NEWS

ಡಿ.23 ರಂದು ವಿಶ್ವ ರೈತ ದಿನಾಚರಣೆ ಅಂಗವಾಗಿ ಧಾರವಾಡದಲ್ಲಿ ರೈತ ಸಮಾವೇಶ: ದೇವರಾಜ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಇದೇ ಡಿ.23 ರಂದು ಧಾರವಾಡದ ಹಳಿಯಾಳ ರಸ್ತೆಯಲ್ಲಿರುವ ಅಕ್ಕಮಹಾದೇವಿ ಆಶ್ರಮದಲ್ಲಿ ಬೆಳಗ್ಗೆ 11 ಗಂಟೆಗೆ ವಿಶ್ವರೈತ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ರೈತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ತಿಳಿಸಿದ್ದಾರೆ.

ಅಂದು ಸ್ವಾಭಿಮಾನಿ ರೈತರ ಪಡೆಯೊಂದಿಗೆ ಸಮಾವೇಶದ ಜತೆಗೆ ವಿಶ್ವರೈತ ದಿನಾಚರಣೆ ಮಾಡುತ್ತಿದ್ದೇವೆ. ಕಳೆದ ಬಾರಿ ಮೈಸೂರಿನಲ್ಲಿ ಆಚ ರಿಸಲಾಗಿತ್ತು ಈ ವರ್ಷ ಧಾರವಾಡದಲ್ಲಿ ಆಚರಿಸುತ್ತಿದ್ದು ಈ ಸಮಾವೇಶದಲ್ಲಿ ರೈತರಿಗಾಗಿ ದುಡಿಯುವ ಹಾಗೂ ದೇಶದ ಅನ್ನಕ್ಕಾಗಿ ಅವಿರತವಾಗಿ ದುಡಿಯುತ್ತಿರುವ ರೈತರನ್ನು ಗುರುತಿಸಿ ಕಾಯಕ ಯೋಗಿ ಪುರಸ್ಕಾರ ನೀಡಿ ಗೌರವಿಸುವ ಕಾರ್ಯವನ್ನು ಸಮಾವೇಶದಲ್ಲಿ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ದೆಹಲಿ ರೈತರ ಹೋರಾಟದಲ್ಲಿ ಒಂದು ವರ್ಷ ಕಾಲ ನಿರಂತರ ಹೋರಾಟ ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ಮುಖಂಡ ಪಂಜಾಬಿನ ಜಗಜಿತ್ ಸಿಂಗ್ ಧಲೇವಾಲ ಈ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಸಮಾವೇಶದ ಅಧ್ಯಕ್ಷತೆಯನ್ನು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ವಹಿಸಲಿದ್ದಾರೆ.

ಕಬ್ಬಿನ ಉತ್ಪಾದನೆ ಹೆಚ್ಚಿಸುವ ತಂತ್ರ ಜ್ಞಾನದ ಬಗ್ಗೆ ಒಂದು ಎಕರೆಗೆ 160 ಟನ್ ಕಬ್ಬು ಬೆಳೆಯುತ್ತಿರುವ ಮಹಾರಾಷ್ಟ್ರದ ಕೃಷಿ ರತ್ನ ಡಾ. ಸಂಜು ಮಾನೆ ಅವರು ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಕಬ್ಬಿನಿಂದ ಬರುವ ಎಥನಾಲ್ ಉತ್ಪಾದನೆ ಹಾಗೂ ಬಳಕೆ ಬಗ್ಗೆ ಬೆಂಗಳೂರಿನ ಜಿಕೆವಿಕೆಯ ಪರಿಣಿತರಾದ ಡಾ. ಹರಿಣಿಕುಮಾರ್ ರೈತರಿಗೆ ಮಾಹಿತಿ ನೀಡಿಲಿದ್ದಾರೆ.

ರೈತ ಚಳವಳಿಯ ಮಹತ್ವ ಕುರಿತು ಮಾತನಾಡಲು ರೈತಪರ ಚಿಂತಕರು ,ಕೃಷಿ ಸಾಹಿತಿಗಳು ಆಗಮಿಸಲಿದ್ದಾರೆ. ಹೀಗಾಗಿ ಈ ಸಮಾವೇಶಕ್ಕೆ ರೈತರು ಸ್ವಯಂ ಪ್ರೇರಿತರಾಗಿ ಸಹಸ್ರಾರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಬೇಕೆಂದು ದೇವರಾಜ್‌ ಮನವಿ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ