NEWSಸಿನಿಪಥ

ಟೊವಿನೋ ಥಾಮಸ್ ಸಿನಿಮಾ ವಿತರಿಸಲಿದೆ ಹೊಂಬಾಳೆ ಫಿಲ್ಮ್!

ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರ

ವಿಜಯಪಥ ಸಮಗ್ರ ಸುದ್ದಿ

ಮಿನ್ನಲ್ ಮುರಳಿ’ ಮತ್ತು ‘2018 – ಎವ್ರಿಒನ್​​ ಈಸ್ ಎ ಹೀರೋ’ ಚಿತ್ರಗಳ ಮೂಲಕ ರಾಷ್ಟ್ರವ್ಯಾಪಿ ಗಮನ ಸೆಳೆದಿರುವ ಮಲೆಯಾಳಂ ನಟ ಟೊವಿನೋ ಥಾಮಸ್.‌ ಸದಾ ವಿಭಿನ್ನ ಕಥೆ ಆಯ್ಕೆ ಮಾಡಿಕೊಳ್ಳುವ ಜನಪ್ರಿಯ ನಟನೀಗ “ಎಆರ್​​ಎಂ​​” (Ajayante Randam Moshanam /ಅಜಯಂತೇ ರಂದಮ್ ಮೋಷನಂ) ಎಂಬ ಫ್ಯಾಂಟಸಿ ಪ್ಯಾನ್ ಇಂಡಿಯಾ ಚಿತ್ರದೊಂದಿಗೆ ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ.

ಜಿತಿನ್ ಲಾಲ್ ನಿರ್ದೇಶನದ ಚೊಚ್ಚಲ ಚಿತ್ರ. ಸಿನಿಮಾ ಸಂಪೂರ್ಣವಾಗಿ 3ಡಿಯಲ್ಲಿ ತಯಾರಾಗಿದೆ. ಮಲಯಾಳಂ ಇತಿಹಾಸದಲ್ಲೇ ತಾಂತ್ರಿಕ ವಿಷಯದಲ್ಲಿ ಶ್ರೀಮಂತ ಚಿತ್ರಗಳಲ್ಲಿ ಒಂದಾಗಿದೆ. ಈಗಾಗಲೇ ಬಿಡುಗಡೆಯಾಗಿ ಟ್ರೇಲರ್ ಚಿತ್ರದ ಸುತ್ತಲಿನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ.

ಮಹಿಳೆಯೋರ್ವರು ಕಥೆಯನ್ನು ವಿವರಿಸುತ್ತಾರೆ. ಹಿಂಸಾಚಾರ ಮತ್ತು ನಾಯಕನ ಪ್ರವೇಶವನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ. ಎಆರ್​​ಎಂ ಭರ್ಜರಿ ಆ್ಯಕ್ಷನ್​ ಸೀನ್​ಗಳೊಂದಿಗೆ ಅದ್ಭುತ ಸಿನಿಮೀಯ ಅನುಭವ ನೀಡಲಿದೆ ಎಂಬ ಸುಳಿವನ್ನು ಈ ಟ್ರೇಲರ್​​ ಕೊಟ್ಟಿದೆ.

ಟೊವಿನೋ ಥಾಮಸ್​​​ ಮೂರು ವಿಭಿನ್ನ ಪಾತ್ರಗಳನ್ನು ಚಿತ್ರಿಸಿದ್ದಾರೆ. ಮಣಿಯನ್, ಕುಂಜಿಕ್ಕೆಲು ಮತ್ತು ಅಜಯನ್ ಎಂಬ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭೂಮಿಯ ಸಂಪತ್ತನ್ನು ರಕ್ಷಿಸುವ ಹೋರಾಟವಿದೆ. ಕೇರಳದ ಶ್ರೀಮಂತ ಸಂಸ್ಕೃತಿಯನ್ನು ಪ್ರದರ್ಶಿಸುತ್ತದೆ. ಒಂದು ಬಲವಾದ ಕಥೆಯೊಂದಿಗೆ ದೃಶ್ಯ ಚಮತ್ಕಾರವಿರಲಿದೆ ಎಂಬ ಭರವಸೆ ನೀಡಿದೆ.

ಎಆರ್​​ಎಂ​​ ಟೊವಿನೋ ಥಾಮಸ್ ಅವರ 50ನೇ ಚಿತ್ರವಾಗಿದ್ದು, ಟ್ರೇಲರ್​ನಿಂದ ಸಾಕಷ್ಟು ಕುತೂಹಲ ಹುಟ್ಟಿಸಿದೆ‌. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುವ ನಿರೀಕ್ಷೆಯಿದೆ. ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್‌ ನಿರ್ವಹಿಸಲು ನಟ ಕಳರಿಪಯಟ್ಟುವಿನ ವ್ಯಾಪಕ ತರಬೇತಿ ಪಡೆದಿದ್ದರು. ಕಾಂತಾರ ಖ್ಯಾತಿಯ ವಿಕ್ರಮ್ ಮೂರ್ ಮತ್ತು ಫೀನಿಕ್ಸ್ ಪ್ರಭು ಸ್ಟಂಟ್ಸ್ ಸಂಯೋಜಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು