹೇಳಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ